ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ?: ಡಿಕೆ ಶಿವಕುಮಾರ್ ತರಾಟೆ

Date:

Advertisements
  • ಪೊಲೀಸ್ ಇಲಾಖೆ ಘನತೆ ಹಾಳಾಗಿದ್ದು, ನಮ್ಮ ಸರ್ಕಾರದಲ್ಲಿ ಎಲ್ಲವೂ ಸ್ವಚ್ಛವಾಗಿರಬೇಕು’
  • ಉನ್ನತ ಪೊಲೀಸ್ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉನ್ನತ ಪೊಲೀಸ್ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ವಿದ್ಯಮಾನ ಮಂಗಳವಾರ ನಡೆಯಿತು.

“ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ” ಎಂದು ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಖಡಕ್‌ ಆಗಿಯೇ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

“ಪಿಎಸ್​ಐ ಅಕ್ರಮದಲ್ಲಿ ಒಬ್ಬ ಎಡಿಜಿಪಿ ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ಎಂಬುದು ತಿಳಿಯುತ್ತದೆ. ಪೊಲೀಸ್ ಇಲಾಖೆ ಘನತೆ ಹಾಳಾಗಿದೆ. ಇದು ಮುಂದುವರಿದರೆ ನಾವು ಸಹಿಸುವುದಿಲ್ಲ. ನಮ್ಮ ಸರ್ಕಾರದಲ್ಲಿ ಎಲ್ಲವೂ ಸ್ವಚ್ಛವಾಗಿರಬೇಕು ಅಷ್ಟೇ” ಎಂದರು.

Advertisements

“ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕಿದ್ದರು. ಇದರ ಅರ್ಥವೇನು? ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ನಾವು ಬಿಡುವುದಿಲ್ಲ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಶಾಂತಿ-ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ

“ಬಿಜೆಪಿ ಸರ್ಕಾರದಲ್ಲಿ ಏನು ಮಾಡಿದ್ದೀರಿ ಎಂಬುದು ಗೊತ್ತಿದೆ. ನಿಮ್ಮ ಆ ವರ್ತನೆ ನಮ್ಮ ಸರ್ಕಾರದಲ್ಲಿ ನಡೆಯುವುದಿಲ್ಲ. ನನ್ನ ಮತ್ತು ಸಿದ್ದರಾಮಯ್ಯರ ಜೊತೆ ಹೇಗೆಲ್ಲ ನಡೆದುಕೊಂಡಿದ್ದೀರಿ ಎಂಬುದು ಬಿಡಿಸಿ ಹೇಳಬೇಕಿಲ್ಲ. ಉರಿಗೌಡ, ನಂಜೇಗೌಡ ಪ್ರಕರಣದಲ್ಲಿ ‌ಏನಾಯ್ತು ಗೊತ್ತಿದೆ. ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಅಂದರೂ ಅವರ ಮೇಲೆ ಕೇಸ್ ಹಾಕಿಲ್ಲ ನೀವು” ಎಂದು ಹರಿಹಾಯ್ದರು.

“ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ನಾವು ನಿಮ್ಮ ಜೊತೆ ಇರುತ್ತೇವೆ. ಈ ಸರ್ಕಾರದ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ, ಅದನ್ನ ಉಳಿಸಿಕೊಳ್ಳಿ. ಜನ ದೊಡ್ಡ ಬದಲಾವಣೆ ನಿರೀಕ್ಷೆ ಮಾಡಿದ್ದಾರೆ. ಅದರಂತೆ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಆಗಬೇಕು. ನೀವು ಯಾರೂ ನಮಗೆ ಹಣ ಕೊಡುವುದು ಬೇಡ. ಉತ್ತಮವಾಗಿ ಕೆಲಸ ಮಾಡಿದರೆ ಸಾಕು” ಎಂದು ಹಿರಿಯ ಪೊಲೀಸರಿಗೆ ಡಿಕೆಶಿ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X