- ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೊಸ ಮಂಡಳಿ ರಚನೆ
- ಭರವಸೆ ಕೊಟ್ಟು ಮೋಸ ಮಾಡುವುದು ನಮ್ಮ ಕೆಲಸವಲ್ಲ
ಚುನಾವಣೆ ಹೊತ್ತಿನಲ್ಲಿ ಭರ್ಜರಿ ಘೋಷಣೆಗಳ ಮೂಲಕ ಜನ ಸೆಳೆಯುವ ರಾಜ್ಯ ಸರ್ಕಾರದ ಕಾರ್ಯ ಮುಂದುವರೆದಿದೆ. ಅದರ ಮುಂದುವರೆದ ಭಾಗವಾಗಿ ಹೊಸದೊಂದು ಭರವಸೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕ ಅಭಿವೃದ್ದಿಗೆ ಕಿತ್ತೂರು ಕರ್ನಾಟಕ ಮಂಡಳಿ ರಚನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಬಸವರಾಜ ಬೊಮ್ಮಾಯಿ, ಬೇರೆ ಪಕ್ಷದವರ ತರ ಈಡೇರದ ಭರವಸೆಗಳನ್ನು ಕೊಟ್ಟು ಮೋಸ ಮಾಡುವುದು ನಮ್ಮ ಕೆಲಸವಲ್ಲ, ನಮ್ಮ ಸರ್ಕಾರದ ಕೆಲಸಗಳೇ ನಮ್ಮ ಗ್ಯಾರಂಟಿ ಕಾರ್ಡ್ ಎಂದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸುಳ್ಳು ಆಶ್ವಾಸನೆ ನೀಡುವುದು ಗ್ಯಾರಂಟಿ ಅಲ್ಲ. ಕಾಂಗ್ರೆಸ್ ನ ಗ್ಯಾರಂಟಿಗಳನ್ನು ನಂಬುವುದಕ್ಕೆ ಇದು ಛತ್ತೀಸ್ ಘಡ, ರಾಜಸ್ತಾನ ಅಲ್ಲ. ಇದು ಕರ್ನಾಟಕ. ನಮ್ಮ ಜನ ಬಹಳ ಜಾಣರಿದ್ದಾರೆ ಎಂದರು.
ಕೃಷ್ಣೆಯ ಮೇಲೆ ಅಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನವರು, ಕೃಷ್ಣಾ ಯೋಜನೆಗೆ ವರ್ಷಕ್ಕೆ 10 ಸಾವಿರ ಕೋಟಿ ಕೊಟ್ಟಿದ್ದೇವೆ ಎಂದರು. ಆದರೆ ನೀವು ಕೊಟ್ಟಿರೋದು 6 ಸಾವಿರ ಕೋಟಿ ರೂ. ಮಾತ್ರ ಎಂದು ಸಿಎಂ ಕುಟುಕಿದರು.