ದೇವನಹಳ್ಳಿ ರೈತ ಹೋರಾಟ: ಹತ್ತು ದಿನಗಳ ಗಡುವು ಪಡೆಯುವುದೇ ಸರ್ಕಾರ?

Date:

Advertisements

ದೇವನಹಳ್ಳಿ ಭೂಸ್ವಾಧೀನ ಕುರಿತು ಚನ್ನರಾಯಪಟ್ಟಣ ರೈತರ ಹೋರಾಟ ಮತ್ತು ಬೇಡಿಕೆಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಗುರುವಾರ ಸುದೀರ್ಘ ಸಭೆ ನಡೆಸಿದರು.

ಜೂನ್ 23ರಂದು ರೈತ ಹೋರಾಟಗಾರರು, ಸಾಹಿತಿಗಳು, ಸಿನಿಮಾ ನಟರು ಸೇರಿ ಕರೆ ನೀಡಿದ್ದ ‘ದೇವನಹಳ್ಳಿ ಚಲೋ’ ದಿನ ಸರ್ಕಾರ ಹೋರಾಟಗಾರರನ್ನು ಬಂಧಿಸಿತ್ತು. ಇದರಿಂದ ಸರ್ಕಾರದ ವಿರುದ್ಧ ತೀವ್ರ ಟೀಕೆಗಳು ಕೇಳಿಬಂದವು. ಸಿಎಂ ದೆಹಲಿಯಿಂದ ಹಿಂತಿರುಗಿದ ನಂತರ ಜುಲೈ 4ರಂದು ಚನ್ನರಾಯಪಟ್ಟಣ ರೈತರ ಜೊತೆ ವಿಶೇಷ ಸಭೆ ನಡೆಸುವುದಾಗಿ ಘೋಷಿಸಿದ್ದರು.

ಇದನ್ನು ಓದಿದ್ದೀರಾ? ದೇವನಹಳ್ಳಿ ರೈತ ಹೋರಾಟ | ಇಂದಿನಿಂದ ಅಹೋರಾತ್ರಿ ಧರಣಿ

Advertisements

ಸರ್ಕಾರದ ಭರವಸೆಯನ್ನು ಕೇಳಿಸಿಕೊಂಡ ರೈತರು ಅಂತಿಮವಾಗಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಶಪಥ ಮಾಡಿ ಸರ್ಕಾರ ವಿರುದ್ಧ ಅಂತಿಮ ಹೋರಾಟಕ್ಕೆ ಸಜ್ಜಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರದ(ಜುಲೈ 4) ಸಭೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿಯವರು ಸಂಬಂಧಿಸಿದ ಸಚಿವರು ಮತ್ತು ಅಧಿಕಾರಿಗಳ ಜೊತೆ ಗುರುವಾರ ಸಭೆ ನಡೆಸಿದರು.

ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರು ರೈತ ಹೋರಾಟಗಾರರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು ಇನ್ನೂ ಹತ್ತು ದಿನಗಳ ಸಮಯಾವಕಾಶ ಕೋರಿದ್ದಾರೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಸಿದ್ದರಾಮಯ್ಯ ಅವರು ರೈತರ ಪರವಾಗಿ ನಿಲುವು ವ್ಯಕ್ತಪಡಿಸಿ ಮಾತನಾಡಿದ್ದಾರೆ ಎಂದು ಖಚಿತ ಮೂಲಗಳು ಹೇಳಿವೆ.

ಸರ್ಕಾರ ಶುಕ್ರವಾರ ರೈತರೊಂದಿಗೆ ಸಭೆ ಸರ್ಕಾರ ನಡೆಸುತ್ತಾ ಅಥವಾ ನಡೆಸಿದರೂ ಅಂತಿಮವಾಗಿ ರೈತರ ಬೇಡಿಕೆ ಈಡೇರುತ್ತಾ ಎಂಬುದನ್ನು ಕಾದು ನೋಡಬೇಕು.

ಡಿಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಐದು ಇಲಾಖೆಗಳ ಉನ್ನತ ಅಧಿಕಾರಿಗಳು ಗುರುವಾರದ ಸಭೆಯಲ್ಲಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X