ಡಿಕೆಶಿ ಪ್ರಕರಣ ವಾಪಸ್ | ಎಫ್‌ಐಆರ್ ಇಲ್ಲದೆಯೇ ಸಿಬಿಐಗೆ ವಹಿಸಿದ್ದ ಬಿಜೆಪಿ: ದಾಖಲೆ ತೋರಿದ ಪ್ರಿಯಾಂಕ್ ಖರ್ಗೆ

Date:

Advertisements

‘ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇವಲ ಮೌಖಿಕ ಸೂಚನೆ ನೀಡಿ ಒಬ್ಬ ಶಾಸಕ(ಡಿಕೆ ಶಿವಕುಮಾರ್)ನ ವಿರುದ್ಧ ಸಿಬಿಐ ತನಿಖೆಗೆ ಆದೇಶ ನೀಡಿದ್ದು ರಾಜಕೀಯ ಪ್ರೇರಿತ. ಎಫ್‌ಐಆರ್ ಇಲ್ಲದೆಯೇ ಸಿಬಿಐಗೆ ವಹಿಸಿದ್ದ ಪ್ರಕರಣವಾಗಿತ್ತು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ವಿರುದ್ಧ 2019ರಲ್ಲಿ ಸಿಬಿಐ ತನಿಖೆಗೆ ಬಿಎಸ್ ಯಡಿಯೂರಪ್ಪ ನೇತೃತ್ವದ ಅಂದಿನ ಬಿಜೆಪಿ ಸರ್ಕಾರ ನೀಡಿದ್ದ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿರುವ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ವಿರೋಧ ಪಕ್ಷವನ್ನು ಮುಗಿಸಬೇಕು ಅಂತ ಸಂಚು ರೂಪಿಸುತ್ತಿದೆ. ವಿಪಕ್ಷದವರ ಧ್ವನಿಯನ್ನು ದಮನಿಸಲು ಕೆಲವರನ್ನು ಐಟಿ ಮತ್ತು ಇಡಿ ಮೂಲಕ ಹೆದರಿಸುತ್ತಿದೆ. ಎಐಸಿಸಿ ಅಧ್ಯಕ್ಷರಿಂದ ಹಿಡಿದು ಕೆಪಿಸಿಸಿ ಅಧ್ಯಕ್ಷರ ತನಕವೂ ನಾಯಕರ ವಿರುದ್ದ ಸಂಚು ರೂಪಿಸುತ್ತಿದೆ. ಅನಾವಶ್ಯಕವಾಗಿ ಡಿ ಕೆ ಶಿವಕುಮಾರ್​ ಅವರ ವಿರುದ್ದ ಹಿಂದಿನ ಬಿಜೆಪಿ ಸರ್ಕಾರ ಸಂಚು ರೂಪಿಸುವ ಕೆಲಸ ಮಾಡಿತ್ತು. ಬಿಜೆಪಿಯವರು ಕೊಲೆ ಮಾಡಿದರೂ ಪರವಾಗಿಲ್ಲ ಅಂತವರಿಗೆ ಏನೂ ಆಗಿಲ್ಲ. ಆದರೆ ನಮ್ಮನ್ನು ಮಾತ್ರ ಹೆದರಿಸುತ್ತಾರೆ’ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದರು.

