ಅಂಗಿ ಕಳಚಿ ಎಂದರು, ನಾನು ದೇಗುಲದ ಒಳಗೆ ಕಾಲಿಡಲಿಲ್ಲ: ಕೇರಳ ಘಟನೆ ಮೆಲುಕು ಹಾಕಿದ ಸಿದ್ದರಾಮಯ್ಯ

Date:

Advertisements

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ “ಸನಾತನ ಧರ್ಮ ನಿರ್ಮೂಲನೆ” ಹೇಳಿಕೆಯ ಬಗ್ಗೆ ಬಿಜೆಪಿ ನಾಯಕರಿಂದ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ದೇಗುಲದ ಸಿಬ್ಬಂದಿ ಅಂಗಿ ಕಳಚಿ ಎಂದದ್ದಕ್ಕೆ ದೇಗುಲದ ಪ್ರವೇಶ ನಿರಾಕರಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆಯೊಂದನ್ನು ಮೆಲುಕು ಹಾಕಿದ್ದಾರೆ.

ಸಮಾಜ ಸುಧಾರಕ ನಾರಾಯಣ ಗುರುಗಳ 169ನೇ ಜನ್ಮದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಒಮ್ಮೆ, ನಾನು ಕೇರಳದ ದೇವಸ್ಥಾನಕ್ಕೆ ಹೋದಾಗ, ಅವರು ನನ್ನ ಅಂಗಿಯನ್ನು ತೆಗೆದು ಒಳಗೆ ಪ್ರವೇಶಿಸುವಂತೆ ಹೇಳಿದರು. ಆದರೆ ನಾನು ದೇವಸ್ಥಾನ ಪ್ರವೇಶಿಸಲು ನಿರಾಕರಿಸಿದೆ ಮತ್ತು ನಾನು ಹೊರಗಿನಿಂದ ಪ್ರಾರ್ಥನೆ ಮಾಡುತ್ತೇನೆ ಎಂದು ಸಿಬ್ಬಂದಿಗೆ ಹೇಳಿದೆ. ಅಲ್ಲದೆ ಸಿಬ್ಬಂದಿ ಕೆಲವರನ್ನು ಬಿಟ್ಟು ನನ್ನ ಜೊತೆಯಿದ್ದ ಹಲವರಿಗೆ ಅಂಗಿಯನ್ನು ಕಳಚಿ ಎಂದರು. ಆದರೆ ಇದು ಅಮಾನವೀಯ ಪದ್ಧತಿ. ದೇವರ ಮುಂದೆ ಎಲ್ಲರೂ ಸಮಾನರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಾಮಾಜಿಕ ನ್ಯಾಯ ಶಾಶ್ವತವಾಗಿ ಅರಳಲಿ: ಪತ್ರ ಮುಖೇನ ಬಿಜೆಪಿಗೆ ಉದಯನಿಧಿ ಸ್ಟಾಲಿನ್ ತಿರುಗೇಟು

Advertisements

ಹಲವಾರು ದಕ್ಷಿಣ ಭಾರತದ ದೇವಾಲಯಗಳಲ್ಲಿ, ದೇವಾಲಯವನ್ನು ಪ್ರವೇಶಿಸುವ ಮೊದಲು ಪುರುಷರು ತಮ್ಮ ಅಂಗಿಗಳನ್ನು ತೆಗೆಯುವುದು ಸಾಮಾನ್ಯ ಅಭ್ಯಾಸವಾಗಿದೆ. ಬದಲಿಗೆ ಭುಜದ ಮೇಲೆ ಸುತ್ತುವ ಶಾಲು ತರಹದ ‘ಅಂಗವಸ್ತ್ರ’ವನ್ನು ಧರಿಸುವಂತೆ ಹೇಳುತ್ತಾರೆ. ಹಲವು ದೇಗುಲಗಳಲ್ಲಿ ಊಟವನ್ನು ಕೂಡ ಬ್ರಾಹ್ಮಣೇತರ ಸಮುದಾಯಗಳಿಗೆ ಪ್ರತ್ಯೇಕವಾಗಿ ನೀಡಲಾಗುತ್ತದೆ. ಈ ಅಮಾನುಷ ಪದ್ಧತಿಯ ವಿರುದ್ಧ ಹಲವಾರು ಚಳವಳಿಗಳು ನಡೆದರೂ ಸುಧಾರಣೆ ಮಾತ್ರ ಕಂಡಿಲ್ಲ.

ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳ ಕುರಿತು ನಡೆಯುತ್ತಿರುವ ವಿವಾದದ ನಡುವೆ, ತಮಿಳುನಾಡು ಸಂಸದ ಎ ರಾಜಾ ಗುರುವಾರ ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಕಳಂಕ ಹೊಂದಿರುವ ರೋಗಗಳಿಗೆ ಹೋಲಿಸಬೇಕು. ಉದಯನಿಧಿಯವರು ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿರುವುದು ಸರಿಯಾಗಿದೆ ಎಂದು ತಿಳಿಸಿದ್ದಾರೆ.

ಉದಯನಿಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಇತರ ಸಚಿವರು ಪ್ರತಿಕ್ರಿಯಿಸಿದ ರೀತಿಯ ಕುರಿತು ಸಿಎಂ ಸ್ಟಾಲಿನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿಗೆ ಪತ್ರ ಬರೆದಿರುವ ಎಂ ಕೆ ಸ್ಟಾಲಿನ್, ನನ್ನ ಮಗ ಎಲ್ಲಿಯೂ ‘ಜನಾಂಗೀಯ ಹತ್ಯೆ’ ಎಂಬ ಪದವನ್ನು ತಮಿಳು ಅಥವಾ ಇಂಗ್ಲಿಷ್‌ನಲ್ಲಿ ಬಳಸಿಲ್ಲ ಎಂದು ಸಿಎಂ ಮತ್ತೊಮ್ಮೆ ಸ್ಪಷ್ಟಪಡಿಸಿದರು.

ದಬ್ಬಾಳಿಕೆಯ ತತ್ವಗಳ ವಿರುದ್ಧ ಉದಯನಿಧಿ ಅವರ ನಿಲುವನ್ನು ಸಹಿಸಲಾಗದ ಬಿಜೆಪಿ ಪರ ಶಕ್ತಿಗಳು ಸುಳ್ಳು ಸುದ್ದಿ ಹಬ್ಬಿಸಿ, ಸನಾತನ ಚಿಂತನೆಯುಳ್ಳ ಜನರ ಹತ್ಯೆಗೆ ಉದಯನಿಧಿ ಕರೆ ನೀಡಿದ್ದಾರೆ ಎಂದು ಸ್ಟಾಲಿನ್ ಪಿಎಂ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಅಲ್ಲದೆ, ಬಿಜೆಪಿ ಈ ಸುಳ್ಳನ್ನು ಉತ್ತರದ ರಾಜ್ಯಗಳಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಿದೆ ಎಂದು ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X