ವಾಲ್ಮೀಕಿ ಸಮುದಾಯದ ನಿಯೋಗ ದೆಹಲಿಗೆ ಹೋಗಲು ತೀರ್ಮಾನ: ಸಚಿವ ಸತೀಶ್‌ ಜಾರಕಿಹೊಳಿ

Date:

Advertisements

ಇಬ್ಬರು ವಾಲ್ಮೀಕಿ ಸಮುದಾಯದವರನ್ನೇ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಹೀಗಾಗಿ, ವಾಲ್ಮೀಕಿ ಸಮುದಾಯದ ನಾಯಕರಿಗೆ ಮರಳಿ ಸಚಿವ ಸ್ಥಾನ ನೀಡಬೇಕು ಎಂದು ಕೇಳಲು ನಾವು ದೆಹಲಿಗೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣರನ್ನು ವಜಾಗೊಳಿಸಿದ ಬೆನ್ನಲ್ಲೇ ಅಸಮಾಧಾನಗೊಂಡಿರುವ ವಾಲ್ಮೀಕಿ ಸಮುದಾಯದ ಶಾಸಕರು ಸಭೆ ಸೇರಿ ಬುಧವಾರ ಚರ್ಚಿಸಿದರು. ಸಭೆಯ ಬಳಿಕ ಸತೀಶ್‌ ಜಾರಕಿಹೊಳಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

“ತೆರವಾದ ಸಚಿವ ಸ್ಥಾನವನ್ನು ಅದೇ ವಾಲ್ಮೀಕಿ ಸಮುದಾಯದವರಿಗೇ ನೀಡಬೇಕು ಎಂದು ಒಕ್ಕೊರಲಿನಿಂದ ಆಗ್ರಹಿಸಲು ಸಮುದಾಯದ ನಿಯೋಗ ಸಿದ್ಧವಾಗಿದೆ. ಕೆ.ಎನ್. ರಾಜಣ್ಣ ದಿಲ್ಲಿಗೆ ಹೋಗುವುದು ಬೇರೆ, ನಾವು ನಿಯೋಗ ಹೋಗುವುದು ಬೇರೆ. ಅದೇ ರೀತಿ, ಪಕ್ಷದ ಹೋರಾಟವೇ ಬೇರೆ ಸಮುದಾಯದ ಹೋರಾಟವೇ ಬೇರೆ” ಎಂದರು.

Advertisements

ಷಡ್ಯಂತ್ರದ ಬಗ್ಗೆ ಸಮಯ ಬಂದಾಗ ಹೇಳುವುದಾಗಿ ರಾಜಣ್ಣ ಹೇಳಿದ್ದಾರಲ್ಲಾ ಎಂದು ಪ್ರಶ್ನಿಸಿದಾಗ, “ಯಾವಾಗ ಹೇಳುತ್ತಾರೆ ಎಂಬುದನ್ನು ಕಾದು ನೋಡೋಣ. ಈಗ ರಾಜಣ್ಣ ಅಧಿಕಾರದಲ್ಲಿಲ್ಲ. ಅವರಿಗೆ ಧೈರ್ಯ ಹೇಳಿದ್ದೇವೆ. ಅವರಿಗೆ ಬೇಸರ ಏನಿಲ್ಲ. ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ’ ಎಂದು ಹೇಳಿದರು.

ವಾಲ್ಮೀಕಿ ಸಮುದಾಯದವರು ಸೇರಿದ ಸಭೆಯಲ್ಲಿ ಸ್ವತಃ ಕೆ.ಎನ್. ರಾಜಣ್ಣ ಸೇರಿದಂತೆ ಚಳ್ಳಕೆರೆ ಶಾಸಕ ರಘುಮೂರ್ತಿ, ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ, ಮಸ್ಕಿಯ ಬಸನಗೌಡ ತುರುವೀಹಾಳ, ಎಚ್.ಡಿ. ಕೋಟೆಯ ಅನಿಲ್ ಚಿಕ್ಕಮಾದು, ಮಾಯಕೊಂಡದ ಬಸವಂತಪ್ಪ, ಗುಂಡ್ಲುಪೇಟೆಯ ಗಣೇಶ್ ಪ್ರಸಾದ್, ಪಾವಗಡದ ವೆಂಕಟೇಶ್, ಕೆ.ಆರ್. ನಗರದ ರವಿಶಂಕ‌ರ್, ಚಾಮರಾಜದ ಹರೀಶಗೌಡ, ಮಾಜಿ ಸಚಿವ ವೆಂಕಟರಮಣಪ್ಪ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

Download Eedina App Android / iOS

X