ಬಿಜೆಪಿಯೊಳಗಿನ ಸರ್ವಾಧಿಕಾರಿ ಧೋರಣೆ ಕೊನೆಯಾಗಲಿ: ಬಿಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

Date:

Advertisements
  • ಬಿಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ‌
  • ‘ಯಡಿಯೂರಪ್ಪರಂತಹ ಸಮರ್ಥ ನಾಯಕ ಬಿಜೆಪಿಗೆ ಬೇಕು’

ರಾಜ್ಯ ಬಿಜೆಪಿಯಲ್ಲಿರುವ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು ಎಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಪರೋಕ್ಷವಾಗಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ವಾಗ್ದಾಳಿ‌ ನಡೆಸಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, “ನಾವು ಮಾತನಾಡಿದರೆ ಪಕ್ಷವಿರೋಧಿ, ಅವರು ಮಾತನಾಡಿದರೆ ಪಕ್ಷ ಸಂಘಟನೆ. ಎಂಎಲ್​ಸಿ ಹಾಗೂ ರಾಜ್ಯಸಭಾ ಸ್ಥಾನ ಅವರು ಹೇಳಿದವರಿಗೆ ನೀಡಲಾಗುತ್ತಿದೆ. ಅವರ ಒಳ ಹೊಡೆತಗಳು ಹೇಳತೀರದು” ಎಂದು ಅಸಮಾಧಾನ ಹೊರಹಾಕಿದರು.

“ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ರಾಜ್ಯಕ್ಕೆ ಅವರಂತಹ ಜಾತ್ಯತೀತ ಹಾಗೂ ಸಮರ್ಥ ನಾಯಕ ಬೇಕು. ವಿಜಯದಶಮಿ ದಿನ ಒಂದು ಮಾತು ಹೇಳುತ್ತಿದ್ದೇನೆ; ರಾಜ್ಯದಲ್ಲಿ ಬಿಎಸ್​ವೈ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಸೂಕ್ತ. ಬಿಎಸ್​ವೈ ಹೊರಟರೆ ಲಕ್ಷಾಂತರ ಕಾರ್ಯಕರ್ತರು ಹಿಂದೆ ನಿಲ್ಲುತ್ತಾರೆ” ಎಂದರು.

Advertisements

“ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡೋದು ಬೇಡ ಅಂತ ಒತ್ತಡ ಹಾಕಿದ್ದೆವು. ಕೆಲ ನಾಯಕರು ಯಡಿಯೂರಪ್ಪರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದರು” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೆದ್ದ ಗ್ಯಾರಂಟಿಯನ್ನು ಗೆಲುವನ್ನಾಗಿ ಮಾಡಿಕೊಳ್ಳದ ಮೂರ್ಖರು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತಾದ ಸುದ್ದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡೋಣ. ಒಟ್ಟಾರೆ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು” ಎಂದು ತಿಳಿಸಿದರು.

“ನಾನು ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ. ಮೊನ್ನೆ ಚುನಾವಣೆ ವೇಳೆ ಹೊಸ ಮುಖಗಳಿಗೆ ಟಿಕೆಟ್ ನೀಡಲಾಯಿತು. ಹಳಬರ ಕಾಲು ಏನಾದರೂ ಬಿದ್ದು ಹೋಗಿದ್ದವಾ? ಚುನಾವಣೆ ವೇಳೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಆಗಬೇಕಿತ್ತು. ಆದರೆ, ಅದು ಆಗಲಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X