ತಾಯಂದಿರನ್ನು ಮಂಚಕ್ಕೆ ಕರೆಯುವ ಮುನಿರತ್ನ ವಿರುದ್ಧ ಸಿಎಂ ಕ್ರಮಕೈಗೊಳ್ಳಬೇಕು: ಡಿ ಕೆ ಸುರೇಶ್

Date:

Advertisements

ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ₹30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಅಡಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು ಬೆನ್ನಲ್ಲೇ ಕಾಂಗ್ರೆಸ್ ಮಾಜಿ ಸಂಸದ ಡಿ ಕೆ ಸುರೇಶ್ ಅವರು ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಕ್ರಮಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿರುವ ಆರೋಪ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೇಳಿಬಂದಿದೆ. ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು” ಎಂದು ಒತ್ತಾಯಿಸಿದರು.

“ಎರಡು ಜಾತಿಗಳ ಮಧ್ಯೆ ಸಂಘರ್ಷ ತರುವ ಕೆಲಸವನ್ನು ಮುನಿರತ್ನ ಮಾಡಿದ್ದಾರೆ. ದಲಿತ ಸಮುದಾಯಕ್ಕೆ ಮುನಿರತ್ನ ಕೀಳುಪದಗಳನ್ನು ಬಳಸಿದ್ದಾರೆ. ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಆಗಬೇಕು. ಹಿಂದೆಯೂ ಅವರು ಒಕ್ಕಲಿಗ ಸಮುದಾಯವನ್ನು ಬಹಳ ಕೀಳಾಗಿ ನೋಡಿದ್ದ” ಎಂದು ಆರೋಪಿಸಿದರು.

Advertisements

“ಬಿಜೆಪಿ ನಾಯಕರು ಮುನಿರತ್ನ ಪ್ರಕರಣವನ್ನು ಯಾವ ರೀತಿ ಅರಗಿಸಿಕೊಳ್ಳುತ್ತಾರೋ ಗೊತ್ತಿಲ್ಲ. ಮುನಿರತ್ನ ವಿರುದ್ಧದ ಆರೋಪಗಳಿಗೆ ಬಿಜೆಪಿಯ ಒಬ್ಬರೇ ಒಬ್ಬರೂ ಈವರೆಗೂ ಹೇಳಿಕೆ ನೀಡಿಲ್ಲ. ನೈತಿಕತೆ ಇದ್ದರೆ ಇಷ್ಟೊತ್ತಿಗೆ ಪಕ್ಷದಿಂದ ಮುನಿರತ್ನ ಅವರನ್ನು ವಜಾ ಮಾಡಬೇಕಿತ್ತು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಯೋಮಿತಿ ಸಡಿಲಿಕೆ | ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದಕ್ಕೆ ಸುಣ್ಣ: ಪಿಎಸ್ಐ ಅಭ್ಯರ್ಥಿಗಳ ಅಳಲು

ಸಾರ್ವಜನಿಕ ಜವಾಬ್ದಾರಿ ಸ್ಥಾನದಲ್ಲಿ ಇರುವ ಮಾಜಿ ಸಚಿವ, ಆರ್. ಆರ್. ನಗರ ಕ್ಷೇತ್ರದ ಶಾಸಕರಾಗಿರುವ ಮುನಿರತ್ನ ಬಹಳ ಕೀಳು ದರ್ಜೆಯ ಪದಗಳನ್ನು ಆಡಿದ್ದಾರೆ. ಕೀಳರಿಮೆ ಮನಸ್ಥಿತಿ ಇರುವವರೂ ಯಾರೂ ಕೂಡ ಇಂಥ ಪದ ಬಳಸಲ್ಲ. ಒಂದು ಕಡೆ ರಾಮನ ಜಪ, ಒಂದು ಕಡೆ ಸಂಸ್ಕೃತಿ ಜಪ. ಇನ್ನೊಂದು ಕಡೆ ಅದೇ ತಾಯಂದಿರನ್ನು ಮಂಚಕ್ಕೆ ಕರೆಯುವ ಮಾಜಿ ಮಂತ್ರಿ. ಆರ್‌ಎಸ್‌ಎಸ್‌ ಜೊತೆಗೆ ಒಡನಾಟ ಇಟ್ಟುಕೊಂಡವರು ಇವರು” ಎಂದು ಲೇವಡಿ ಮಾಡಿದರು.

“ಬಿಜೆಪಿ ನಾಯಕರು ಈ ರೀತಿ ಮಾಡುವುದು ಎಷ್ಟು ಸರಿ? ಎರಡು ಜಾತಿಗಳನ್ನು ಎತ್ತಿಕಟ್ಟುವ ಕೆಲಸ ಆಗಿದೆ. ಇನ್ನೊಂದು ಕಡೆ ಲಂಚದ ಆರೋಪ. ನೇರವಾಗಿ ದುಡ್ಡು ತಂದುಕೊಟ್ಟರೆ ಬದುಕುತ್ತೀಯಾ ಎಂದು ಮುನಿರತ್ನ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಥರ ಮಾಡಿದ್ದು ಒಬ್ಬ ಸಾಮಾನ್ಯ ವ್ಯಕ್ತಿಯಲ್ಲ, ಬಿಜೆಪಿ ನಾಯಕ, ಸಿನಿಮಾ ನಿರ್ಮಾಪಕ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X