ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಲು ಕುಮಾರಸ್ವಾಮಿ ಅವರಿಗೆ ವಿಷಯಗಳಿಲ್ಲ: ದಿನೇಶ್ ಗುಂಡೂರಾವ್

Date:

Advertisements

ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಬಡವರಿಗೆ ನೆರವಾಗುತ್ತಿದೆ. ಕುಮಾರಸ್ವಾಮಿ ಅವರು ಇನ್ನೂ ಸ್ವಲ್ಪ ಕಾದು ನೋಡಬೇಕು. ಈಗಲೇ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ವೈಎಸ್‌ಟಿ ತೆರಿಗೆ ಆರಂಭವಾಗಿದೆ ಎಂಬ ಎಚ್‌ ಡಿ ಕುಮಾರಸ್ವಾಮಿ ಅವರ ಆರೋಪವನ್ನು ತಳ್ಳಿಹಾಕಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟ ಮುಕ್ತ ಆಡಳಿತವನ್ನು ನೀಡಲು ಹೆಚ್ಚು ಗಮನ ಹರಿಸಿದೆ. ಕುಮಾರಸ್ವಾಮಿ ಹೇಳಿದಂತೆ ಯಾವ ವೈಎಸ್‌ಟಿ ತೆರಿಗೆಯೂ ಇಲ್ಲ. ಸರ್ಕಾರದ ಕಾರ್ಯಗಳಿಂದ ಲಾಭ ಪಡೆಯುತ್ತಿರುವ ಜನಸಾಮಾನ್ಯರ ಮನಸಲ್ಲಿ ಕಾಂಗ್ರೆಸ್ ಆಡಳಿತದ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿದೆ ಎಂದರು.

Advertisements

ಪಾರದರ್ಶಕವಾಗಿ ಗ್ಯಾರಂಟಿಗಳನ್ನ ಸರ್ಕಾರ ಅನುಷ್ಠಾನಕ್ಕೆ ತರುತ್ತಿದೆ. ನೇರವಾಗಿ ದೊಡ್ಡ ಪ್ರಮಾಣದಲ್ಲಿ ಜನರ ಖಾತೆಗೆ ಹಣ ಹಾಕುತ್ತಿದ್ದೇವೆ. ಅದರಲ್ಲಿ ಒಂದು ರೂಪಾಯಿ ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಹೀಗಿರುವಾಗ ಕುಮಾರಸ್ವಾಮಿ ಅವರಿಗೆ ಸರ್ಕರದ ಮೇಲೆ ಟೀಕೆ ಮಾಡಲು ಬೇರೆ ವಿಷಯಗಳಿಲ್ಲ. ಹೇಗಾದರು ಮಾಡಿ ಟೀಕೆ ಮಾಡಬೇಕು ಎಂದು ಟೀಕೆ ಮಾಡುತ್ತಿದ್ದಾರೆ. ಎಚ್‌ ಡಿ ಕುಮಾರಸ್ವಾಮಿ ಅವರದ್ದು, ಆಧಾರರಹಿತ ಆರೋಪ ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಬುಡಕಟ್ಟು ಜನರ ವಿಕಾಸಕ್ಕೆ ದಾರಿ ತೋರಿಸಿ, ಅವರೆ ಮುನ್ನಡೆಯುತ್ತಾರೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ನಾವು ಸ್ಪಷ್ಟವಾದ ಹೆಜ್ಜೆ ಇಡುತ್ತಿದ್ದೇವೆ.‌ ಒಳ್ಳೆಯ ಆಡಳಿತ ಕೊಡುತ್ತೇವೆ. ಜನರಿಗೆ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಸುಧಾರಣೆ ಆಗುತ್ತಿದೆ. ಉತ್ತಮ ವ್ಯವಸ್ಥೆ ನಿರ್ಮಾಣ ಆಗಿದೆ. ಜನಪರ ಆಡಳಿತ ಕೊಡಲು ಆದ್ಯತೆ ನೀಡುತ್ತಿದ್ದೇವೆ. ಕುಮಾರಸ್ವಾಮಿ ತಾಳ್ಮೆಯಿಂದ ಇದ್ದರೆ ಒಳ್ಳೆಯದು. ನಾವು ಯಾವ ರೀತಿ ಕೆಲಸ ಮಾಡಬೇಕು ಎಂದು ಸ್ವಲ್ಪ ದಿನ ಕಾದು ನೋಡಬೇಕು. ಇಷ್ಟು ಬೇಗನೆ ಅವರು ಎಲ್ಲೋ ಒಂದು ಕಡೆ ಮೈ ಪರಚುವ ಕೆಲಸ ಮಾಡಬಾರದು ಎಂದು ತಿರುಗೇಟು ನೀಡಿದರು.

ಕೊರೊನಾ ವೇಳೆ ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರದ ತನಿಖೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆ ಸಂಬಂಧ ಸಾಕಷ್ಟು ಮಾಹಿತಿ ಕಲೆ ಹಾಕಿದ್ದೇವೆ. ಯಾವ ರೀತಿ ತನಿಖೆ ಮಾಡಬೇಕು ಎಂಬ ಬಗ್ಗೆ ಪರಿಶೀಲಿಸುತ್ತಿದ್ದೇವೆ.‌ ಸಮಿತಿ ರಚನೆ ಮಾಡಿ ತನಿಖೆ ಮಾಡಬೇಕಾ ಎಂಬ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X