ಡಿಕೆ ಶಿವಕುಮಾರ್‌ಗೆ ಸಿಎಂ ಹುದ್ದೆ ವಿಚಾರ; ಚಂದ್ರಶೇಖರ ಸ್ವಾಮೀಜಿ ಸ್ಪಷ್ಟನೆ

Date:

Advertisements

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ಹೇಳಿದ್ದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ, ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಸ್ವಾಮೀಜಿ, “2023ರಲ್ಲಿ ಸರ್ಕಾರ ರಚಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ದಿನಗಳಲ್ಲಿ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿತೆಂಬ ವಿಷಯವನ್ನು ಮಾಧ್ಯಮಗಳಿಂದ ತಿಳಿದುಕೊಂಡಿದ್ದೆ. ಹಾಗಾಗಿ, ಕಾರ್ಯಕ್ರಮದಲ್ಲಿ ಆ ವಿಚಾರವನ್ನು ಪ್ರಸ್ತಾಪಿಸಿದೆ” ಎಂದು ಹೇಳಿದ್ದಾರೆ.

“ಕರ್ನಾಟಕದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್‌ಗೆ 135 ಸ್ಥಾನಗಳನ್ನು ನೀಡಿ ಆಶೀರ್ವದಿಸಿದ್ದರು. ಈ ಯಶಸ್ಸಿನ ಹಿಂದೆ ಸಿದ್ದರಾಮಯ್ಯನವರ ಪಾತ್ರ ಎಷ್ಟಿದೆಯೋ, ಅಷ್ಟೇ ಮಟ್ಟದ ಪಾಲುದಾರಿಕೆ ಡಿ.ಕೆ ಶಿವಕುಮಾರ್ ಅವರದ್ದೂ ಇದೆ. ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿದಾಗೆಲ್ಲ, ಶಿವಕುಮಾರ್ ಟ್ರಬಲ್ ಶೂಟರ್ ಆಗಿ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಬಂದ ತೊಂದರೆಗಳನ್ನೆಲ್ಲ ನಿವಾರಿಸಲು ಮುಖ್ಯ ಪಾತ್ರ ವಹಿಸಿದ್ದಾರೆ” ಎಂದು ಸ್ವಾಮೀಜಿ ಹೇಳಿದ್ದಾರೆ.

Advertisements

ಮಠ 1 ಮಠ2

“ಡಿ.ಕೆ ಶಿವಕುಮಾರ್ ಅವರಿಗೆ ಆಡಳಿತದಲ್ಲಿ ಸಾಕಷ್ಟು ಅನುಭವ ಇರುವುದರಿಂದ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆತರೆ, ಕನ್ನಡ ನಾಡಿಗೆ ಅವರಿಂದ ಹೆಚ್ಚಿನ ಸೇವೆ ದೊರೆಯತ್ತದೆ. ರಾಜ್ಯಕ್ಕೆ ಒಳಿತಾಗುತ್ತದೆ ಎಂಬ ಆಶಯ ನಮ್ಮದು” ಎಂದಿದ್ದಾರೆ.

“ಅವರ ಸೇವೆಗಳ ಕಾರಣದಿಂದ ಅವರು ಮುಖ್ಯಮಂತ್ರಿಯಾಗುವ ಹಾದಿಯನ್ನು ಸುಗಮಗೊಳಿಸಿಕೊಡಬೇಕೆಂದು ನಾವು ವೈಯಕ್ತಿಕವಾಗಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದೇವೆ. ಈ ವಿಷಯ ಕಳೆದ 2-3 ದಿನಗಳಿಂದ ಚರ್ಚೆಯಾಗುತ್ತಿದೆ. ಡಿ.ಕೆ ಶಿವಕುಮಾರ್ ರವರು ನಮ್ಮ ಮೂಲಕ ವೇದಿಕೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದಾರೆ ಎಂಬುದು ಸತ್ಯಕ್ಕೆ ದೂರವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X