Advertisements

‘ಯಾವುದಾದರೂ ಒಂದು ಪ್ರಕರಣವನ್ನು ಸಿಬಿಐಗೆ ವಹಿಸಬೇಕಾದರೆ ಪ್ರಮುಖವಾಗಿ ಐದು ಅಂಶಗಳನ್ನು ಒದಗಿಸಬೇಕು. ಅದರಲ್ಲಿ ಒಂದು ಕೇಸಿನ ಮಾಹಿತಿ ಬೇಕು, ಪ್ರಕರಣದ ಎಫ್‌ಐಆರ್ ನೀಡಬೇಕು, ನ್ಯಾಯಾಲಯದಲ್ಲಿ ದೂರಾದರೂ ಇರಬೇಕು, ಸಿಬಿಐಗೆ ಹಸ್ತಾಂತರ ಮಾಡುವ ಉದ್ದೇಶ ಏನು, ಸ್ಥಳೀಯ ಪೊಲೀಸರು ಅಥವಾ ರಾಜ್ಯದ ಪೊಲೀಸ್ ಅವರಿಗೆ ವಿಚಾರಣೆ ಮಾಡಕ್ಕಾಗುತ್ತಿಲ್ಲ ಎಂಬ ವಿವರಣೆ ನೀಡಬೇಕು. ಆದರೆ ಅದ್ಯಾವುದನ್ನೂ ಪಾಲಿಸದ ಬಿಜೆಪಿ ಸರ್ಕಾರ, ಡಿ ಕೆ ಶಿವಕುಮಾರ್ ಅವರ ವಿರುದ್ಧ 13 ತಿಂಗಳ ನಂತರ ಅಂದರೆ ಅಕ್ಟೋಬರ್ 3, 2020ರಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದೆ. ಹಾಗಾಗಿ, ಸಿಬಿಐಗೆ ವಹಿಸಿರುವುದು ಸಂಪೂರ್ಣ ರಾಜಕೀಯ ಪ್ರೇರಿತ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Priyank Kharge 2

‘ಕೇವಲ ಮೌಖಿಕ ಆದೇಶ ನೀಡಿ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐಗೆ ನೀಡಿರುವ ಪ್ರಕರಣ ಕಾನೂನಾತ್ಮಕವೇ ಆಗಿರಲಿಲ್ಲ. ಬಿಜೆಪಿಯವರು ಕಾನೂನಿಗೆ ವಿರುದ್ಧ ಮಾಡಿರುವುದನ್ನು ನಾವು(ಕಾಂಗ್ರೆಸ್) ಕಾನೂನಾತ್ಮಕವಾಗಿ ವಾಪಸ್ ತಗೊಂಡ್ರೆ ಇವರು ಬೆಂಕಿ ಬಿದ್ದಂಗೆ ಆಡುತ್ತಿದ್ದಾರೆ. ಸುಪ್ರೀಂ ಕೋರ್ಟಿನ ಮೂರು ಆದೇಶಗಳ ಅನುಸಾರವಾಗಿಯೇ ನಾವು ಡಿಕೆ ಶಿವಕುಮಾರ್ ವಿರುದ್ಧ 2019ರಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಆದೇಶವನ್ನು ಹಿಂಪಡೆದಿದ್ದೇವೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಂದಿನ ದಾಖಲೆಗಳನ್ನು ತೋರಿಸುತ್ತಾ ಸ್ಪಷ್ಟೀಕರಣ ನೀಡಿದ್ದಾರೆ.

‘ಆದೇಶವನ್ನು ಹಿಂಪಡೆದಿರುವ ಬಗ್ಗೆ ಬಿಜೆಪಿಯವರು ಈಗ ಬೊಬ್ಬೆ ಹೊಡೆಯುತ್ತಿದ್ದಾರೆ. ಆದರೆ, ವಾಸ್ತವ ಏನೆಂದರೆ ಬಿಜೆಪಿ ಸಿಬಿಐಗೆ ನೀಡಿರುವ ಆದೇಶವೇ ಅಕ್ರಮವಾದುದು. ಆಗ ವಿಪಕ್ಷವಾಗಿದ್ದ ನಮ್ಮ ಪಕ್ಷದ ನಾಯಕರನ್ನು ರಾಜಕೀಯವಾಗಿ ಮುಗಿಸಲು ನಡೆಸಿರುವ ಷಡ್ಯಂತ್ರ ಎಂಬುದು ಸ್ಪಷ್ಟ. ಯಾವುದೇ ಸರಿಯಾದ ದಾಖಲೆ ಇಲ್ಲದೆಯೇ ಕೇವಲ ಮೌಖಿಕವಾಗಿ ಸಿಬಿಐಗೆ ವಹಿಸಲಾಗಿತ್ತು ಎಂಬುದು ಸ್ಪಷ್ಟ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಚಿವ ಸಂಪುಟದ ನಿರ್ಧಾರವನ್ನು ಸಮರ್ಥನೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X