ಮೋದಿಯವರ 56 ಇಂಚಿನ ಎದೆಯಲ್ಲಿ ಹಿಂಸೆ ಹತ್ತಿಕ್ಕುವ ಎದೆಗಾರಿಕೆ ಇಲ್ಲವೇ: ದಿನೇಶ್‌ ಗುಂಡೂರಾವ್‌ ಪ್ರಶ್ನೆ

Date:

Advertisements
  • ಮಣಿಪುರ ಭಾರತದಲ್ಲಿದೆಯೇ ಅಥವಾ ಅಫ್ಘಾನಿಸ್ತಾನದಲ್ಲಿದೆಯೇ?
  • ರಾಷ್ಟ್ರಪತಿ ಆಳ್ವಿಕೆಯ ಮೂಲಕ ಪರಿಸ್ಥಿತಿ ನಿಯಂತ್ರಿಸಲಿ: ಆಗ್ರಹ

ಮಣಿಪುರದಲ್ಲಿ ಮೂರು ತಿಂಗಳಿಂದ ಹಿಂಸಾಚಾರ ನಡೆಯುತ್ತಿದೆ. ಸಜೀವ ದಹನ, ಮಹಿಳೆಯರ ನಗ್ನ ಮೆರವಣಿಗೆಯಂತಹ ಭೀಭತ್ಸ ಕೃತ್ಯಗಳು ಸರಣಿ ರೂಪದಲ್ಲಿ ನಡೆಯುತ್ತಿವೆ. ಕೊಲೆ ಅತ್ಯಾಚಾರಗಳಿಗೆ ಲೆಕ್ಕವೇ ಇಲ್ಲ.‌ ಮಣಿಪುರ ಭಾರತದಲ್ಲಿದೆಯೇ ಅಥವಾ ಅಫ್ಘಾನಿಸ್ತಾನದಲ್ಲಿದೆಯೇ? ಗಲಭೆ ನಿಯಂತ್ರಿಸಲು ಪ್ರಧಾನಿಯವರಿಗೆ ಸಾಧ್ಯವಿಲ್ಲವೇ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಮಣಿಪುರದಲ್ಲಿ ಬಿಜೆಪಿಯಲ್ಲದೇ ಬೇರೆ ಪಕ್ಷದ ಸರ್ಕಾರವಿದ್ದಿದರೆ ಕೇಂದ್ರ ಸುಮ್ಮನಿರುತಿತ್ತೆ? ಮಣಿಪುರ ದೊಂಬಿ ಹಾಗೂ ಕೊಲೆಗಡುಕರ ರಾಜ್ಯವಾಗಲು ಅಲ್ಲಿನ ಸರ್ಕಾರದ ನಿಷ್ಕ್ರಿಯತೆ ಅತಿ ಮುಖ್ಯ ಕಾರಣ. ಕೇಂದ್ರ ಈ ಕೂಡಲೇ ಸಂವಿಧಾನದ 356ನೇ ವಿಧಿಯ ಅನ್ವಯ ಅಲ್ಲಿಯ ಸರ್ಕಾರವನ್ನು ವಜಾ ಮಾಡಲಿ. ರಾಷ್ಟ್ರಪತಿ ಆಳ್ವಿಕೆಯ ಮೂಲಕ ಪರಿಸ್ಥಿತಿ ನಿಯಂತ್ರಿಸಲಿ” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಮಣಿಪುರ ಗಲಭೆ; ಸರ್ಕಾರಗಳು ಮತ್ತು ಕೋರ್ಟುಗಳು ವಿವೇಚನೆ ಕಳೆದುಕೊಂಡವೇ?

Advertisements

“ಮಣಿಪುರ ಹಿಂಸಾಚಾರವನ್ನು ಕಳೆದ ಮೂರು ತಿಂಗಳಿಂದ ಜೀವಂತವಾಗಿ ಬಿಟ್ಟಿರುವುದು ಕೇಂದ್ರದ ಅಸಹಾಯಕತೆಗಿಂತ ಹೆಚ್ಚಾಗಿ ಹೇಡಿತನ ತೋರಿಸುತ್ತಿದೆ‌. ಮಣಿಪುರದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಅಲ್ಲಿನ ಬಿಜೆಪಿ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಮೋದಿಯವರ 56 ಇಂಚಿನ ಎದೆಯಲ್ಲಿ ಹಿಂಸಾಚಾರ ಸದ್ದಡಗಿಸುವ ಎದೆಗಾರಿಕೆ ಇಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X