‘ಕೆಎಸ್‌ಪಿಸಿಬಿ’ಯಲ್ಲಿ 152 ಹುದ್ದೆಗಳಿಗೆ ನೇರ ನೇಮಕಾತಿ: ಸಚಿವ ಈಶ್ವರ ಬಿ. ಖಂಡ್ರೆ

Date:

Advertisements

“ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್‌ಪಿಸಿಬಿ) 152 ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇರ ನೇಮಕಾತಿಯಿಂದ ಭರ್ತಿ ಮಾಡಲಾಗುವುದು” ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

“ಮಂಡಳಿಗೆ ಮಂಜೂರಾಗಿರುವ 253 ಹುದ್ದೆಗಳ ಪೈಕಿ 152 ಹುದ್ದೆಗಳು ತಾಂತ್ರಿಕ, ಪ್ರಯೋಗಶಾಲೆ ಹಾಗೂ ಆಡಳಿತ ವಿಭಾಗಗಳಲ್ಲಿ ಖಾಲಿ ಇವೆ. 152 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮವಹಿಸಲಾಗಿದೆ” ಎಂದು ಹೇಳಿದ್ದಾರೆ.

“ಈ ಹಿಂದೆ ಮಂಡಳಿಯಲ್ಲಿ 153 ಖಾಲಿ ಹುದ್ದೆಗಳ ಭರ್ತಿಗೆ 2010ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಕಾರಣಾಂತರದಿಂದ ಹಲವು ಹುದ್ದೆಗಳು ಭರ್ತಿ ಆಗಿಲ್ಲ. ಈ ಹುದ್ದೆಗಳೂ ಸೇರಿದಂತೆ ಪ್ರಸ್ತುತ ಮಂಡಳಿಯಲ್ಲಿ ರಾಜ್ಯ ವ್ಯಾಪಿ ಉಳಿಕೆ ವೃಂದ ಹಾಗೂ ರಾಜ್ಯ ವ್ಯಾಪಿ ಸ್ಥಳೀಯ ವೃಂದದಡಿಯಲ್ಲಿ ಖಾಲಿಯಿರುವ ಹುದ್ದೆಗಳ ಪೈಕಿ ಬಹುತೇಕ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

Advertisements

“ರಾಜ್ಯವ್ಯಾಪಿ ಉಳಿಕೆ ವೃಂದದ 146 ಮತ್ತು ರಾಜ್ಯ ವ್ಯಾಪಿ ಸ್ಥಳೀಯ ವೃಂದದ 6 ಸೇರಿ 152 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ಸರ್ಕಾರ ಈಗಾಗಲೇ ಅನುಮತಿಸಿದೆ” ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 625 ಅಂಗಡಿಗಳಲ್ಲಿ ಇನ್ನು ಕನ್ನಡ ನಾಮಫಲಕ ಅಳವಡಿಕೆ ಬಾಕಿ

“23 ಹುದ್ದೆಗಳನ್ನು ಬ್ಯಾಕ್‌ಲಾಗ್ ಎಂದು ಪರಿಗಣಿಸಿದಲ್ಲಿ, 152 ಹುದ್ದೆಗಳೊಂದಿಗೆ 23 ಹುದ್ದೆಗಳನ್ನೂ ಸೇರಿಸಿ ಒಟ್ಟು 175 ಹುದ್ದೆಗಳನ್ನು ಭರ್ತಿ ಮಾಡಿದರೆ ಶೇಕಡ 69ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿದಂತಾಗುತ್ತದೆ” ಎಂದು ಸಚಿವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X