ಮಾನನಷ್ಟ ಪ್ರಕರಣ | ತಡೆ ಕೋರಿದ್ದ ‌ಬಿಜೆಪಿ ಶಾಸಕ ಯತ್ನಾಳ್‌ಗೆ ಹೈಕೋರ್ಟ್ ಚಾಟಿ

Date:

Advertisements

ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ಗೆ ಹೈಕೋರ್ಟ್ ಪೀಠ ತರಾಟೆಗೆ ತೆಗೆದುಕೊಂಡಿದೆ. ಕುಟುಂಬ ಹಾಗೂ ವಯಕ್ತಿಕ ನಿಂದನೆ ಹೇಳಿಕೆ ಖಂಡಿಸಿ, ಯತ್ನಾಳ್‌ ವಿರುದ್ಧ ಕೋರ್ಟ್ ಮೊರೆ ಹೋಗಿದ್ದ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

ಪ್ರಕರಣಕ್ಕೆ ತಡೆ ಕೋರಿ ಬಸವನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣವನ್ನ ಆಲೀಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದರು. ಅಲ್ಲದೇ ಶಾಸಕರ ಕೀಳು ಅಭಿರುಚಿಯ ಹೇಳಿಕೆಯನ್ನು ಪ್ರಶ್ನಿಸಿದರು. “ನೀವು ಹೇಳಿಕೆ ನೀಡಿದ್ದು ಹೌದೋ ಅಲ್ಲವೋ” ಎಂದು ಪ್ರಶ್ನಿಸಿದರು. ಹೇಳಿಕೆ ನೀಡಿದ್ದನ್ನು ಯತ್ನಾಳ್ ಪರ ವಕೀಲ ಒಪ್ಪಿಕೊಂಡರು.

ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿಯವರು, “ಈ ರೀತಿಯ ಪದ ಬಳಕೆ ಯಾವ ಅರ್ಥ ನೀಡುತ್ತದೆ. ವಯಕ್ತಿಕ ತೇಜೋವಧೆಗೆ ನೀವು ಏಕೆ ಇಳಿದಿರಿ? ಇತ್ತಿಚೆಗೆ ಈ ರೀತಿಯ ಹೇಳಿಕೆಗಳು ಮಾಮೂಲಾಗಿವೆ. ಒಂದು ಸಮುದಾಯದ ವಿರುದ್ಧ ಈ ರೀತಿ ಪದಬಳಕೆ ಸರಿಯಲ್ಲ. ಮಹಿಳೆಯೊಬ್ಬರು ಮುಸ್ಲಿಂ ಪತ್ನಿ ಆಗಿದ್ದಾಕ್ಷಣ ಈ ರೀತಿಯ ಹೇಳಿಕೆ ನೀಡುವುದೇ? ಇದು ಸರಿಯಲ್ಲ” ಎಂದು ಚಾಟಿ ಬೀಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದು ದೇಶ ಒಂದು ಚುನಾವಣೆ- ಒಕ್ಕೂಟ ವ್ಯವಸ್ಥೆ ಧ್ವಂಸಕ್ಕೆ ಅಡಿಗಲ್ಲು

ಸ್ವತಃ ಯತ್ನಾಳ್ ಪರ ವಕೀಲ ಸಿ.ವಿ ನಾಗೇಶ್ ಅವರು ಯತ್ನಾಳ್ ಅವರ ಹೇಳಿಕೆಯನ್ನು ಸಮರ್ಥಿಸಲ್ಲ ಎಂದು ಕೋರ್ಟ್ ಮುಂದೆ ತಪ್ಪು ಒಪ್ಪಿಕೊಂಡರು. ಸಚಿವರ ಹೇಳಿಕೆಗೆ ಪ್ರತಿಯಾಗಿ ಯತ್ನಾಳ್ ಅವರು ಹೇಳಿಕೆ ನೀಡಿದ್ದಾರೆ. ಆದರೆ ಕುಟುಂಬ ನಿಂಧಿಸುವ ಉದ್ದೇಶದಿಂದ ಈ ಹೇಳಿಕೆ ನೀಡಿಲ್ಲ ಎಂದು ಯತ್ನಾಳ್ ಪರ ವಕೀಲರಿ ನ್ಯಾಯಮೂರ್ತಿ ಅವರಿಗೆ ಸಮಜಾಯಿಶಿ ನೀಡಲು ಪ್ರಯತ್ನಿಸಿದರು. ಆದರೆ ಯತ್ನಾಳ್ ಪರ ವಕೀಲರ ವಾದವನ್ನು ಒಪ್ಪದ ಜಸ್ಟೀಸ್ ನಾಗಪ್ರಸನ್ನ ಅವರು ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X