ದೆಹಲಿಯಲ್ಲಿ ಎಎಪಿ ವಿಭಜನೆ?: ಪಕ್ಷ ತೊರೆದು ಹೊಸ ಪಕ್ಷ ಕಟ್ಟಲು ಮುಂದಾದ 15 ಕೌನ್ಸಿಲರ್‌ಗಳು

Date:

Advertisements

ಇತ್ತೀಚೆಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಅದ್ಮಿ ಪಕ್ಷ (ಎಎಪಿ) ಹೀನಾಯ ಸೋಲುಂಡಿದ್ದು, ಭಾರೀ ಮುಖಭಂಗ ಅನುಭವಿಸಿತ್ತು. ಎಎಪಿಯ ಘಟಾನುಘಟಿ ನಾಯಕರಾದ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸೇರಿದಂತೆ ಹಲವರು ಸೋಲುಂಡಿದ್ದಾರೆ. ಎಎಪಿ ತನ್ನ ವರ್ಚಸ್ಸು, ನೆಲೆ ಕಳೆದುಕೊಳ್ಳುತ್ತಿದೆ ಎಂಬ ಅಭಿಪ್ರಾಯಗಳೂ ವ್ಯಕ್ತವಾಗುತ್ತಿದೆ. ಇದೇ ಹೊತ್ತಿನಲ್ಲಿ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) 15 ಎಎಪಿ ಕೌನ್ಸಿಲರ್‌ಗಳು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಹೊಸ ಪಕ್ಷ ಕಟ್ಟುವುದಾಗಿ ಘೊಷಿಸಿದ್ದಾರೆ.

ಎಂಸಿಡಿ ಕೌನ್ಸಿಲರ್‌ಗಳಾದ ಮುಕೇಶ್ ಗೋಯೆಲ್ ಮತ್ತು ಹಿಮಾನಿ ಜೈನ್ ನೇತೃತ್ವದಲ್ಲಿ 15 ಕೌನ್ಸಿಲರ್‌ಗಳು ಎಎಪಿಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದೊಳಗಿನ ಆಂತರಿಕ ಸಂಘರ್ಷಗಳೇ ತಾವು ಪಕ್ಷ ತೊರೆಯಲು ಕಾರಣ. ಆಂತರಿಕ ಸಂಘರ್ಷದಿಂದಾಗಿ ಪಾಲಿಕೆಯಲ್ಲಿ ಯಾವುದೇ ಮಹತ್ವದ ಕೆಲಸಗಳು ಪೂರ್ಣಗೊಂಡಿಲ್ಲ ಎಂದು ಹೇಳಿದ್ದಾರೆ.

ಎಎಪಿ ತೊರೆದಿರುವ ಕೌನ್ಸಿಲರ್‌ಗಳು ‘ಇಂದ್ರಪ್ರಸ್ಥ ವಿಕಾಸ್ ಪಕ್ಷ’ ಎಂಬ ಹೊಸ ಪಕ್ಷ ಕಟ್ಟುವುದಾಗಿ ಹೇಳಿಕೊಂಡಿದ್ದಾರೆ.

Advertisements

“ಎಂಸಿಡಿಯಲ್ಲಿ ನಾವು ಅಧಿಕಾರದಲ್ಲಿದ್ದೆವು. ಆದರೂ, ಕಳೆದ 2.5 ವರ್ಷಗಳಲ್ಲಿ ಯಾವುದೇ ಉತ್ತಮ ಕೆಲಸ ಮಾಡಲಾಗಿಲ್ಲ. ದೆಹಲಿ ಅಭಿವೃದ್ಧಿಯೇ ನಮ್ಮ ಸಿದ್ಧಾಂತವಾಗಿದೆ. ಹೀಗಾಗಿ, ನಾವು ಎಎಪಿ ತೊರೆದು, ‘ಇಂದ್ರಪ್ರಸ್ಥ ವಿಕಾಸ್ ಪಕ್ಷ’ವನ್ನು ಕಟ್ಟುತ್ತಿದ್ದೇವೆ. ದೆಹಲಿಯ ಅಭಿವೃದ್ಧಿಗಾಗಿ ದುಡಿಯುವ ಪಕ್ಷಕ್ಕೆ ಬೆಂಬಲ ನೀಡುತ್ತೇವೆ” ಎಂದು ಹಿಮಾನಿ ಜೈನ್ ಹೇಳಿದ್ದಾರೆ.

“ಈಗ 15 ಕೌನ್ಸಿಲರ್‌ಗಳು ಎಎಪಿ ತೊರೆದಿದ್ದೇವೆ. ಎಎಪಿಗೆ ರಾಜೀನಾಮೆ ನೀಡುವವರ ಸಂಖ್ಯೆ ಇನ್ನೂ ಹೆಚ್ಚಾಗಬಹುದು” ಎಂದು ಮುಕೇಶ್ ಗೋಯಲ್ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಆಪರೇಷನ್ ಸಿಂಧೂರ | ಕಾಂಗ್ರೆಸ್‌ – ತರೂರ್ ನಡುವೆ ವಾಗ್ಯುದ್ಧ; ಬೇಳೆ ಬೇಯಿಸಿಕೊಳ್ಳುತ್ತಿದೆ ಬಿಜೆಪಿ

ಕೌನ್ಸಿಲರ್‌ಗಳ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ ನಾಯಕಿ ಪ್ರಿಯಾಂಕಾ ಕಕ್ಕರ್, “ರಾಜೀನಾಮೆ ನೀಡಿದ ಕೌನ್ಸಿಲರ್‌ಗಳಿಗೆ ಬಿಜೆಪಿಗರು ಆಮಿಷವೊಡ್ಡುತ್ತಿದ್ದಾರೆ.ತಮ್ಮ ಪಕ್ಷಕ್ಕೆ ಸೆಳೆಯಲು ಯತ್ನಿಸುತ್ತಿದ್ದಾರೆ. ಈ ರೀತಿಯ ತಂತ್ರಗಳ ಮೂಲಕ ನಗರಸಭೆಯಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X