ರಾಜಕೀಯ ಬಿಟ್ಟು ಕೇಂದ್ರದಿಂದ ಮೇಕೆದಾಟು ಯೋಜನೆಗೆ ಬಿಜೆಪಿ ಅನುಮತಿ ಕೊಡಿಸಲಿ: ಡಿ ಕೆ ಶಿವಕುಮಾರ್

Date:

Advertisements

“ಬರ ಪರಿಸ್ಥಿತಿಯನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿರುವುದನ್ನು ಸಹಿಸಲಾಗದೇ ಬಿಜೆಪಿ ಸುಳ್ಳು ಪ್ರಚಾರಕ್ಕೆ ಮುಂದಾಗಿದೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡೋದು ಬಿಟ್ಟು ಕೇಂದ್ರ ಸರ್ಕಾರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸವಾಲು ಹಾಕಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಬಿಡಬ್ಲ್ಯೂಎಸ್ಎಸ್‌ಬಿ ವತಿಯಿಂದ ಆರಂಭಿಸಿರುವ “ನೀರು ಉಳಿಸಿ ಬೆಂಗಳೂರು ಬೆಳಸಿ” ಅಭಿಯಾನಕ್ಕೆ ಚಾಲನೆ ನೀಡಿದ ಶಿವಕುಮಾರ್ ಅವರು, ಅಂತರ್ಜಲ, ಜಲಸಂರಕ್ಷಕ, ಜಲಮಿತ್ರ, ಜಲಸ್ನೇಹಿ ಆ್ಯಪ್‌ಗಳನ್ನು ಬಿಡುಗಡೆ ಮಾಡಿದರು.

ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾವೇರಿ ನೀರು ಪೂರೈಕೆ ಪ್ರದೇಶಗಳಲ್ಲಿ ನೀರಿನ ಅಭಾವವಿಲ್ಲ. ಕೊಳವೆ ಬಾವಿಗಳು ಬತ್ತಿರುವ ಕಡೆಗಳಲ್ಲಿ ಮಾತ್ರ ಅಭಾವ ಹೆಚ್ಚಾಗಿದೆ. ಆದರೆ ಈ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ ಎಂಬುದು ಸುಳ್ಳು. ನಮ್ಮಲ್ಲಿ ನೀರೇ ಇಲ್ಲದಿರುವಾಗ ತಮಿಳುನಾಡಿಗೆ ಎಲ್ಲಿಂದ ನೀರು ಬಿಡಲು ಸಾಧ್ಯ? ಮೇಲಾಗಿ ಅವರು ನೀರು ಕೇಳಿಯೇ ಇಲ್ಲ. ಬಿಜೆಪಿಯದು ಕೇವಲ ರಾಜಕೀಯ ಗಿಮಿಕ್. ರಾಜ್ಯ ಬಿಜೆಪಿ ನಾಯಕರು ರಾಜಕೀಯ ಬಿಟ್ಟು ಮೇಕೆದಾಟು ಯೋಜನೆಗೆ ಕೇಂದ್ರ ಬಿಜೆಪಿ ಸರ್ಕಾರದಿಂದ ಅನುಮತಿ ಕೊಡಿಸಲಿ” ಎಂದು ತಿಳಿಸಿದರು.

Advertisements

ಮಂಜುನಾಥ್ ಅವರನ್ನು ಗೌರವಿಸುತ್ತೇವೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಾ. ಸಿ. ಎನ್. ಮಂಜುನಾಥ್ ಅವರ ಸ್ಪರ್ಧೆ ವಿಚಾರವಾಗಿ ಕೇಳಿದಾಗ, “ನಾವು ಮಂಜುನಾಥ್ ಅವರನ್ನು ಗೌರವಿಸುತ್ತೇವೆ. ಅವರು ಉತ್ತಮ ವೈದ್ಯರು. ಅವರಿಗೆ ನಾವು ಬೆಂಬಲ ನೀಡಿದ್ದೆವು. ಆದರೆ ರಾಜಕೀಯವೇ ಬೇರೆ. ನನ್ನ ಸಹೋದರ ಈ ಕ್ಷೇತ್ರದಲ್ಲಿ ಸಂಸದನ ರೀತಿ ಕೆಲಸ ಮಾಡುತ್ತಿಲ್ಲ, ಗ್ರಾಮ ಪಂಚಾಯ್ತಿ ಸದಸ್ಯನಂತೆ ಜನರ ಮಧ್ಯೆ ನಿಂತು ಕೆಲಸ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ಬಿಜೆಪಿ ಪಟ್ಟಿಯಲ್ಲಿ 6 ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದೆ ಎಂದು ಕೇಳಿದಾಗ, “ನನಗೆ ಬಂದಿರುವ ಮಾಹಿತಿ ಪ್ರಕಾರ 10 ಹಾಲಿ ಸಂಸದರಿಗೆ ಟಿಕೆಟ್ ತಪ್ಪಲಿದೆ. ನಾನು ಅದಕ್ಕೆ ಬದ್ದವಾಗಿದ್ದೇನೆ. ಅದು ಅವರ ಪಕ್ಷದ ವಿಚಾರ. ಅವರು ಏನಾದರೂ ಮಾಡಿಕೊಳ್ಳಲಿ” ಎಂದು ತಿಳಿಸಿದರು.

ಟಿಕೆಟ್ ತಪ್ಪಿರುವವರಲ್ಲಿ ಯಾರಾದರೂ ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಎಂದು ಕೇಳಿದಾಗ, “ಈ ಸಮಯದಲ್ಲಿ ಇದನ್ನು ಬಿಡಿಸಿ ಹೇಳುವುದಿಲ್ಲ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X