ಡಯಾಲಿಸಿಸ್ ಸಿಬ್ಬಂದಿ ವೇತನ ಬಾಕಿ; ಎರಡು ವಾರದೊಳಗೆ ಪಾವತಿಗೆ ಆರೋಗ್ಯ ಸಚಿವ ಸೂಚನೆ

Date:

Advertisements
  • ಏಜನ್ಸಿಯವರಿಂದ ಸಮಯಕ್ಕೆ ಸರಿಯಾಗಿ ವೇತನ ಸಿಗುತ್ತಿಲ್ಲ
  • ಹೆಚ್ವುವರಿ ಭತ್ಯೆಗಳು ವರ್ಷಗಳಿಂದ ಬಾಕಿ ಉಳಿದುಕೊಂಡಿದೆ

ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಬಾಕಿ ವೇತನವನ್ನು ಎರಡು ವಾರದೊಳಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಡಯಾಲಿಸಿಸ್ ಸಿಬ್ಬಂದಿ ಪ್ರತಿನಿಧಿಗಳ ಸಮಸ್ಯೆಗಳನ್ನು ಆಲಿಸಿದ ಸಚಿವರು, ಸಮಸ್ಯೆಗಳನ್ನು ಒಂದೊಂದಾಗಿ ಬಗೆಹರಿಸುವುದಾಗಿ ಭರವಸೆ ನೀಡಿದರು.

ರಾಜ್ಯಾದ್ಯಂತ ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಪ್ರತಿನಿಧಿಗಳು ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಏಜನ್ಸಿಯವರಿಂದ ಸಮಯಕ್ಕೆ ಸರಿಯಾಗಿ ವೇತನ ದೊರೆಯುತ್ತಿಲ್ಲ.‌ ಅಲ್ಲದೇ ಹೆಚ್ವುವರಿ ಭತ್ಯೆಗಳು ವರ್ಷಗಳಿಂದ ಬಾಕಿ ಇದೆ ಎಂದು ವಿವರಿಸಿದರು.

Advertisements

ಇಲ್ಲಿಯವರೆಗೂ ಏಜನ್ಸಿಯವರಿಂದ ಪಿ.ಎಫ್ ಪಾವತಿಯಾಗಿಲ್ಲ. ಸಮಸ್ಯೆ ಹೀಗೆ ಮುಂದುವರಿದರೆ ಕಾರ್ಯ ಸ್ಥಗಿತಗೊಳಿಸಿ, ಪ್ರತಿಭಟನೆ ನಡೆಸಲು ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ 800 ಸಿಬ್ಬಂದಿ ನಿರ್ಧರಿಸಿದ್ದೇವೆ ಎಂದು ಮನವರಿಕೆ ಮಾಡಿದರು.

ಸಿಬ್ಬಂದಿಗಳ ಮನವೊಲಿಸುವಲ್ಲಿ ಯಶಸ್ವಿಯಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯ ಸ್ಥಗಿತವಾಗಬಾರದು. ಏಜನ್ಸಿಯವರೊಂದಿಗೆ ಮಾತುಕತೆ ನಡೆಸಿ ಬಾಕಿ ವೇತನ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎಂದರು.

ಏಜನ್ಸಿ ಗುತ್ತಿಗೆ ಅವಧಿ ಮುಗಿದಿರುವುದರಿಂದ ವೇತನ ಪಾವತಿಯಲ್ಲಿ ಸಮಸ್ಯೆಯಾಗಿದ್ದು, ಈಗಿರುವ ಸಂಜೀವಿನಿ ಏಜನ್ಸಿಯವರೊಂದಿಗೆ ಮಾತುಕತೆ ನಡೆಸಲಾಗಿದೆ. ಈ ಬಗ್ಗೆ ಸಿಎಂ ಜೊತೆ ಕೂಡ ಚರ್ಚೆ ನಡೆಸಿ, ಡಯಾಲಿಸಿಸ್ ಕೇಂದ್ರಗಳಲ್ಲಿ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ನನ್ನ ಪುತ್ರ ಲೋಕಸಭೆ ಟಿಕೆಟ್‌ ಆಕಾಂಕ್ಷಿ: ಕೆ ಎಸ್‌ ಈಶ್ವರಪ್ಪ

ಎರಡು ವಾರದೊಳಗೆ ಬಾಕಿ ಇರುವ ಭತ್ಯೆ ಪಾವತಿಗೆ ಕ್ರಮ ಕೈಗೊಳ್ಳಲು ಹೇಳಿದ್ದೇನೆ. ತಲಾ 2 ಸಾವಿರ ರೂಪಾಯಿಯಂತೆ ಡಿಸೆಂಬರ್ ವರೆಗಿನ ಭತ್ಯೆ ಕೊಡಿಸುವುದಾಗಿ ಸಿಬ್ಬಂದಿಗೆ ಭರವಸೆ ನೀಡಿದರು. ಅಲ್ಲದೇ ಮೇ ಮತ್ತು ಜೂನ್ ವೇತನ 15 ದಿನದೊಳಗೆ ಸಿಬ್ಬಂದಿಗಳಿಗೆ ಪಾವತಿಸುವುದಾಗಿ ತಿಳಿಸಿದರು.‌

ಏಜನ್ಸಿಯಿಂದ ಪಿಎಫ್ ಮತ್ತು ಇಎಸ್ ಐಪಿ ದೊರಕಿಸಿಕೊಡುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗಿದೆ. 15 ದಿನಗಳ ಬಳಿಕ ಮತ್ತೊಮ್ಮೆ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳೋಣ ಎಂದು ಸಚಿವ ಗುಂಡೂರಾವ್ ಸಿಬ್ಬಂದಿಗೆ ತಿಳಿಸಿದರು.

ಸಚಿವರ ಸಕಾರಾತ್ಮಕ ಸ್ಪಂದನೆಗೆ ಸಮಾಧಾನಗೊಂಡ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಎಂದಿನಂತೆ ಕಾರ್ಯ ಮುಂದುವರಿಸಲು ನಿರ್ಧರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X