ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ: ಸ್ಥಳದಲ್ಲೇ ಸೂಚನೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

“ಎಂದಿನಿಂದ ಬಸ್ ವ್ಯವಸ್ಥೆ ಮಾಡುತ್ತೀರಾ? ಸೋಮವಾರದಿಂದಲೇ ಈ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಆಗಬೇಕು..” ಇದು ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಬಸ್ ವ್ಯವಸ್ಥೆ ಇಲ್ಲ ಎಂಬ ವಿದ್ಯಾರ್ಥಿನಿಯರ ಮನವಿಗೆ ಸ್ಪಂದಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ ಪರಿ.

ಬೇವೂರು ಮತ್ತು ತಿಟ್ಟಮಾರನಹಳ್ಳಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಅರ್ಜಿಗಳನ್ನು ಸ್ವೀಕರಿಸಿ ಪರಿಹಾರ ನೀಡುವ ಭರವಸೆ ನೀಡಿದರು.

ಸಿದ್ದರಾಮೇಶ್ವರ ಕಾಲೇಜು ಹಾಗೂ ಇತರೆ ಸರ್ಕಾರಿ ಶಾಲೆಗಳ 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು “ಸರ್ ನಮಗೆ ಸಮಯಕ್ಕೆ ಸರಿಯಾಗಿ ಬಸ್ ಇಲ್ಲ. ಚನ್ನಪಟ್ಟಣದಿಂದ ಮಲ್ಲನಕುಪ್ಪೆಗೆ ಪ್ರತಿದಿನ 9 ಗಂಟೆಗೆ ತಲುಪುವಂತೆ ಬಸ್ ವ್ಯವಸ್ಥೆ ಕಲ್ಪಿಸಿ” ಎಂದು ಮನವಿ ಮಾಡಿದರು.

Advertisements

ಮನವಿಗೆ ಸ್ಪಂದಿಸಿದ ಶಿವಕುಮಾರ್ ಅವರು, “ನಮ್ಮ ಹೆಣ್ಣು ಮಕ್ಕಳು ಧೈರ್ಯ, ಓದುವ ಛಲದಿಂದ ಇಲ್ಲಿಯವರೆಗೂ ಬಂದಿದ್ದಾರೆ. ನಿಮ್ಮ ಅಧಿಕಾರಿಗೆ ಹೇಳಿ” ಎಂದು ಪಕ್ಕದಲ್ಲಿದ್ದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರಿಗೆ ಹೇಳಿದರು. ಆಗ ಕೆಎಸ್ ಆರ್ ಟಿಸಿ ಅಧಿಕಾರಿಯನ್ನು ಕರೆದ ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರು “ಸೋಮವಾರವೇ ಬಸ್ ಬರಬೇಕು. ಈ ವಿದ್ಯಾರ್ಥಿನಿಯರ ಸಮಸ್ಯೆ ಬಗೆಹರಿಸಬೇಕು” ಎಂದು ಸ್ಪಷ್ಟ ಸೂಚನೆ ನೀಡಿದರು.

ಎರಡು ಪಂಚಾಯತಿಗಳು ಸೇರಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ನಾಗರೀಕರು ಸಲ್ಲಿಸಿದರು. ಬಗರ್ ಹುಕುಂ ಜಮೀನು, ನಿವೇಶನ, ಉತ್ತಮ ರಸ್ತೆ, ಬಸ್ ವ್ಯವಸ್ಥೆಗಾಗಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X