‘ನನಗೆ ಏನೂ ಅರ್ಥ ಆಗಲಿಲ್ಲ’: ಕೇಂದ್ರ ಸಚಿವರ ಹಿಂದಿ ಪತ್ರಕ್ಕೆ ತಮಿಳಿನಲ್ಲಿ ಪ್ರತಿಪತ್ರ ಬರೆದ ಡಿಎಂಕೆ ಸಂಸದ

Date:

Advertisements

ರೈಲುಗಳಲ್ಲಿನ ಆಹಾರ ಗುಣಮಟ್ಟ ಹಾಗೂ ಶುಚಿತ್ವದ ಕುರಿತು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಅವರು ತಮಿಳುನಾಡು ಡಿಎಂಕೆ ಸಂಸದ ಎಂ.ಎಂ ಅಬ್ದುಲ್ಲಾ ಅವರಿಗೆ ಹಿಂದಿಯಲ್ಲಿ ಪತ್ರ ಬರೆದಿದ್ದಾರೆ. ಆ ಪತ್ರಕ್ಕೆ ತಮಿಳಿನಲ್ಲಿ ಪ್ರತಿಪತ್ರ ಬರೆದಿರುವ ಅಬ್ಬುಲ್ಲಾ, ‘ನನಗೆ ಏನೂ ಅರ್ಥವೇ ಆಗಿಲ್ಲ’ ಎಂದು ಉತ್ತರಿಸಿದ್ದಾರೆ.

ರೈಲುಗಳಲ್ಲಿ ಸೌಲಭ್ಯಗಳ ಬಗ್ಗೆ ಡಿಎಂಕೆ ನಾಯಕ, ರಾಜ್ಯಸಭಾ ಸಂಸದ ಪುದುಕೋಟ್ಟೈ ಎಂ.ಎಂ ಅಬ್ದುಲ್ಲಾ ಅವರು ಪ್ರಶ್ನಿಸಿದ್ದರು. ಅವರ ಪ್ರಶ್ನೆಗೆ ಉತ್ತರಿಸಿ ಕೇಂದ್ರ ಸಚಿವ ರವನೀತ್ ಸಿಂಗ್ ಅವರು ಹಿಂದಿಯಲ್ಲಿ ಪತ್ರ ಬರೆದಿದ್ದರು. ಆದರೆ, ಆ ಪತ್ರದಲ್ಲಿದ್ದ ಒಂದೇ ಒಂದು ಪದವೂ ತಮಗೆ ಅಥವಾಗಿಲ್ಲ ಎಂದು ಅಬ್ದುಲ್ಲಾ ಅವರು ಪ್ರತಿಪತ್ರ ಬರೆದಿದ್ದಾಎರ. ತಮಗೆ ಇಂಗ್ಲಿಷ್‌ನಲ್ಲಿ ಉತ್ತರ ಕಳಿಸುವಂತೆ ಕೇಳಿದ್ದಾರೆ.

ತಮಗೆ ಬಂದ ಪತ್ರ ಮತ್ತು ತಾವು ಪ್ರತಿಕ್ರಿಯಿಸಿರುವ ಪತ್ರಗಳನ್ನು ಅಬ್ದುಲ್ಲಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ನನಗೆ ಹಿಂದಿ ಅರ್ಥವಾಗುವುದಿಲ್ಲ ಎಂದು ಹಲವು ಬಾರಿ ಒತ್ತಿ ಹೇಳಿದ್ದೇನೆ. ಆದರೂ, ಕೇಂದ್ರ ಸಚಿವರ ಕಚೇರಿಯಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ನನಗೆ ಹಿಂದಿ ಭಾಷೆಯಲ್ಲಿ ಪತ್ರಗಳನ್ನು ಕಳಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisements

“ನನಗೆ ಹಿಂದಿ ಬರುವುದಿಲ್ಲ. ದಯವಿಟ್ಟು ಇಂಗ್ಲಿಷ್‌ನಲ್ಲಿ ಪತ್ರ ಕಳುಹಿಸಿ ಎಂದು ಹಲವು ಬಾರಿ ಸಚಿವರ ಕಚೇರಿಯಲ್ಲಿರುವ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ಆದರೂ, ಪತ್ರಗಳು ಮಾತ್ರ ಹಿಂದಿಯಲ್ಲೇ ಬರುತ್ತಿವೆ. ಈಗ, ಅವರಿಗೆ ಅರ್ಥವಾಗುವ ರೀತಿಯಲ್ಲಿ ನಾನು ಪ್ರತ್ಯುತ್ತರ ನೀಡಿದ್ದೇನೆ. ಇನ್ನು ಮುಂದೆ ನನಗೆ ಇಂಗ್ಲಿಷ್ ಭಾಷೆಯಲ್ಲೇ ಪತ್ರ ಕಳಿಸಬೇಕು” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X