ಜನಾರ್ದನ ರೆಡ್ಡಿಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆಗ್ರಹ

Date:

Advertisements

ಬಳ್ಳಾರಿಯನ್ನು ತಮ್ಮ ‘ರಿಪಬ್ಲಿಕ್’ ಮಾಡಿಕೊಂಡು ಅಕ್ರಮ ಗಣಿಗಾರಿಕೆ ನಡೆಸಿ ಸರ್ಕಾರದ ಬೊಕ್ಕಸಕ್ಕೆ 884 ಕೋಟಿ ರೂ. ನಷ್ಟ ಉಂಟು ಮಾಡಿದ್ದ ಪ್ರಕರಣದಲ್ಲಿ ಬಿಜೆಪಿ ನಾಯಕ, ಶಾಸಕ ಜಿ. ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಘೋಷಿಸಿದೆ. ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಈ ಬೆನ್ನಲ್ಲೇ, ಜನಾರ್ದನ ರೆಡ್ಡಿಯ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ.

ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್ ಉಗ್ರಪ್ಪ ಅವರು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದು, ಜನಾರ್ದನ ರೆಡ್ಡಿಯ ಅಕ್ರಮ ಗಣಿಗಾರಿಕೆ ಮತ್ತು ಲೂಟಿಯಿಂದ ಸರ್ಕಾರಕ್ಕೆ ಭಾರೀ ನಷ್ಟವಾಗಿದೆ. ಹೀಗಾಗಿ, ಅವರ ಆಸ್ತಿಯನ್ನು ಸರ್ಕಾರವು ‘ಅರಿಯರ್ಸ್ ಆಫ್ ಲ್ಯಾಂಡ್ ರೆವಿನ್ಯೂ’ ಎಂದು ಪರಿಗಣಿಸಿ, ಮುಟ್ಟುಗೋಲು ಹಾಕಿಕೊಳ್ಳಬೇಕು. ಸರ್ಕಾರಕ್ಕೆ ಆಗಿರುವ ನಷ್ವವನ್ನು ಇದರಿಂದ ತುಂಬಿಸಿಕೊಳ್ಳಬಹುದು. ಅಲ್ಲದೆ, ರೆಡ್ಡಿಯ ಅಕ್ರಮ ಗಣಿಗಾರಿಕೆಯಿಂದ ಲಾಭ ಪಡೆದ ಅಂದಿನ ಸರ್ಕಾರದ ರಾಜಕಾರಣಿಗಳು ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ದುರಂಹಕಾರಿ ರಾಜಕಾರಣಿಗಳು ಒಂದಲ್ಲ ಒಂದು ರೀತಿಯಲ್ಲಿ ಶಿಕ್ಷೆ ಅನುಭವಿಸಲೇಬೇಕು ಎಂಬುದಕ್ಕೆ ರೆಡ್ಡಿಗೆ ಶಿಕ್ಷೆ ವಿಧಿಸಿರುವುದು ಅತ್ಯುತ್ತಮ ಉದಾಹರಣೆಯಾಗಿದೆ. 2000-2006ರಿಂದ ರೆಡ್ಡಿ ಅಕ್ರಮ ಗಣಿಗಾರಿಗೆ ನಡೆದಾಗ ಕುಮಾರಸ್ವಾಮಿ ಅವರ ನೇತೃತ್ವದ ಸಮ್ಮಿಶ್ರ ಸರಕಾರ ಅಧಿಕಾರದಲ್ಲಿತ್ತು. ಅಂದು ಅರಣ್ಯ ಸಚಿವರಾಗಿದ್ದ ಚೆನ್ನಿಗಪ್ಪ ಅವರೇ ಖುದ್ದು ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಅಕ್ರಮ ಗಣಿಗಾರಿಕೆ ಬಗ್ಗೆ ಅತ್ಯಂತ ನಿಖರ ವರದಿ ಸಿದ್ದಪಡಿಸಿದ್ದು ಕಾಂಗ್ರೆಸ್ ಪಕ್ಷ. 2008ರಲ್ಲಿ ಕಾಂಗ್ರೆಸ್‌ನ ಸತ್ಯಶೋಧನಾ ಸಮಿತಿಯು ಅಕ್ರಮ ಗಣಿಗಾರಿಕೆಯ ವರದಿಯನ್ನು ಬಿಡುಗಡೆ ಮಾಡಿತ್ತು. ಆ ವರದಿಯು ಲೋಕಾಯುಕ್ತ ತನಿಖೆಗೆ ಸಹಾಯವನ್ನೂ ಮಾಡಿದೆ” ಎಂದು ಅವರು ಹೇಳಿದ್ದಾರೆ.

Advertisements

“ಈ ಅಕ್ರಮ ಗಣಿಗಾರಿಕೆಗೆ ಅಂದಿನ ಸರ್ಕಾರಗಳು ನೆರವು ನೀಡಿದ್ದವು. ಶ್ರೀರಾಮುಲು ಅವರು ಅರಣ್ಯ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದರು. ಅಂದು ಅಧಿಕಾರದಲ್ಲಿ ಇದ್ದುಕೊಂಡೆ ಅನ್ಯಾಯ ಎಸಗಿದವರಿಗೆ ಇಂದು ತಕ್ಕ ಶಿಕ್ಷೆಯಾಗಿದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X