ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರಲಿರುವ ಡಿ ಸಿ ಗೌರಿಶಂಕರ್, ದಾಸರಹಳ್ಳಿ ಮಂಜುನಾಥ್

Date:

Advertisements
  • ಬುಧವಾರ (ನ.15ರಂದು) ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಲಿದ್ದಾರೆ
  • ಮುದ್ದಹನುಮೇಗೌಡ ಕಾಂಗ್ರೆಸ್‌ ಸೇರುವ ಬಗ್ಗೆ ಚರ್ಚೆ ನಡೆದಿದೆ: ಕೆ ರಾಜಣ್ಣ

ಮಾಜಿ ಶಾಸಕರಾದ ಡಿ ಸಿ ಗೌರಿಶಂಕರ್ ಮತ್ತು ದಾಸರಹಳ್ಳಿಯ ಮಂಜುನಾಥ್ ಅವರು ಜೆಡಿಎಸ್‌ ತೊರೆದು ಬುಧವಾರ (ನ.15) ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಲಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ. ಮಾಜಿ ಶಾಸಕರ ಜೊತೆಯಲ್ಲಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಮಾಜಿ ಶಾಸಕ ಗೌರಿಶಂಕರ್ ತುಮಕೂರು‌ ಮತ್ತು ನೆಲಮಂಗಲ ಭಾಗದಲ್ಲಿ ತಮ್ಮದೇ ಆದ ಹಿಡಿತ ಸಾಧಿಸಿದ್ದಾರೆ. ಇನ್ನು ಮಂಜುನಾಥ್ ಸಹ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ವರ್ಚಸ್ಸು ಹೊಂದಿದ್ದಾರೆ.

Advertisements

ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ಗೌರಿಶಂಕರ್ ಮತ್ತು ಮಂಜುನಾಥ್ ಮನವೊಲಿಕೆಗೆ ಸಾಕಷ್ಟು ಪ್ರಯತ್ನಿಸಿದ್ದರು. ಆದರೆ ಅಂತಿಮವಾಗಿ ಕಾಂಗ್ರೆಸ್ ಕರೆತರುವಲ್ಲಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ.

ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ: ಎಚ್‌ಡಿಕೆ

ಜೆಡಿಎಸ್‌ ನಾಯಕರ ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ, ಮಾಜಿ ಶಾಸಕರಾದ ಗೌರಿಶಂಕರ್​, ಮಂಜುನಾಥ್ ಕಾಂಗ್ರೆಸ್ ಸೇರುವ ವಿಚಾರ ಹಳೆಯದು. ನನಗೇನೂ ಆಶ್ಚರ್ಯ ​ಆಗಲ್ಲ. ಗೌರಿಶಂಕರ್​, ಮಂಜುನಾಥ್ ಕರೆದು ಎರಡು ಬಾರಿ ಮಾತನಾಡಿದ್ದೇನೆ. ಅವರಿಗೆ ಅನುಕೂಲ ಆಗುವ ಕಡೆ ಹೋಗಿದ್ದಾರೆ. ನಮಗೆ ಯಾವುದೇ ತೊಂದರೆ ಇಲ್ಲ. ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿದು ಉಳಿದ ಮಣ್ಣಿನ ಹಣತೆಯಲ್ಲಿ ಎಣ್ಣೆ ಹೆಕ್ಕುವ ಬಡವರು ಮತ್ತು ವಿಶ್ವಗುರು

ಮತ್ತಷ್ಟು ಬದಲಾವಣೆ: ಕೆ ಎನ್‌ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ, ಮಾಜಿ ಶಾಸಕ ಡಿ ಸಿ ಗೌರಿಶಂಕರ್ ಅವರು ಕಾಂಗ್ರೆಸ್‌ಗೆ ಬರುವ ವಿಚಾರ ಚರ್ಚೆ ನಡೆದಿದೆ ಸಹಕಾರ ಸಚಿವ ಕೆ ಎನ್ ರಾಜಣ್ಣ ತಿಳಿಸಿದರು.

ತುಮಕೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಐದು ರಾಜ್ಯಗಳ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಬದಲಾವಣೆ ಸಾಧ್ಯತೆ” ಎಂದರು.

ಮಾಜಿ ಸಚಿವ ವಿ ಸೋಮಣ್ಣ ಕಾಂಗ್ರೆಸ್ ಸೇರುತ್ತಾರಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಡಿ.6ರಂದು ಸಿದ್ಧಗಂಗಾ ಮಠದಲ್ಲಿ ಸೋಮಣ್ಣ ಅವರು ದೊಡ್ಡ ಕಾರ್ಯಕ್ರಮ ಮಾಡುತ್ತಿದ್ದಾರೆ. ಅದಕ್ಕೆ ನನ್ನನ್ನೂ ಆಹ್ವಾನಿಸಿದ್ದಾರೆ. ಅಧಿವೇಶನ ಇರುವುದರಿಂದ ಬಿಡುವು ಮಾಡಿಕೊಂಡು ಬರಲು ಪ್ರಯತ್ನಿಸುವೆ. ಉಳಿದ ವಿಚಾರ ಗೊತ್ತಿಲ್ಲ” ಎಂದರು.

“ನಾನು ಸಹ ಈ ಬಾರಿ ಲೋಕಸಭೆಗೆ ಸ್ಪರ್ಧಿಸಲು ಇಚ್ಛಿಸಿದ್ದೇನೆ. ಹೈಕಮಾಂಡ್ ಒಪ್ಪಿ ಟಿಕೇಟ್ ನೀಡಿದರೆ ಸ್ಪರ್ಧಿಸುತ್ತೇನೆ. ಇಲ್ಲಿವರೆಗೂ ರಾಜ್ಯ ರಾಜಕಾರಣದ ಅನೇಕ ಮಜುಲುಗಳ ಅನುಭವವಾಗಿದೆ, ಅನೇಕ ಸ್ಥಾನಮಾನಗಳು ದೊರೆತಿವೆ. ಇನ್ನು ಲೋಕಸಭೆಗೆ ಒಮ್ಮೆ ಕಾಲಿರಿಸುವ ಉಮೇದು ಇದೆ. ಇದಕ್ಕೆ ಪೂರಕವಾಗಿ ವರಿಷ್ಠರು ಒಪ್ಪಿ ಟಿಕೆಟ್‌ ನೀಡುವುದಾದರೆ ಸ್ಪರ್ಧಿಸುವೆ” ಎಂದು ಇದೇ ವೇಳೆ ಇಂಗಿತ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X