ಜಮೀರ್‌ ಒಕ್ಕಲಿಗರನ್ನು, ಹಿಂದೂಗಳನ್ನು ಖರೀದಿಸುತ್ತೇನೆಂದು ಹೇಳುವುದೆ: ಆರ್ ಅಶೋಕ್ ಪ್ರಶ್ನೆ

Date:

Advertisements

ಸಚಿವ ಜಮೀರ್‌ ಅಹ್ಮದ್‌ ಅವರು ಒಕ್ಕಲಿಗರನ್ನು ಅಥವಾ ಹಿಂದೂಗಳನ್ನು ಖರೀದಿಸುತ್ತೇನೆ ಎಂದು ಹೇಳುತ್ತಿರುವುದೇ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಅವರು ಪ್ರಶ್ನಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದಲ್ಲಿ ಮಾತನಾಡಿದ ಆರ್‌ ಅಶೋಕ್ ಅವರು, “ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಚಾಮರಾಜಪೇಟೆಗೆ ಹೋಗಿ ರ‍್ಯಾಲಿ ಮಾಡಿ ಜಮೀರ್‌ ಅಹಮದ್‌ರನ್ನು ಗೆಲ್ಲಿಸಿ ಅವರಿಗೆ ಜೀವನ ನೀಡಿದ್ದರು. ಆದರೆ ಈಗ ಅದೇ ಜಮೀರ್ ಅಹಮದ್ ದೇವೇಗೌಡರ ಕುಟುಂಬವನ್ನು ಖರೀದಿಸುತ್ತೇವೆ ಎನ್ನುತ್ತಿದ್ದಾರೆ” ಎಂದು ಅಶೋಕ್ ಟೀಕಿಸಿದರು.

ಹಾಗೆಯೇ, “ಇದು ಒಕ್ಕಲಿಗರನ್ನು ಖರೀದಿಸುತ್ತೇವೆಂದು ಅರ್ಥವೇ ಅಥವಾ ಹಿಂದೂಗಳನ್ನು ಖರೀದಿಸುತ್ತೇವೆಂದು ಅರ್ಥವೇ” ಎಂದು ಪ್ರಶ್ನಿಸಿದರು.

Advertisements

ಇದನ್ನು ಓದಿದ್ದೀರಾ? ವಕ್ಪ್‌ ವಿವಾದ | ಸತ್ಯ ಮರೆಮಾಚಲು ಮುಖ್ಯಮಂತ್ರಿ ಸುಳ್ಳು ಹೇಳಿದ್ದಾರೆ: ಆರ್‌ ಅಶೋಕ್‌ ಆರೋಪ

“ಚುನಾವಣೆ ಬರುವಾಗ ಕಾಂಗ್ರೆಸ್‌ ಸಚಿವರು ಖರೀದಿ ಬಗ್ಗೆ ಮಾತನಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಹಿಂದೆ ಇದ್ದ ರೌಡಿಗಳು ನಾಚುವಂತೆ ಅಬಕಾರಿ ಇಲಾಖೆಯ ಮೂಲಕ ಮದ್ಯ ಮಾರಾಟಗಾರರಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಲೂಟಿ ಮಾಡಿದ ಹಣದಲ್ಲಿ ಕುಟುಂಬ ಖರೀದಿಸುವವರನ್ನು ಚನ್ನಪಟ್ಟಣದ ಜನರು ಕ್ಷಮಿಸುವುದಿಲ್ಲ” ಎಂದು ಹೇಳಿದರು.

“ಸಚಿವ ಜಮೀರ್‌ ಅಹ್ಮದ್‌ ರೈತರ ಜಮೀನು ಕಬಳಿಸುತ್ತಿದ್ದಾರೆ. ಈಗ ದೇವೇಗೌಡರ ಕುಟುಂಬ ಖರೀದಿಸಲು ಇರಾಕ್‌, ಇರಾನ್‌ನಿಂದ ಹಣ ಬಂದಿದೆಯೇ” ಎಂದು ಎಚ್‌ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X