ಲೋಕಸಭೆ ಚುನಾವಣೆ| ಇದು ಮೋದಿಯವರ ಅಹಂಕಾರದ ಸೋಲು: ಮಲ್ಲಿಕಾರ್ಜುನ ಖರ್ಗೆ

Date:

ಲೋಕಸಭೆ ಚುನಾವಣೆ ಫಲಿತಾಂಶ ಭಾರತದ ಜನತೆಯ ಗೆಲುವು, ಇದು ಪ್ರಧಾನಿ ನರೇಂದ್ರ ಮೋದಿಯವರ ಅಹಂಕಾರದ ಸೋಲು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

- Advertisement -

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ಲೋಕಸಭೆ ಚುನಾವಣೆಯು ತಮ್ಮ ಹೆಸರಲ್ಲಿ ಬಿಜೆಪಿಗೆ ಮತ ಕೇಳಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜನಾದೇಶವಾಗಿದೆ. ಇದು ಅವರ ನೈತಿಕ ಮತ್ತು ರಾಜಕೀಯ ಸೋಲು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಬಿಜೆಪಿ ಕಾಂಗ್ರೆಸ್ ಖಾತೆಯನ್ನು ಸೀಝ್ ಮಾಡಿತು. ಏಜೆನ್ಸಿಗಳನ್ನು ಬಳಿಸಿತು. ಆದರೆ ಸಂವಿಧಾನದ ಉಳಿವಾಗಿದೆ ಎಂದು ಹೇಳಿದ ಖರ್ಗೆ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ, ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದರು.

ಇದನ್ನು ಓದಿದ್ದೀರಾ?  ಅಮೇಥಿಯಲ್ಲಿ ಮುರಿದ ಸ್ಮೃತಿ ಇರಾನಿಯ ಅಹಂಕಾರ; ಎರಡೂ ಕಡೆ ಗೆದ್ದ ರಾಹುಲ್‌

ಜೊತೆಗೆ ಇಂಡಿಯಾ ಕೂಟಕ್ಕೂ ಧನ್ಯವಾದ ತಿಳಿಸಿದ ಖರ್ಗೆ, ಸಂವಿಧಾನ ಉಳಿವಿಗಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಈ ಲೋಕಸಭೆ ಚುನಾವಣೆ ಬರೀ ಒಂದು ಪಕ್ಷದ ವಿರುದ್ಧ ನಡೆಸಿದ ಸ್ಪರ್ಧೆಯಲ್ಲ, ಬಿಜೆಪಿ, ಹಿಂದೂಸ್ತಾನದ ಸಂಸ್ಥೆಗಳು, ಸಿಬಿಐ, ಇಡಿ ವಿರುದ್ಧದ ಹೋರಾಟವಾಗಿದೆ. ಯಾಕೆಂದರೆ ಈ ಸಂಸ್ಥೆಗಳನ್ನು ಅಮಿತ್‌ ಶಾ, ನರೇಂದ್ರ ಮೋದಿಯವರು ಹಿಡಿತದಲ್ಲಿರಿಸಿದ್ದಾರೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?   ರಾಯಬರೇಲಿಯಲ್ಲಿ ರಾಹುಲ್ ಗಾಂಧಿಗೆ ಗೆಲುವು, ವಯನಾಡಿನಲ್ಲಿ ಭಾರಿ ಮುನ್ನಡೆ

ಇನ್ನು ಇಂಡಿಯಾ ಒಕ್ಕೂಟ ವಿಪಕ್ಷವಾಗಿರುತ್ತದೆಯೇ ಅಥವಾ ಸರ್ಕಾರ ರಚಿಸುವ ಪ್ರಯತ್ನ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ನಾವು ನಮ್ಮ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳೊಂದಿಗೆ ನಾಳೆ ಸಭೆ ನಡೆಸುತ್ತೇವೆ. ಈ ಪ್ರಶ್ನೆಗಳನ್ನು ಅಲ್ಲಿಯೇ ಎತ್ತಲಾಗುವುದು ಮತ್ತು ಅದಾದ ಬಳಿಕ ಉತ್ತರಿಸಲಾಗುವುದು. ನಾವು ಮಿತ್ರ ಪಕ್ಷಕ್ಕೆ ಗೌರವ ನೀಡುತ್ತೇವೆ, ಅವರೊಂದಿಗೆ ಚರ್ಚಿಸದೆ ಯಾವುದೇ ಹೇಳಿಕೆಯನ್ನು ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಲಿಂಗ ಸಮಾನತೆ ಸೂಚ್ಯಂಕ: ಐಸ್‌ಲ್ಯಾಂಡ್ ಮೊದಲು, ಭಾರತಕ್ಕೆ 131ನೇ ಸ್ಥಾನ

ಜಿನೀವಾ ಮೂಲದ ವಿಶ್ವ ಆರ್ಥಿಕ ವೇದಿಕೆಯು 2006ರಿಂದ ಈ ಸೂಚ್ಯಂಕವನ್ನು ಸಿದ್ಧಪಡಿಸುತ್ತಿದ್ದು,...

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

ಸುದ್ದಿ ನೋಡಿದ ತಕ್ಷಣ ಪಿಐಎಲ್ ಹಾಕ್ತೀರಾ? – ನಕಲಿ ವೈದ್ಯಕೀಯ ಪದವಿ ಕುರಿತ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ದೇಶದಲ್ಲಿ ಚರ್ಚೆಯಾಗುವ ಸುದ್ದಿಗಳ ಆಧಾರದ ನಿಯಮಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌)...