ಮಾನನಷ್ಟ ಮೊಕದ್ದಮೆ: ರಾಹುಲ್‌ಗಾಂಧಿ, ಸಿದ್ದರಾಮಯ್ಯ, ಶಿವಕುಮಾರಗೆ ಸಮನ್ಸ್‌

Date:

Advertisements

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರಕರಣ ಸಂಬಂಧ ಜುಲೈ 27ರಂದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮನ್ಸ್‌ ಜಾರಿ ಮಾಡಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪಗಳಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್‌ ಅವರು ಮೇ 9 ರಂದು ಕಾಂಗ್ರೆಸ್‌ನ ಈ ಮೂವರು ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ದೂರಿನಲ್ಲಿ, 2023ರ ಮೇ 5ರಂದು ಪತ್ರಿಕೆಗಳಲ್ಲಿ ಪ್ರಕಟವಾದ ಕಾಂಗ್ರೆಸ್ ಜಾಹೀರಾತಿನಲ್ಲಿ ಬಿಜೆಪಿ ಸರ್ಕಾರವು 40% ಭ್ರಷ್ಟಾಚಾರದಲ್ಲಿ ತೊಡಗಿದೆ. ಹಿಂದಿನ ನಾಲ್ಕು ವರ್ಷಗಳಲ್ಲಿ ₹ 1.5 ಲಕ್ಷ ಕೋಟಿ ಲೂಟಿ ಮಾಡಿದೆಯೆಂದು ದೂರಿದ್ದಾರೆ. ಆ ಆರೋಪಗಳು ‘ಆಧಾರರಹಿತ’ ಮತ್ತು ‘ಮಾನಹಾನಿಕರ’ ಎಂದು ಕೇಶವ ಪ್ರಸಾದ್ ಹೇಳಿದ್ದಾರೆ.

Advertisements

ಪ್ರಕರಣದ ಕುರಿತು ಕಾಂಗ್ರೆಸ್‌ ನಾಯಕರು ಪ್ರತಿಕ್ರಿಯಿಸಿದ್ದು, “ಬಿಜೆಪಿ ಹತಾಶೆಯಿಂದ ವರ್ತಿಸುತ್ತಿದೆ” ಎಂದು ವ್ಯಂಗ್ಯವಾಡಿದ್ದಾರೆ.

“ಬಿಜೆಪಿ ಚುನಾವಣೆಯಲ್ಲಿ ಸೋತಿದೆ. ಬಿಜೆಪಿಗರನ್ನು ಜನರು ತಿರಸ್ಕರಿಸಿದ್ದಾರೆ. ಅವರು ಈಗ ಹತಾಶರಾಗಿದ್ದಾರೆ. ಭ್ರಷ್ಟಾಚಾರ ಆರೋಪಗಳ ಬಗ್ಗೆ ಪ್ರಧಾನಿ ತನಿಖೆಗೆ ಆದೇಶಿಸಲಿಲ್ಲ. ಬೊಮ್ಮಾಯಿ ಅದರ ಬಗ್ಗೆ ಕ್ರಮ ಕೈಗೊಂಡಿಲ್ಲ. ನಾವು ಬಿಜೆಪಿಯ ದುರಾಡಳಿತವನ್ನು ಜನರ ಮುಂದಿಟ್ಟೆವು. ಆದರೆ, ಈಗ ಬಿಜೆಪಿಗರು ದೂರು ದಾಖಲಿಸುವ ಪ್ರಹಸನ ನಡೆಸುತ್ತಿದ್ದಾರೆ” ಎಂದು ಕಾಂಗ್ರೆಸ್ ಹಿರಿಯ ನಾಯಕ ಸಲೀಂ ಅಹ್ಮದ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಉಚಿತ ಅಕ್ಕಿ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ವಿವಿಧ ಇಲಾಖೆಗಳಲ್ಲಿ 40% ಕಮಿಷನ್ ಪಡೆಯುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದ ನಂತರ, ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪೇ-ಸಿಎಂ ಅಭಿಯಾನ ನಡೆಸಿತ್ತು. ಭ್ರಷ್ಟಾಚಾರದ ಆರೋಪಗಳನ್ನು ಚುನಾವಣಾ ವಿಷಯವನ್ನಾಗಿಸಿತ್ತು. ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆದು ಸರ್ಕಾರ ರಚಿಸಿತು.

ಅಂದಹಾಗೆ, ಈ ಮಧ್ಯೆ, ಮೋದಿ ಉಪನಾಮದ ಕುರಿತು ಟೀಕೆ ಮಾಡಿದ್ದ ರಾಹುಲ್‌ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಪನ್ನು ಪ್ರಶ್ನಿಸಿ ರಾಹುಲ್‌ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X