ದೇಶದ ಹೆಸರನ್ನು ಬದಲಿಸಲು ಈ ದೇಶ ನಿಮ್ಮ ಅಪ್ಪನದ್ದಾ? ಬಿಜೆಪಿ ವಿರುದ್ಧ ಕೇಜ್ರಿವಾಲ್ ಆಕ್ರೋಶ

Date:

Advertisements
  • ಬಿಜೆಪಿಗೆ ಧೈರ್ಯವಿದ್ದರೆ ಇಂಡಿಯಾ ಹೆಸರನ್ನು ಬದಲಿಸಲಿ: ದೆಹಲಿ ಸಿಎಂ
  • ಛತ್ತೀಸ್‌ಘಡದಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

“‘ದೇಶದ ಹೆಸರನ್ನು ಬದಲಿಸಲು ಈ ದೇಶ ನಿಮ್ಮ ಅಪ್ಪನದ್ದಾ? ಇದು 140 ಕೋಟಿ ಜನರಿಗೆ ಸೇರಿದ್ದು. ಬಿಜೆಪಿಗೆ ಧೈರ್ಯವಿದ್ದರೆ ಇಂಡಿಯಾ ಹೆಸರನ್ನು ಬದಲಿಸಲಿ” ಎಂದು ಬಿಜೆಪಿ ವಿರುದ್ಧ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

‘ಇಂಡಿಯಾ’ ಹೆಸರನ್ನು ಅಧಿಕೃತವಾಗಿ ‘ಭಾರತ’ ಎಂದು ಬದಲಿಸಲಾಗುತ್ತದೆ ಎಂಬ ಸುದ್ದಿಯ ನಡುವೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕೇಜ್ರಿವಾಲ್, ತಾಕತ್ತಿದ್ದರೆ ಇಂಡಿಯಾ ಹೆಸರನ್ನು ಬದಲಿಸಿ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

ಛತ್ತೀಸ್‌ಘಡದಲ್ಲಿ ನಡೆದ ಸಮಾವೇಶವೊಂದರಲ್ಲಿ ಮಾತನಾಡಿದ ಕೇಜ್ರಿವಾಲ್, “ಇಂಡಿಯಾ ನಿಮ್ಮ ಅಪ್ಪನಿಗೆ ಸೇರಿದ್ದಾ? ಇದು 140 ಕೋಟಿ ಜನರಿಗೆ ಸೇರಿದ್ದು. ಇಂಡಿಯಾ ನಮ್ಮ ಹೃದಯಗಳಲ್ಲಿ ನೆಲೆಸಿದೆ, ಭಾರತ ಕೂಡ ನಮ್ಮ ಹೃದಯಗಳಲ್ಲಿ ನೆಲೆಸಿದೆ, ಹಿಂದೂಸ್ತಾನವೂ ನಮ್ಮ ಹೃದಯಗಳಲ್ಲಿ ನೆಲೆಸಿದೆ” ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

Advertisements

“ಕಳೆದ ವರ್ಷದವರೆಗೂ ಇಂಡಿಯಾ ಹೆಸರಿನಡಿಯಲ್ಲಿ ಮೋದಿ ಸರ್ಕಾರವು ಅನೇಕ ಯೋಜನೆಗಳನ್ನು ನಡೆಸುತ್ತಿತ್ತು. ಆದರೆ ಈಗ ವಿಪಕ್ಷಗಳ ಇಂಡಿಯಾ ಬಣ ರಚನೆಯಾದ ಬಳಿಕ ಇದ್ದಕ್ಕಿದ್ದಂತೆ ದೇಶದ ಹೆಸರನ್ನು ಬದಲಿಸುವ ಬಗ್ಗೆ ಮಾತನಾಡುತ್ತಿದೆ” ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಕಿಡಿಕಾರಿದ್ದಾರೆ.

“ಬಿಜೆಪಿಗೆ ಧೈರ್ಯವಿದ್ದರೆ ಇಂಡಿಯಾ ಹೆಸರನ್ನು ಬದಲಿಸಿ ಎಂದು ನಾನು ಅವರಿಗೆ ಸವಾಲು ಹಾಕಲು ಬಯಸುತ್ತೇನೆ” ಎಂದು ದಿಲ್ಲಿ ಸಿಎಂ ಗುಡುಗಿದರು.

ದೇಶದ 28 ವಿರೋಧ ಪಕ್ಷಗಳು ಮೈತ್ರಿಕೂಟ ರಚಿಸಲು ಒಂದುಗೂಡಿವೆ. ಇದಕ್ಕೆ ಐಎನ್‌ಡಿಐಎ ಎಂಬ ಹೆಸರು ಇಡಲಾಗಿದೆ. ಇದರಿಂದ ಬಿಜೆಪಿ ಸರ್ಕಾರ ಎಷ್ಟು ಸಿಟ್ಟಿಗೆದ್ದಿದೆ ಎಂದರೆ, ದೇಶದ ಹೆಸರನ್ನು ಭಾರತ ಎಂದು ಬದಲಿಸುತ್ತೇವೆ ಎಂದು ಅವರು ಹೇಳುತ್ತಿದ್ದಾರೆ. ನಾಳೆ, ವಿರೋಧ ಪಕ್ಷಗಳ ಮೈತ್ರಿಕೂಟವು ತಮ್ಮನ್ನು ಭಾರತ ಎಂದು ಕರೆದುಕೊಂಡರೆ, ನೀವು ದೇಶದ ಹೆಸರನ್ನು ಮತ್ತೆ ಬದಲಿಸುತ್ತೀರಾ? ಎಂದು ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X