ಮೂರು ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಡಿಎಂಕೆ

Date:

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕೆಂದು ಡಿಎಂಕೆ ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿದೆ.

ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಪುರಾವೆ ಕಾಯ್ದೆಗಳ ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, ಭಾರತೀಯ ನ್ಯಾಯ ಸಂಹಿತಾ ಹಾಗೂ ಭಾರತೀಯ ಸಾಕ್ಷಿ ಅಧಿನಿಯಮಗಳನ್ನು ಜುಲೈ 1ರಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿದೆ.

ಕಾನೂನುಗಳ ವಿರುದ್ಧ ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್ ಭಾರತಿ ಅವರು ಮದ್ರಾಸ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್.ಎಸ್ ಸುಂದರ್ ಮತ್ತು ಎನ್ ಸೆಂಥಿಲ್ ಕುಮಾರ್ ಅವರಿದ್ದ ವಿಭಾಗೀಯ ಪೀಠವು ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ನೋಟಿಸ್‌ ನೀಡಿದೆ.

“ಸರ್ಕಾರವು ಮೂರು ಮಸೂದೆಗಳನ್ನು ಯಾವುದೇ ಅರ್ಥಪೂರ್ಣ ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಅಂಗೀಕರಿಸಿದೆ” ಎಂದು ಅರ್ಜಿದಾರರು ವಾದಿಸಿದ್ದಾರೆ.

“ಯಾವುದೇ ಮಹತ್ವದ ಬದಲಾವಣೆಗಳಿಲ್ಲದೆ, ಕೇವಲ ವಿಭಾಗಗಳನ್ನು ಜಾರಿಗೆ ತರಲಾಗಿದೆ. ಹೊಸ ನಿಬಂಧನೆಗಳ ವ್ಯಾಖ್ಯಾನದಲ್ಲಿ ಬಹಳಷ್ಟು ಗೊಂದಲಗಳಿವೆ” ಎಂದು ಅವರು ಹೇಳಿದ್ದಾರೆ.

“ಸೆಕ್ಷನ್‌ಗಳನ್ನು ಬದಲಾಯಿಸುವುದರಿಂದ ನ್ಯಾಯಾಧೀಶರು, ವಕೀಲರು, ಕಾನೂನು ಜಾರಿಗೊಳಿಸುವ ಅಧಿಕಾರಿಗಳು ಮತ್ತು ಸಾರ್ವಜನಿಕರು ಪೂರ್ವನಿದರ್ಶನಗಳನ್ನು ಹುಡುಕಲು ಹಳೆಯ ಪ್ರಕರಣಗಳೊಂದಿಗೆ ಹೊಸ ನಿಬಂಧನೆಗಳನ್ನು ಹೋಲಿಕೆ ಮಾಡಲು ತುಂಬಾ ಕಷ್ಟವಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಕಾನೂನುಗಳನ್ನು ಮರುಪರಿಶೀಲಿಸುವ ಯಾವುದೇ ಉದ್ದೇಶವಿಲ್ಲದೆ, ಕಾಯಿದೆಗಳ ಶೀರ್ಷಿಕೆಗಳನ್ನು ‘ಸಂಸ್ಕೃತೀಕರಣ’ಗೊಳಿಸಲು ಮಾತ್ರವೇ ಈ ಕಸರತ್ತು ಮಾಡಲಾಗುತ್ತಿದೆ” ಎಂದು ಭಾರತಿ ಪ್ರತಿಪಾದಿಸಿದ್ದಾರೆ.

“ಸಂಸತ್ತಿನಲ್ಲಿ ಆಡಳಿತ ಪಕ್ಷವು ತನ್ನ ಮಿತ್ರಪಕ್ಷಗಳು ಹಾಗೂ ವಿರೋಧ ಪಕ್ಷಗಳನ್ನು ದೂರವಿಟ್ಟು ಈ ಕಾಯ್ದೆಗಳನ್ನು ಅಂಗೀಕರಿಸಿ, ಜಾರಿಗೊಳಿಸಿದೆ” ಎಂದು ಅವರು ಆರೋಪಿಸಿದ್ದಾರೆ.

“ಕಾಯಿದೆಗಳನ್ನು ಹಿಂದಿ/ಸಂಸ್ಕೃತದಲ್ಲಿ ಹೆಸರಿಸುವುದು ಸಂವಿಧಾನದ 348ನೇ ವಿಧಿಯ ಉಲ್ಲಂಘನೆಯಾಗಿದೆ. ಸಂಸತ್ತಿನ ಎರಡೂ ಸದನಗಳಲ್ಲಿ ಪರಿಚಯಿಸುವ ಎಲ್ಲ ಮಸೂದೆಗಳ ಅಧಿಕೃತ ಪಠ್ಯಗಳು ಇಂಗ್ಲಿಷ್‌ನಲ್ಲಿರಬೇಕು ಎಂದು ವಿಧಿಯು ಸೂಚಿಸಿದೆ” ಎಂದು ಭಾರತಿ ವಾದಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Air India A1-171 ವಿಮಾನ ಪತನದಲ್ಲಿ 117 ಮಂದಿ ಮೃತ : ದುರಂತಕ್ಕೆ ಟಾಟಾ ಗ್ರೂಪ್‌ ಸಂತಾಪ

ಗುಜರಾತಿನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ A1- 171 ವಿಮಾನ...

ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟವು ಒಪ್ಪಿಗೆ ನೀಡಿದೆ. ಶೀಘ್ರವೇ...

ಶಕ್ತಿ ಯೋಜನೆಗೆ 2 ವರ್ಷ: 474.82 ಕೋಟಿ ಮಹಿಳೆಯರ ಉಚಿತ ಪ್ರಯಾಣ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೊಜನೆ'...

ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂಬ ಶಂಕೆ; ನಾಲ್ವರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ತನ್ನ ಪತ್ನಿಯು ವಿವಾಹೇತರ ಸಂಬಂಧ ಹೊಂದಿರಬಹುದು ಎಂದು ಅನುಮಾನಗೊಂಡಿದ್ದ ವ್ಯಕ್ತಿಯೊಬ್ಬ ತಮ್ಮ...

Download Eedina App Android / iOS

X