ಕಾಶ್ಮೀರ ಭಾರತದ ಕಿರೀಟ; ನಿಮ್ಮ ಮನ ಗೆಲ್ಲಲು ಬಂದಿದ್ದೇನೆ: 370ನೇ ವಿಧಿ ರದ್ದತಿ ಬಳಿಕ ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ

Date:

Advertisements

ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ, “ಕಾಶ್ಮೀರ ಭಾರತದ ಕಿರೀಟ, ನಿಮ್ಮ ಮನ ಗೆಲ್ಲಲು ಬಂದಿದ್ದೇನೆ” ಎಂದು ತಿಳಿಸಿದರು.

ಕಾಶ್ಮೀರದ ರಾಜಧಾನಿ ಶ್ರೀನಗರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಭಕ್ಷಿ ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಕೃಷಿ, ಪ್ರವಾಸೋದ್ಯಮ ಸೇರಿದಂತೆ ಹಲವು ರಂಗಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದರು.

“ವಿಶೇಷಾಧಿಕಾರ ರದ್ದತಿ ಬಳಿಕ ಕಾಶ್ಮೀರ ಅಭಿವೃದ್ದಿಯಲ್ಲಿ ಹೊಸ ಎತ್ತರಗಳನ್ನು ತಲುಪಿದೆ. ಜಮ್ಮು ಕಾಶ್ಮೀರ ಭಾರತದ ಕಿರೀಟ ಇದ್ದಂತೆ. ದಶಕಗಳಿಂದ ಕಾಶ್ಮೀರದ ಬಗ್ಗೆ ಇದ್ದ ಪೂರ್ವಾಗ್ರಹ ಅಂತ್ಯವಾಗಿದೆ. ಜಮ್ಮು ಕಾಶ್ಮೀರದ ಅಭಿವೃದ್ದಿ ಭಾರತದ ಮೊದಲ ಆದ್ಯತೆ” ಎಂದು ತಿಳಿಸಿದರು.

Advertisements

“ಕಮಲದ ಚಿಹ್ನೆಯೊಂದಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷವಾದ ನಂಟು ಇದೆ ಎಂದು ಹೇಳಿದರು. ಬಿಜೆಪಿ ಪಕ್ಷದ ಚಿಹ್ನೆಯಾದ ಕಮಲವು ಕಣಿವೆ ರಾಜ್ಯದ ಎಲ್ಲ ಕೆರೆಗಳಲ್ಲೂ ಕಾಣ ಸಿಗುತ್ತದೆ. ಕಾಶ್ಮೀರದ ಕ್ರಿಕೆಟ್ ಸಂಸ್ಥೆಯ ಲೋಗೋದಲ್ಲೂ ಕಮಲ ಇದೆ” ಎಂದು ಪ್ರಧಾನಿ ಮೋದಿ ಹೇಳಿದರು.

“ಆರ್ಟಿಕಲ್ 370 ರದ್ದತಿ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಜಮ್ಮು ಮತ್ತು ಕಾಶ್ಮೀರ ಮಾತ್ರವಲ್ಲ ಇಡೀ ದೇಶದ ಜನತೆಗೆ ದಾರಿ ತಪ್ಪಿಸಿತ್ತು ಎಂದು ಆರೋಪಿಸಿದ ಪ್ರಧಾನಿ ಮೋದಿ, ಇಂದು ಕಾಶ್ಮೀರ ಅಭಿವೃದ್ದಿ ಕಾಣುತ್ತಿದ್ದು, ಕಾಶ್ಮೀರದ ಯಶಸ್ಸಿನ ಗಾಥೆಯನ್ನು ಇಡೀ ವಿಶ್ವವೇ ನೋಡುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

‘ಮದುವೆಯಾಗಲು ಕಾಶ್ಮೀರಕ್ಕೆ ಬನ್ನಿ’ ಎಂದ ಪ್ರಧಾನಿ

ಸಿನಿಮಾ ಶೂಟಿಂಗ್‌ ಸೇರಿದಂತೆ ಹಲವು ಪ್ರವಾಸೋದ್ಯಮಕ್ಕೆ ಉತ್ತಮವಾದ ಸ್ಥಳ ಜಮ್ಮು ಮತ್ತು ಕಾಶ್ಮೀರ ಎಂದು ಭಾಷಣದಲ್ಲಿ ಉಲ್ಲೇಖಿಸಿದ ಪ್ರಧಾನಿ ಮೋದಿ, ‘ವೆಡ್ ಇನ್ ಇಂಡಿಯಾ’ ಎಂಬ ವಿಚಾರವನ್ನು ಪ್ರಸ್ತಾಪಿಸಿದರು.

“ದೇಶದ ನಿವಾಸಿಗಳಲ್ಲಿ ನನ್ನದೊಂದು ವಿನಂತಿ ಇದೆ. ನೀವು ಮದುವೆಯ ಸಂಭ್ರಮವನ್ನು ಆಚರಿಸಲು ಬೇರೆ ಬೇರೆ ದೇಶಗಳಿಗೆ ಹೋಗುವ ಬದಲು, ಕುಟುಂಬದೊಂದಿಗೆ ವಿಶಾಲವಾದ ಕಾಶ್ಮೀರಕ್ಕೆ ಬಂದು ಮದುವೆಯನ್ನು ಆಚರಿಸಿಕೊಳ್ಳಿ. ಇದರಿಂದಾಗಿ ಸ್ಥಳೀಯ ಜನರಿಗೂ ಉದ್ಯೋಗ ಸಿಕ್ಕಂತಾಗುತ್ತದೆ. ಹಾಗಾಗಿ, ಡೆಸ್ಟಿನೇಷನ್‌ ವೆಡ್ಡಿಂಗ್‌ಗೆ ಕಾಶ್ಮೀರವನ್ನು ಆಯ್ಕೆ ಮಾಡಿಕೊಳ್ಳಬೇಕು” ಎಂದು ಕರೆ ನೀಡಿದರು.

“ಭರವಸೆಗಳನ್ನು ಈಡೇರಿಸಲು ಮೋದಿ ಗ್ಯಾರಂಟಿ ನೀಡಲಾಗಿದೆ. ಮೋದಿಯ ಗ್ಯಾರಂಟಿ, ಪೂರ್ತಿಯಾಗುವ ಗ್ಯಾರಂಟಿ. ದಶಕಗಳಿಂದ ಕಾಶ್ಮೀರದ ಬಗ್ಗೆ ಇದ್ದ ಪೂರ್ವಗ್ರಹ ಅಂತ್ಯವಾಗಿದೆ. ಜಮ್ಮು ಕಾಶ್ಮೀರದ ಅಭಿವೃದ್ಧಿ, ಪ್ರವಾಸೋದ್ಯಮ ಈಗ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ” ಎಂದು ಪ್ರಧಾನಮಂತ್ರಿ ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X