‘ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತಾನೆ ಎಂಬ ನಿರೀಕ್ಷೆಯೇ ಇರಲಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಅವರ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್ ಶುಕ್ರವಾರ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಬಳಿಕ ಮೊದಲ ಪ್ರತಿಕ್ರಿಯೆ ಈ ರೀತಿ ನೀಡಿದ್ದಾರೆ.
ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷನಾಗಿ ನಿಯುಕ್ತಿಗೊಂಡ ಹಿನ್ನೆಲೆಯಲ್ಲಿ ಪೂಜ್ಯ ತಂದೆಯವರಾದ ಶ್ರೀ @BSYBJP ಅವರ ಆಶೀರ್ವಾದ ಪಡೆಯಲಾಯಿತು. pic.twitter.com/cNnTv1CheM
— Vijayendra Yediyurappa (@BYVijayendra) November 10, 2023
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು ರಾಜ್ಯದ ಬಿಜೆಪಿ ಅಧ್ಯಕ್ಷರಾದ ಬಳಿಕ ರಾಜ್ಯದ ಉದ್ದಗಲಕ್ಕೂ ಇರುವ ಕಾರ್ಯಕರ್ತರು ಕುಣಿದು ಕುಪ್ಪಳಿಸುತ್ತಿದ್ದಾರೆ. ಬಹಳ ಸೂಕ್ತವಾದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ ಪಿ ನಡ್ಡಾ ಅವರು ಬಹಳ ದಿವಸಗಳ ನಂತರ ಒಂದು ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಇದು ಎಲ್ಲ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಕಾರಣವಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲೆಡೆ ಪ್ರವಾಸ ಮಾಡಲಿದ್ದೇನೆ’ ಎಂದು ತಿಳಿಸಿದರು.
ಮೊದಲ ಹೆಜ್ಜೆ ಬೂತಿನೆಡೆಗೆ
ಗುರಿಯು ಒಂದೇ ಗೆಲುವಿನೆಡೆಗೆ
ಕಾರ್ಯಕರ್ತ ನಮ್ಮ ಶಕ್ತಿ
ಮತದಾರ ನಮ್ಮ ಬಂಧು“ಮತ್ತೆ ಬಿಜೆಪಿ -ಮತ್ತೊಮ್ಮೆಮೋದಿ
ಬೂತ್ ಗೆಲ್ಲಿಸಿ -ದೇಶ ಗೆಲ್ಲಿಸಿ
ಸಂಕಲ್ಪ ನಮ್ಮದು -ಆಶೀರ್ವಾದ ನಿಮ್ಮದು🙏”.ಸಂಘಟನೆಗೆ ನವ ಚೈತನ್ಯ ತುಂಬುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ, ಇಂದು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬೂತ್… pic.twitter.com/oeg04oRUj3
— Vijayendra Yediyurappa (@BYVijayendra) November 11, 2023
ಮುಂದಿನ ಲೋಕಸಭಾ ಚುನಾವಣೆಯು ನಮ್ಮ ಗುರಿಯಾಗಿದೆ. ರಾಜ್ಯದಲ್ಲಿ 25ಕ್ಕೂ ಹೆಚ್ಚು ಲೋಕಸಭಾ ಸ್ಥಾನ ಗೆಲ್ಲಬೇಕೆಂಬ ಗುರಿ ಇಟ್ಟಿದ್ದೇವೆ. ಮೋದಿ ಮತ್ತೆ ಪ್ರಧಾನಿಯಾಗಲು ಒಟ್ಟಾಗಿ ಕೆಲಸ ಮಾಡುತ್ತೇವೆ. ಆ ದಿಕ್ಕಿನಲ್ಲಿ ಈಗಾಗಲೇ ಕೆಲಸ ಪ್ರಾರಂಭ ಮಾಡಿದ್ದೇವೆ. ಇನ್ನಷ್ಟು ಮಾಡಬೇಕಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ವಿಜಯೇಂದ್ರ ನೇಮಕವಾಗುವ ಬಗ್ಗೆ ನಿರೀಕ್ಷೆ ಇತ್ತೇ? ಎಂದು ಪತ್ರಕರ್ತರು ಕೇಳಿದ್ದಕ್ಕೆ ಉತ್ತರಿಸಿದ ಬಿ ಎಸ್ ವೈ, ನಾವ್ಯಾರೂ ಈ ಆಯ್ಕೆ ಬಗ್ಗೆ ನಿರೀಕ್ಷೆಯೇ ಮಾಡಿರಲಿಲ್ಲ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ. ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಮಾಡಿ ಎಂದು ಒಂದು ದಿನಾನೂ ದೆಹಲಿಯಲ್ಲಿ ಕೇಳಿಲ್ಲ. ಯಾರನ್ನು ಬೇಕಾದರೂ ವಿಚಾರಿಸಿ. ಅಂತಿಮ ತೀರ್ಮಾನವನ್ನು ತೆಗೆದುಕೊಂಡಿರುವುದು ಬಿಜೆಪಿ ಹೈಕಮಾಂಡ್ ಎಂದು ತಿಳಿಸಿದರು.