ಧಾರವಾಡ | ಪಾಲಿಕೆ ಮೇಯರ್ ಹುದ್ದೆ ಮತ್ತೆ ಬಿಜೆಪಿ ಪಾಲು

Date:

Advertisements

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ವೀಣಾ ಭರದ್ವಾಡ ಆಯ್ಕೆಯಾಗಿದ್ದಾರೆ. ವೀಣಾ ಅವರು ಪಾಲಿಕೆಯ 22ನೇ ಮೇಯರ್‌ ಆಗಿ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ.

ಮಂಗಳವಾರ, ಪಾಲಿಕೆಯ ಮೇಯರ್ ಹುದ್ದೆಗೆ ಚುನಾವಣೆ ನಡೆದಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ವೀಣಾ ಭರದ್ವಾಡ ಅವರು 46 ಮತಗಳನ್ನು ಪಡೆದು, ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ. ಇನ್ನು , ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸುವರ್ಣ ಕಲ್ಲಕುಂಟ್ಲ 37 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಈ ಹಿಂದಿನ ಮೇಯರ್ ಆಗಿದ್ದ ಈರೇಶ ಅಂಚಟಗೇರಿ ಅವರು ನೂತನ ಮೇಯರ್‌ಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.

Advertisements

ಈ ಬಾರಿ ಮೇಯರ್ ಹುದ್ದೆಯನ್ನು ಕಾಂಗ್ರೆಸ್‌ ಪಡೆದುಕೊಳ್ಳಬಹುದು ಎಂದು ಹೇಳಲಾಗುತ್ತಿತ್ತು. ಲಿಂಗಾಯತ ಸಮುದಾಯ ಪ್ರಭಾವಿ ನಾಯಕ ಜಗದೀಶ್‌ ಶೆಟ್ಟರ್‌ ಇತ್ತೀಚೆಗೆ ಬಿಜೆಪಿ ತೆರೆದು ಕಾಂಗ್ರೆಸ್‌ ಸೇರಿದ್ದರು. ಹೀಗಾಗಿ, ಪಾಲಿಕೆಯಲ್ಲಿರುವ ಶೆಟ್ಟರ್‌ ಬೆಂಬಲಿತ ಬಿಜೆಪಿ ಸದಸ್ಯರು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಚಲಾಯಿಸಬಹುದು ಅಥವಾ ಮತದಾನದಿಂದ ದೂರ ಉಳಿಯಬಹುದು ಎಂದು ಅಂದಾಜಿಸಲಾಗಿತ್ತು.

ಅವರು ಮತದಾನದಿಂದ ದೂರ ಉಳಿದರೂ ಕಾಂಗ್ರೆಸ್‌ಗೆ ಗೆಲುವಿನ ಹಾದಿ ಸುಲಭವೆಂಬ ಲೆಕ್ಕಾಚಾರಗಳೂ ರಾಜಕೀಯ ವಲಯದಲ್ಲಿ ಕೇಳಿಬಂದಿದ್ದವು. ಇದೆಲ್ಲದರ ನಡುವೆಯೇ ಚುನಾವಣೆ ನಡೆದಿದ್ದು, ಯಾವುದೇ ಅಡ್ಡ ಮತದಾನ ಅಥವಾ ಗೈರಾಗದ ಕಾರಣ ಬಿಜೆಪಿ ಮತ್ತೆ ಪಾಲಿಕೆಯ ಮೇಯರ್ ಹುದ್ದೆಯನ್ನು ತನ್ನದಾಗಿಸಿಕೊಂಡಿದೆ.

ಬಿಜೆಪಿ ಮುಖಂಡನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಿಸಲು ಕೋರ್ಟ್‌ ಅನುಮತಿ ನೀಡದ ಕಾರಣ, ಅವರು ಮತದಾನದಿಂದ ದೂರು ಉಳಿದಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

Download Eedina App Android / iOS

X