ಟೈಲರ್‌ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

Date:

Advertisements

ಟೈಲರ್‌ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಯನಗರ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ನ 25 ನೇ ವರ್ಷದ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

“ಅಸಂಘಟಿತ ಕಾರ್ಮಿಕರಾಗಿರುವ ಟೈಲರ್ ಗಳ ಹಿತ ಕಾಯಲು ಸರ್ಕಾರ ಬದ್ದವಾಗಿದೆ. ಶ್ರಮಿಕ ವರ್ಗದ ಜನ ಈ ನಾಡಿನ ಆಸ್ತಿ. ಅಸಂಘಟಿತ ಕಾರ್ಮಿಕರಾಗಿರುವ ಟೈಲರ್ ಗಳ ರಕ್ಷಣೆ ನಮ್ಮ ಕರ್ತವ್ಯ. ನಾವು ನಿಮ್ಮ ಜತೆಗೆ ಇದ್ದೇವೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

“ಇಂದು ಹುತಾತ್ಮರ ದಿನ. ನಮಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಶ್ರೀರಾಮನ ಅಪಾರ ಭಕ್ತ ಮಹಾತ್ಮಗಾಂಧಿಯನ್ನು ನಾಥೂರಾಂ ಗೋಡ್ಸೆ ಕೊಂದು ಹಾಕಿದ ದಿನ. ಹಂತಕ ಗೋಡ್ಸೆ ಬೆಂಬಲಕ್ಕೆ ನಿಂತಿರುವವರು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅವರು ಸಮಾಜ ವಿರೋಧಿಗಳು” ಎಂದು ಹೇಳಿದರು.

ವಸತಿ ಸಚಿವ ಜಮೀರ್ ಅಹಮದ್, ಶೃಂಗೇರಿ ಶಾಸಕರಾದ ರಾಜುಗೌಡ, ಅಸೋಸಿಯೇಷನ್ ಅಧ್ಯಕ್ಷರಾದ ನಾರಾಯಣ್ ಸೇರಿ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X