ಬಿಜೆಪಿಗೆ ದೆಹಲಿ ಗದ್ದುಗೆ | ‘ಈರುಳ್ಳಿ’ಯಿಂದ ಕೈ ತಪ್ಪಿದ ಅಧಿಕಾರ ‘ಗ್ಯಾರಂಟಿ’ಗಳಿಂದ ಲಭಿಸಿತೇ?

Date:

Advertisements

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ದೆಹಲಿ ಗದ್ದುಗೆ ಏರುವ ಸಾಧ್ಯತೆ ದಟ್ಟವಾಗಿದೆ. ಸದ್ಯದ ಟ್ರೆಂಡ್‌ ನೋಡಿದರೆ ಬರೋಬ್ಬರಿ 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯ ಸಿಎಂ ಪಟ್ಟ ಬಿಜೆಪಿ ಪಾಲಾಗುವುದು ಖಚಿತವಾಗಿದ್ದು, ‘ಈರುಳ್ಳಿ’ಯಿಂದ ಹೋದ ಅಧಿಕಾರ ‘ಗ್ಯಾರಂಟಿ’ಗಳಿಂದ ಬಂದಂತಾಗಿದೆ.

ದೆಹಲಿಯಲ್ಲಿ ಬಿಜೆಪಿ ಕೊನೆಯ ಬಾರಿಗೆ ಸರ್ಕಾರ ನಡೆಸಿದ್ದು 1998ರಲ್ಲಿ. ಆಗ ದೇಶದ ಪ್ರಧಾನಿ ವಾಜಪೇಯಿ. ದೇಶದಲ್ಲಿ ಈರುಳ್ಳಿ ಬೆಲೆ ಗಗನಕ್ಕೆ ಏರಿತ್ತು. ದೆಹಲಿ ರಾಜ್ಯ ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ ತಣಿಸಲು ಕೇಂದ್ರ ಮಂತ್ರಿಯಾಗಿದ್ದ, ಆಗಿನ ಸುಷ್ಮಾ ಸ್ವರಾಜ್​ ಅವರನ್ನು ಬಿಜೆಪಿ ದೆಹಲಿ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು.

ಸುಷ್ಮಾ ಸ್ವರಾಜ್ ದೆಹಲಿಯ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಿದ್ದರು. ಆದರೆ, ಅವರು ಅಧಿಕಾರ ನಡೆಸಿದ್ದು ಕೇವಲ 52 ದಿನಗಳು ಮಾತ್ರ. ನಂತರ ಅವರು ಚುನಾವಣೆಯಲ್ಲಿ ಸೋತು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು.ಕಾರಣ ಸುಷ್ಮಾ ಸ್ವರಾಜ್ ಉಳ್ಳಾಗಡ್ಡಿ ಬೆಲೆಯನ್ನು ಬೆಲೆಯನ್ನು ಕಡಿಮೆ ಮಾಡಿ, ಸಾರ್ವಜನಿಕರಿಗೆ ಕೆಜಿಗೆ 5 ರೂಪಾಯಿಯಂತೆ ಈರುಳ್ಳಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ದಿಲ್ಲಿ ಜನ ಇವರ ಭರವಸೆಯನ್ನು ನಂಬಿರಲಿಲ್ಲ. ಬದಲಾಗಿ ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದರು.

Advertisements

ತರಕಾರಿ ಬೆಲೆ ಏರಿಕೆ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗೆ ಇಳಿಯುವಂತೆ ಮಾಡಿತ್ತು. ಸುಷ್ಮಾ ಸ್ವರಾಜ್​ ಅವರನ್ನು ಬಿಜೆಪಿ ಟ್ರಂಪ್ ಕಾರ್ಡ್​ ಆಗಿ ಬಳಕೆ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಲಿಲ್ಲ. ಕಾಂಗ್ರೆಸ್‌ ಬರೊಬ್ಬರಿ 52 ಸ್ಥಾನಗಳಲ್ಲಿ ಗೆಲುವು ಸಾಧಿಸಿ, ಶೀಲಾ ದೀಕ್ಷಿತ್ ಅವರು ಸತತ 15 ವರ್ಷಗಳ ಕಾಲ ಆಡಳಿತ ನಡೆಸಿದರು.

ಅರವಿಂದ್​ ಕೇಜ್ರಿವಾಲ್​ ಅವರ ಉಚಿತ ಕೊಡುಗೆಗಳಿಗೆ ಮುಂದೆ ಈಗ ಮೋದಿ ಗ್ಯಾರಂಟಿಗಳ ಅಸ್ತ್ರದ ಮೂಲಕವೇ ದೆಹಲಿ ಅಧಿಕಾರ ಹಿಡಿಯುವ ಸಾಧ್ಯತೆ ಕಾಣುತ್ತಿದೆ. ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್‌​ಗಳನ್ನು 500 ರೂ.ಗೆ ನೀಡಿವುದು, ವೃದ್ಧಾಪ್ಯ ಪಿಂಚಣಿ 2,500ಕ್ಕೆ ಹೆಚ್ಚಳ ಹಾಗೂ ಮಹಿಳೆಯರಿಗೆ ತಿಂಗಳಿಗೆ 2,500 ರೂ. ನೀಡುವುದಾಗಿ ಘೋಷಣೆ ಮಾಡಿತ್ತು.

ಬಿಜೆಪಿ 46 ಸ್ಥಾನಗಳಲ್ಲಿ ಮುನ್ನಡೆಯಲ್ಲಿರುವುದನ್ನು ನೋಡಿದರೆ ದೆಹಲಿ ಜನತೆ ಬಿಜೆಪಿಯ ಗ್ಯಾರಂಟಿಗಳಿಗೆ ಮನಸೋತು ಆಮ್‌ ಆದ್ಮಿ ಕೈ ಬಿಟ್ಟಂತೆ ಕಾಣುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X