ಜೈಲಿನಲ್ಲಿ ಇನ್ಸುಲಿನ್ ನಿರಾಕರಣೆ; ಬಿಜೆಪಿ ಕೇಜ್ರಿವಾಲ್‌ರನ್ನು ಕೊಲ್ಲಲು ಬಯಸುತ್ತಾ: ಸಂಜಯ್ ಸಿಂಗ್

Date:

Advertisements

“ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜೈಲಿನಲ್ಲಿ ಇನ್ಸುಲಿನ್ ನಿರಾಕರಿಸುತ್ತಿದೆ” ಎಂದು ಆರೋಪಿಸಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರು, “ಬಿಜೆಪಿ ಕೇಜ್ರಿವಾಲ್ ಅವರನ್ನು ಕೊಲ್ಲಲು ಬಯಸುತ್ತಿದೆಯೇ” ಎಂದು ಪ್ರಶ್ನಿಸಿದರು.

“ಬಿಜೆಪಿಯು ಅರವಿಂದ್ ಕೇಜ್ರಿವಾಲ್‌ ಅವರಿಗೆ ಜೈಲಿನಲ್ಲಿ ಇನ್ಸುಲಿನ್ ನಿರಾಕರಿಸುವ ಮೂಲಕ ಅವರಿಗೆ ಹಾನಿ ಮಾಡುವ ಕೆಟ್ಟ ಯೋಜನೆಯನ್ನು ರೂಪಿಸುತ್ತಿದೆ. ಕೇಜ್ರಿವಾಲ್ ಕಳೆದ 20 ವರ್ಷಗಳಿಂದ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದಾರೆ. ಈಗ ಇನ್ಸುಲಿನ್ ಇಲ್ಲದಿರುವುದು ಸಿಎಂ ಜೀವಕ್ಕೆ ಗಂಭೀರ ಅಪಾಯವಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕೇಜ್ರಿವಾಲ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದಾಗ, ಜೈಲಿನಲ್ಲಿ ಕೇಜ್ರಿವಾಲ್‌ ಅವರಿಗೆ ಗ್ಲೂಕೋಸ್, ಬಾಳೆಹಣ್ಣು, ಟೋಫಿ ಮತ್ತು ಇತರ ಆಹಾರ ಪದಾರ್ಥಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ನಿರ್ದಿಷ್ಟಪಡಿಸಿದೆ” ಎಂದು ಈ ಸಂದರ್ಭದಲ್ಲಿ ಸಂಜಯ್ ಸಿಂಗ್ ಸ್ಪಷ್ಟಪಡಿಸಿದರು.

Advertisements

ಇದನ್ನು ಓದಿದ್ದೀರಾ?  ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

“ಮುಖ್ಯವಾಹಿನಿಯ ಮಾಧ್ಯಮಗಳು ಈ ಸುಪ್ರೀಂ ಕೋರ್ಟ್ ಆದೇಶವನ್ನು ಒಮ್ಮೆಯೂ ಪ್ರಕಟಿಸದಿರುವುದು ನನಗೆ ಆಶ್ಚರ್ಯವಾಗಿದೆ. ದೇಶದ ಜನರು ಸಂಪೂರ್ಣ ಸತ್ಯವನ್ನು ತಿಳಿದುಕೊಳ್ಳಬೇಕು ಇದರಿಂದ ಬಿಜೆಪಿ ಮತ್ತು ಅದರ ಅಂಗಸಂಸ್ಥೆಯಾದ ಇಡಿಯ ಸುಳ್ಳುಗಳನ್ನು ಬಹಿರಂಗಪಡಿಸಬೇಕು” ಎಂದು ಎಎಪಿ ನಾಯಕ ಹೇಳಿದರು.

“ಕೇಜ್ರಿವಾಲ್ 20 ವರ್ಷಗಳಿಂದ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದಾರೆ ಮತ್ತು ಕಳೆದ 30 ವರ್ಷಗಳಿಂದ ಮಧುಮೇಹಿಯಾಗಿದ್ದಾರೆ. ಇಷ್ಟೆಲ್ಲಾ ಆದ ಮೇಲೆ ಈ ಸತ್ಯವನ್ನು ದೇಶದ ಜನತೆಯ ಮುಂದೆ ಏಕೆ ಮುಚ್ಚಿಡಲಾಗುತ್ತಿದೆ? ಕೇಜ್ರಿವಾಲ್ ವಿರುದ್ಧ ಬಿಜೆಪಿ ಮತ್ತು ಪ್ರಧಾನಿ ಮೋದಿ ಆಳವಾದ ಪಿತೂರಿ ನಡೆಸುತ್ತಿದ್ದಾರೆ. ಕೇಜ್ರಿವಾಲ್‌ರನ್ನು ಕೊಲ್ಲಲು ಬಯಸುತ್ತಿದ್ದಾರೆ” ಎಂದು ಈ ಹಿಂದೆಯೂ ಎಎಪಿ ಹೇಳಿಕೆ ನೀಡಿದೆ.

ಇದನ್ನು ಓದಿದ್ದೀರಾ?  ಕೇಜ್ರಿವಾಲ್‌ರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ: ಭಗವಂತ್ ಮಾನ್ ಆರೋಪ

“ಮಧುಮೇಹವು ಮಾರಣಾಂತಿಕ ಕಾಯಿಲೆಯಾಗಿದೆ. ಇದು ಜೀವಕ್ಕೆ ಅಪಾಯಕಾರಿಯಾಗಿದ್ದು ಯಾರನ್ನೂ ಬೇಕಾದರೂ ಕೊಲ್ಲಬಹುದು. ಮಧುಮೇಹ ಹೊಂದಿರುವವರಿಗೆ ಇನ್ಸುಲಿನ್ ನೀಡದಿರುವುದು ಅಪರಾಧ. ಮಧುಮೇಹ ರೋಗಿಯು ಸಮಯಕ್ಕೆ ಸರಿಯಾಗಿ ಇನ್ಸುಲಿನ್ ಪಡೆಯಲು ಸಾಧ್ಯವಾಗದಿದ್ದರೆ ತಕ್ಷಣವೇ ಗ್ಲೂಕೋಸ್ ಅನ್ನು ನೀಡಬೇಕೆಂದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ” ಎಂದು ವಿವರಿಸಿದರು.

ಇನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಂಧನವಾಗುವ ಒಂದು ತಿಂಗಳ ಹಿಂದೆ ಇನ್ಸುಲಿನ್ ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದು, ಮಧುಮೇಹದ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಹಾರ್ ಜೈಲು ಆಡಳಿತವು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ನೀಡಿದ ವರದಿಯಲ್ಲಿ ತಿಳಿಸಿದೆ. ಈ ವರದಿಯು ಬಿಜೆಪಿಯ ಪಿತೂರಿ ಎಂದು ಎಎಪಿ ನಾಯಕಿ ಅತಿಶಿ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X