ಕುಮಾರಸ್ವಾಮಿ ಹುಚ್ಚರಾಗಿದ್ದು, ತಾಳ್ಮೆ ಕಳೆದುಕೊಂಡಿದ್ದಾರೆ: ಡಿ ಕೆ ಶಿವಕುಮಾರ್‌ ತಿರುಗೇಟು

Date:

Advertisements
  • ಕುಮಾರಸ್ವಾಮಿಯ ಪೊಗರು, ಬ್ಯಾಕ್ ಮೇಲ್‌ಗೆ ನಾನು ಹೆದರುವುದಿಲ್ಲ
  • ಲೆಕ್ಕ ಬೇಕೇ ಕೊಡುತ್ತೇನೆ, ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ: ಡಿಕೆಶಿ

ಪೊಗರು ಮಾತುಗಳು, ಬ್ಲ್ಯಾಕ್ ಮೇಲ್‌ಗಳಿಗೆ ನಾನು ಹೆದರುವುದಿಲ್ಲ. ಇದು ಅವರಿಗೂ ಗೊತ್ತಿದೆ. ಅವರು ಕೇಳಿರುವ ಎಲ್ಲ ಲೆಕ್ಕ ದಾಖಲೆಗಳನ್ನು ಕೊಡಲು ಸಿದ್ಧ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

ಸದಾಶಿವನಗರ ನಿವಾಸದ ಬಳಿ ಕಾಂಗ್ರೆಸ್ ನವರು ಮೇಕೆದಾಟು ಪಾದಯಾತ್ರೆ, ಕನಕೋತ್ಸವ ಮಾಡಿದಾಗ ಅನುಮತಿ ಪಡೆದು ಕರೆಂಟ್ ಬಳಸಿದ್ದರೆ, ಲುಲು ಮಾಲ್ ಸೇರಿದಂತೆ ದೊಡ್ಡ ಕಟ್ಟಡ ಕಟ್ಟುವಾಗ ಎಷ್ಟು ಕರೆಂಟ್ ಎಳೆದುಕೊಂಡಿಲ್ಲ, ಅದಕ್ಕೆ ಲೆಕ್ಕ ಕೊಡುವರೇ? ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.

“ಕುಮಾರಸ್ವಾಮಿ ಹುಚ್ಚರಾಗಿದ್ದಾರೆ. ಅವರು ತಮ್ಮ ತಾಳ್ಮೆ ಕಳೆದುಕೊಂಡಿದ್ದಾರೆ. ಹತಾಶೆಯಲ್ಲಿ ಅವರು ಬಾಯಿಗೆ ಬಂದದ್ದು ಮಾತನಾಡುತ್ತಿದ್ದಾರೆ. ಅವರು ಏನೇನು ಕೇಳುತ್ತಾರೆ, ಅವರ ಆಚಾರ ವಿಚಾರ, ಮಾತುಗಳಿಗೆ ರಾಜ್ಯದ ಜನ ಈಗಾಗಲೇ ಉತ್ತರ ಕೊಟ್ಟಿದ್ದಾರೆ. ಇನ್ನು ಬೇಕಾದರೆ ಆ ಉತ್ತರವನ್ನು ನಾನು ಕೊಡುತ್ತೇನೆ. ಅವರು ಕೇಳುತ್ತಿರುವ ಲೆಕ್ಕಾಚಾರದ ಪಟ್ಟಿ ಕೊಡೋಣ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿ ಪೂರ್ವ ತಯಾರಿ ಇಲ್ಲದೆ ಆರೋಪ ಮಾಡ್ತಿದ್ದಾರಾ?

ನಿಮ್ಮ ಮಾಲ್ ಅನ್ನು ಖರಾಬು ಭೂಮಿಯಲ್ಲಿ ಕಟ್ಟಿದ್ದೀರಿ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ನಾನು ಮಾಲ್ ಕಟ್ಟಿರುವ ಜಾಗ ಕೇಂದ್ರ ಸರ್ಕಾರದ ಒಂದು ಸಂಸ್ಥೆಗೆ ಸೇರಿದ್ದು. ಆ ಸಂಸ್ಥೆಯವರು ದಾಖಲೆ ಮುಂದಿಟ್ಟು ಟೆಂಡರ್ ಕರೆದಿದ್ದರು. ಅದನ್ನು ನಮ್ಮ ಸ್ನೇಹಿತರು ಖರೀದಿ ಮಾಡಿದ್ದರು. ಅವರಿಂದ ನಾನು ಖರೀದಿ ಮಾಡಿ ಜಂಟಿ ಸಹಯೋಗದಲ್ಲಿ ಮಾಲ್ ಕಟ್ಟಿದ್ದೇವೆ. ಅದರಲ್ಲಿ ಏನಾದರೂ ತಪ್ಪಿದ್ದರೆ ನನ್ನನ್ನು ಗಲ್ಲಿಗೆ ಹಾಕಲಿ. ನನ್ನನ್ನು ಈ ರೀತಿ ನಿಯಂತ್ರಿಸಲು ಅವರು ಈಗಾಗಲೇ ಬೇಕಾದಷ್ಟು ಪ್ರಯತ್ನ ಮಾಡಿದ್ದಾರೆ. ಅವರ ತಂದೆಯವರು ಕೂಡ 10-15 ವರ್ಷಗಳ ಹಿಂದೆಯೇ ಜಯರಾಜ್ ಎಂಬ ಅಧಿಕಾರಿ ಮೂಲಕ ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದರು. ಈಗಲೂ ಯಾವುದೇ ರೀತಿಯ ತನಿಖೆ ಮಾಡಿಸಲಿ. ನಾನು ಎಲ್ಲದಕ್ಕೂ ಸಿದ್ಧ” ಎಂದರು.

“ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಯಾಗಿ ಪ್ರತಿ ಸಂದರ್ಭದಲ್ಲೂ ನನ್ನ ಆಸ್ತಿ ವಿವರ ಘೋಷಿಸಿದ್ದೇನೆ. ನಾನು ಅಕ್ರಮವಾಗಿ ಕರೆಂಟ್ ಬಳಸಿರುವ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ನಾನು ಕಟ್ಟಿರುವ ಮಾಲ್ ಅನ್ನು ನನ್ನ ಪಾರ್ಟ್ನರ್ ಶೋಭಾ ಡೆವಲಪ್ಪರ್ಸ್ ಅವರು ಕಟ್ಟಿದ್ದು, ನೀವು ಎಷ್ಟು ಕರೆಂಟ್ ಬಳಸಿದ್ದೀರಿ ಎಂದು ದಾಖಲೆ ಸಮೇತ ತಂದು ತೋರಿಸಿ ಎಂದು ಅವರಿಗೆ ಹೇಳುತ್ತೇನೆ” ಎಂದು ತಿಳಿಸಿದರು.

ಜಮೀರ್ ಅಹ್ಮದ್ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಕೇಳಿದಾಗ, “ನನಗೆ ಈ ವಿಚಾರ ತಿಳಿದಿಲ್ಲ. ತಿಳಿದ ನಂತರ ಮಾತನಾಡುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X