3 ತಿಂಗಳೊಳಗೆ ಎಲ್ಲ ಮಹಿಳೆಯರಿಗೂ ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್ ವಿತರಣೆ : ರಾಮಲಿಂಗಾರೆಡ್ಡಿ

Date:

  • ಭಾನುವಾರ ಅಧಿಕೃತ ಚಾಲನೆ ಪಡೆದುಕೊಳ್ಳಲಿರುವ ಶಕ್ತಿ ಯೋಜನೆ
  • ನಾಳೆ ಸಾಂಕೇತಿಕವಾಗಿ ಕೆಲವರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುತ್ತೇವೆ

ಶಕ್ತಿಯೋಜನೆ ಮಹಿಳಾ ಪ್ರಯಾಣಿಕರಿಗೆ ಯೋಜನೆ ಲಾಭ ಪಡೆಯಲು ಅಗತ್ಯವಿರುವ ಸ್ಮಾರ್ಟ್ ಕಾರ್ಡ್ ಗಳನ್ನು ಮೂರು ತಿಂಗಳ ಒಳಗಾಗಿ ಒದಗಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಈ ಕುರಿತು ಮಾಹಿತಿ ಹಂಚಿಕೊಂಡ ಅವರು, ನಮ್ಮ ಪಕ್ಷದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ “ಶಕ್ತಿ ಯೋಜನೆ”ಗೆ ನಾಳೆ (ಭಾನುವಾರ) ಚಾಲನೆ ದೊರಕಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದು, ಮೆಜಸ್ಟಿಕ್ ನಿಂದ ವಿಧಾನಸೌಧದ ವರೆಗಿನ ಮಾರ್ಗವೊಂದರಲ್ಲಿ ಕಂಡಕ್ಟರ್ ಮಾದರಿಯಲ್ಲಿ ಪ್ರಯಾಣಿಕರಿಗೆ ಟಿಕೆಟ್ ನೀಡಲಿದ್ದಾರೆ. ಇದೇ ವೇಳೆ ಕೆಲವರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್‌ಗಳ ವಿತರಣೆ ಮಾಡಲಿದ್ದೇವೆ ಎಂದು ಸಚಿವರು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಿಯಮಾವಳಿಗಳಂತೆ ಯೋಜನೆ ಲಾಭ ಪಡೆಯ ಬಯಸುವವರು, ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು ಮೂರು ತಿಂಗಳು ಅವಧಿ ನೀಡಲಾಗಿದೆ. ಹಾಗೆಯೇ ಯಾವ ಬಸ್‌ಗಳಿಗೆ ಈ ಯೋಜನೆ ಅನ್ವಯವಾಗಲಿದೆ ಎನ್ನುವುದರ ಬಗೆಗೂ ಜಾಹೀರಾತು ಸಹಿತ ಸ್ವಷ್ಟ ಮಾಹಿತಿ ಕೊಟ್ಟಿದ್ದೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲಬೇಡ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲಗಳಿಲ್ಲ: ಸಿಎಂ ಸಿದ್ದರಾಮಯ್ಯ

ಇನ್ನು ಕೆಲವು ಭಾಗಗಳಲ್ಲಿ ಬಸ್ ಇಲ್ಲ ಎನ್ನುವ ದೂರು ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಹಾಗೆಯೇ ಎಲ್ಲೆಲ್ಲಿ ಬಸ್ ನಿಲುಗಡೆಗೆ ಅವಕಾಶವಿದೆಯೋ ಅಲ್ಲೆಲ್ಲ ಕಡ್ಡಾಯವಾಗಿ ಚಾಲಕರು ಬಸ್ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಸಚಿವರು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...