ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸುವುದು ಮೊದಲೇ ಗೊತ್ತಿದ್ದಿದ್ದರೆ ಸುಲಭವಾಗುತ್ತಿತ್ತು: ಡಿ ಕೆ ಶಿವಕುಮಾರ್

Date:

Advertisements

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿಗೆ ದೊಡ್ಡ ಸವಾಲು ಎದುರಾಗಿದೆ.

ಈ ವಿಚಾರದ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್, “ದಿಂಗಾಲೇಶ್ವರ ಸ್ವಾಮೀಜಿ ಈಗ ಚುನಾವಣೆ ಸ್ಪರ್ಧಿಸುವ ತೀರ್ಮಾನ ಮಾಡಿದ್ದು, ಈ ಬಗ್ಗೆ ಅನೇಕರು ನನಗೆ ಸಲಹೆ ನೀಡಿದ್ದಾರೆ. ಕೇಂದ್ರ ಚುನಾವಣಾ ಸಮಿತಿ ನಿರ್ಧಾರದಂತೆ ನಾವು ಈಗಾಗಲೇ ಆನಂದ್ ಅಸೂಟಿ ಅವರಿಗೆ ಬಿ ಫಾರಂ ನೀಡಿದ್ದೇವೆ. ನಮ್ಮ ಅಭ್ಯರ್ಥಿ ಯುವಕರಾಗಿದ್ದಾರೆ. ಈ ಕುರಿತ ಪ್ರಸ್ತಾವನೆ ಇದೆ. ಈ ಬಗ್ಗೆ ಸಧ್ಯದಲ್ಲೇ ಸ್ಥಳೀಯ ನಾಯಕರ ಜತೆ ಚರ್ಚೆ ಮಾಡುತ್ತಿದ್ದೇನೆ” ಎಂದು ತಿಳಿಸಿದರು.

“ನಾನು ಏಕಾಂಗಿಯಾಗಿ ಈ ಬಗ್ಗೆ ತೀರ್ಮಾನ ಮಾಡಲು ಆಗುವುದಿಲ್ಲ. ನಮ್ಮ ಎಐಸಿಸಿ ಅಧ್ಯಕ್ಷರು, ಚುನಾವಣಾ ಸಮಿತಿ, ಮುಖ್ಯಮಂತ್ರಿಗಳು, ರಾಜ್ಯ ಉಸ್ತುವಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರನ್ನು ವಿಶ್ವಾಸಕ್ಕೆ ಪಡೆಯಬೇಕು. ಸ್ವಾಮೀಜಿಗಳು ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬಂದವರು. ಮೊದಲೇ ಈ ವಿಚಾರ ನಮಗೆ ಗೊತ್ತಿದ್ದಿದ್ದರೆ ಸುಲಭವಾಗುತ್ತಿತ್ತು” ಎಂದು ತಿಳಿಸಿದರು.

Advertisements

ಗ್ಯಾರಂಟಿ ನೋಡಿ ಮತ ಹಾಕಿದರೆ ಕುಕ್ಕರ್ ಬ್ಲಾಸ್ಟ್ ಸಂಭವಿಸಲಿದೆ ಎಂಬ ಸಿ.ಟಿ ರವಿ ಅವರ ಹೇಳಿಕೆಗೆ ಟಾಂಗ್ ನೀಡಿದ ಡಿ ಕೆ ಶಿವಕುಮಾರ್, “ಗ್ಯಾರಂಟಿ ಬಗ್ಗೆ ಮಾತನಾಡಿ ಅವರೂ ಬ್ಲಾಸ್ಟ್ ಆಗಿದ್ದಾರೆ. ಅವರು ಶೋಭಕ್ಕಂಗೆ ಗೋಬ್ಯಾಕ್ ಎಂದು ನಮ್ಮ ಸದಾನಂದ ಗೌಡರನ್ನು ಬ್ಲಾಸ್ಟ್ ಮಾಡಿದ್ದಾರೆ. ಸಿ.ಟಿ ರವಿಯನ್ನು ನಮ್ಮ ತಮ್ಮಣ್ಣ ಬ್ಲಾಸ್ಟ್ ಮಾಡಿದರು” ಎಂದು ಲೇವಡಿ ಮಾಡಿದರು.

ನಿವೃತ್ತ ಐಎಎಸ್‌ ಅಧಿಕಾರಿ ಕೆ.ಶಿವರಾಮ್‌ ಪತ್ನಿ ಕಾಂಗ್ರೆಸ್‌ ಸೇರ್ಪಡೆ

ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ನಿವೃತ್ತ ಐಎಎಸ್‌ ಅಧಿಕಾರಿ ಕೆ.ಶಿವರಾಮ್‌ ಪತ್ನಿ ವಾಣಿ ಶಿವರಾಮ್‌ ಕಾಂಗ್ರೆಸ್‌ ಸೇರಿದರು. ಪಕ್ಷದ ಶಾಲು ಹೊದಿಸಿ, ಧ್ವಜ ನೀಡಿ ಪಕ್ಷಕ್ಕೆ ಡಿ.ಕೆ.ಶಿವಕುಮಾರ್‌ ಬರಮಾಡಿಕೊಂಡರು. ರೂಪಾ ಲಿಂಗೇಶ್, ಗೋಪಿಕೃಷ್ಣ, ಛಲವಾದಿ ಮಹಾಸಭಾದ ಪದಾಧಿಕಾರಿಗಳು ಕೂಡ ಕಾಂಗ್ರೆಸ್ ಸೇರಿದರು.

ಇದನ್ನು ಓದಿದ್ದೀರಾ? ಧಾರವಾಡ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಸ್ವತಂತ್ರ ಸ್ಪರ್ಧೆ ಘೋಷಿಸಿದ ದಿಂಗಾಲೇಶ್ವರ ಸ್ವಾಮೀಜಿ

ಕಾಂಗ್ರೆಸ್ ವಕ್ತಾರರಾಗಿ ತೇಜಸ್ವಿನಿ ಗೌಡ

ವಿಧಾನ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ ಅವರು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರು ಕಾಂಗ್ರೆಸ್ ಮೂಲದವರು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಈ ದೇಶಕ್ಕೆ ಒಳ್ಳೆಯದಾಗಲಿದೆ ಎಂದು ಪಕ್ಷಕ್ಕೆ ಬಂದಿದ್ದಾರೆ. ತೇಜಸ್ವಿನಿ ಗೌಡ ಅವರು ನಮ್ಮ ಸಂಸದರಾಗಿದ್ದರು. ಪಕ್ಷದ ಅಧ್ಯಕ್ಷನಾಗಿ ನಾನು ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ. ಇಂದಿನಿಂದ ತೇಜಸ್ವಿನಿ ಗೌಡ ಅವರನ್ನು ಪಕ್ಷದ ಅಧಿಕೃತ ವಕ್ತಾರರಾಗಿದ್ದಾರೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X