ಬಿಜೆಪಿ ಒಂದು ಸೀಟನ್ನೂ ಘೋಷಿಸಿಲ್ಲ, ಹೋಗಿ ಅವರನ್ನು ಪ್ರಶ್ನಿಸಿ; ಪತ್ರಕರ್ತನಿಗೆ ದೇವೇಗೌಡರ ಕುಟುಕು

Date:

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹಿನ್ನೆಲೆಯಲ್ಲಿ ಹಾಸನ ಟಿಕೆಟ್‌ ಗೊಂದಲದ ವಿಚಾರ ಸಕ್ಕತ್ ಸದ್ದು ಮಾಡುತ್ತಿದೆ. ಎಚ್‌ ಡಿ ರೇವಣ್ಣ ಮತ್ತು ಕುಮಾರಸ್ವಾಮಿ ಅವರ ನಡುವೆ ಜಟಾಪಟಿ ನಡೆಯುತ್ತಿದೆ. ಈ ನಡುವೆ ಹಾಸನ ಟಿಕೆಟ್‌ ಹಂಚಿಕೆ ಬಗ್ಗೆ ಪ್ರಶ್ನೆ ಮಾಡಿದ ಪತ್ರಕರ್ತರೊಬ್ಬರಿಗೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಚಳಿ ಬಿಡಿದ್ದಾರೆ.

ದೇವೇಗೌಡ ಅವರು ದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತಿದ್ದ ವೇಳೆ, ಪತ್ರಕರ್ತರೊಬ್ಬರು ಹಾಸನ ಟಿಕೆಟ್‌ ವಿಚಾರವಾಗಿ ಪ್ರಶ್ನೆ ಕೇಳಿದ್ದಾರೆ. ಪತ್ರಕರ್ತನ ಪ್ರಶ್ನೆಗೆ ಬಹಳ ತೀಕ್ಷ್ಣವಾಗಿ ದೇವೇಗೌಡರು ತಿವಿದಿದ್ದಾರೆ.

“ಅದು ಬಿಡಿ, ನೀವು ಹಾಸನದ ವಿಚಾರಕ್ಕೆ ಬರ್ತಾ ಇದಿರಿ. ನಾವು ಇನ್ನೂ ಎರಡನೇ ಪಟ್ಟಿ ಬಿಡುಗಡೆ ಮಾಡಿಲ್ಲ. ಅದರಲ್ಲಿ ಮಾಡ್ತೇವೆ. ಈಗಾಗಲೇ ಜೆಡಿಎಸ್‌ ಒಂದು ಪಟ್ಟಿ ಬಿಡುಗಡೆ ಮಾಡಿದೆ. ನಿಮಗೆ ಬೇರೆ ಪ್ರಶ್ನೆಯೇ ಇಲ್ವಾ?” ಎಂದು ದೇವೇಗೌಡರು ಕುಟುಕಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಷ್ಟ್ರೀಯ ಪಕ್ಷ ಬಿಜೆಪಿ ಇನ್ನೂ ಒಂದು ಸ್ಥಾನದ ಅಭ್ಯರ್ಥಿಯನ್ನೂ ಘೋಷಿಸಿಲ್ಲ. ಹಾಸನದ ಬಗ್ಗೇನೇ ಕೆದಕೋದ್ಯಾಕೆ. ಹೋಗಿ ಬಿಜೆಪಿ ನಾಯಕರನ್ನು ಪ್ರಶ್ನಿಸಿ” ಎಂದು ಪತ್ರಕರ್ತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ನಾವು 96-97 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೇವೆ. ಬಿಜೆಪಿಯದ್ದು ಇನ್ನೂ ಪಟ್ಟಿ ಬಂದಿಲ್ಲ. ಕಾಂಗ್ರೆಸ್ ಎರಡನೇ ಪಟ್ಟಿಗೆ ತಿಣುಕಾಡುತ್ತಿದೆ. ಅವರನ್ನ ಕೇಳೋಗಿ” ಎಂದು ಹೇಳಿದ್ದಾರೆ.

ದೇವೇಗೌಡರು ಪತ್ರಕರ್ತರಿಗೆ ಚಾಟಿ ಬೀಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೆಚ್ಚುಗೆ ಗಳಿಸುತ್ತಿದೆ. “ದೇವೇಗೌಡರು 80-90 ದಶಕದಲ್ಲಿ ಹೇಗಿದ್ದಿರಬಹುದು?” ಎನ್ನುವ ಮಾತುಗಳು ಹರಿಹಾಡುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಮೋದಿ ಶ್ಲಾಘಿಸುವ ಭರದಲ್ಲಿ ಮಾನ ಕಳೆದುಕೊಳ್ಳುತ್ತಿರುವ ಬಿಜೆಪಿ ನಾಯಕರು!

ಕೇಂದ್ರದಿಂದ ಬರ ಪರಿಹಾರ ಘೋಷಣೆಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನುಅಭಿನಂದಿಸಿ ಬಿಜೆಪಿ ನಾಯಕರು...

ಬರ ಪರಿಹಾರ | ಕೇಳಿದ್ದು 18 ಸಾವಿರ ಕೋಟಿ – ಕೊಟ್ಟಿದ್ದು 3 ಸಾವಿರ ಕೋಟಿ; ಬಿಜೆಪಿ ವಿರುದ್ಧ ನೆಟ್ಟಿಗರ ಕಿಡಿ

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದರೂ, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...