ಭಾರತ ಪಾಕಿಸ್ತಾನ ಕದನ ವಿರಾಮ | ಡೊನಾಲ್ಡ್ ಟ್ರಂಪ್ ನಿಜವಾದ ‘ವಾರ್ ರುಕ್ವಾ ದೀ ಪಾಪಾ’ ಎಂದ ನೆಟ್ಟಿಗರು

Date:

Advertisements

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ನಡೆದ ಸಭೆಯ ಬಳಿಕ ಭಾರತ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕದನ ವಿರಾಮವನ್ನು ಖಚಿತಪಡಿಸಿದ್ದಾರೆ. ಈ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ನಿಜವಾದ ‘ವಾರ್ ರುಕ್ವಾ ದೀ ಪಾಪಾ’ (ಅಪ್ಪ ಯುದ್ಧ ನಿಲ್ಲಿಸಿದರು) ಎಂದ ನೆಟ್ಟಿಗರು ಹೇಳಿದ್ದಾರೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಸೇರಿ 26 ಮಂದಿ ಸಾವನ್ನಪ್ಪಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್​-ಎ-ತೊಯ್ಬಾದ ಟಿಆರ್​ಎಫ್ ಹೊತ್ತುಕೊಂಡಿತ್ತು. ಈ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರವನ್ನು ನಡೆಸಿದೆ.

ಇದನ್ನು ಓದಿದ್ದೀರಾ? BREAKING NEWS | ‘ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ’ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್

Advertisements

ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಸಭೆ ನಡೆದಿದೆ. “ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ಮಾತುಕತೆ ಬಳಿಕ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಎರಡು ದೇಶಕ್ಕೂ ಧನ್ಯವಾದಗಳು” ಎಂದು ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ. ಈ ಬೆನ್ನಲ್ಲೇ ನೆಟ್ಟಿಗರು ‘ವಾರ್ ರುಕ್ವಾ ದೀ ಪಾಪಾ’ ಎಂಬ ಬಿಜೆಪಿ ಜಾಹೀರಾತನ್ನು ಮತ್ತೆ ಗೇಲಿಮಾಡಿದ್ದಾರೆ.

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ನಿಲ್ಲಿಸಿದರು ಎಂಬ ಬಿಜೆಪಿಯ ಸುಳ್ಳು ಜಾಹೀರಾತು ಭಾರೀ ವೈರಲ್ ಆಗಿತ್ತು. ‘ವಾರ್ ರುಕ್ವಾ ದೀ ಪಾಪಾ’ ಎಂಬ ಸುಳ್ಳು ಜಾಹೀರಾತು ಮೋದಿಯನ್ನು ನಗೆಪಾಟಲಿಗೀಡಾಗಿಸಿತ್ತು. ಇದೀಗ ಅದೇ ಜಾಹೀರಾತು ಮೋದಿಯನ್ನು ಮತ್ತೆ ಕೆದಕಿದೆ. ನಿಜವಾಗಿ ಯುದ್ಧ ನಿಲ್ಲಿಸಿದವರು ಟ್ರಂಪ್ ಎಂದು ನೆಟ್ಟಿಗರು ಹೇಳಿದ್ದಾರೆ.

ವಾರ್ ರುಕ್ವಾ ದೀ ಪಾಪಾ

ನೆಟ್ಟಿಗರು ಹೇಳಿದ್ದು ಏನು?

“ವಾರ್ ರುಕ್ವಾ ದೀ ಪಾಪಾ ಎಂದು ಹೇಳಲು ಇದು ಸರಿಯಾದ ಸಮಯ. ಇದು ಅಮೆರಿಕದ ಶಕ್ತಿ. ಇದಕ್ಕೆ ಶಕ್ತಿ ಎಂದು ಕರೆಯುತ್ತಾರೆ. ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾದಾಗ ಇನ್ಮುಂದೆ ಬ್ರಿಕ್ಸ್‌ (BRICS) ಬೇಡ ಎಂದು ಆದೇಶಿಸಿದರು. ಈಗ ಬ್ರಿಕ್ಸ್ ಇಲ್ಲ. ಇದು ಓರ್ವ ವ್ಯಕ್ತಿಯ ಬಲ” ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ. ಆದರೆ ಬ್ರಿಕ್ಸ್‌ ಅಂತ್ಯವಾಗಿಲ್ಲ. ಇದು ತಪ್ಪು ಮಾಹಿತಿ. 2025ರ ಜನವರಿಯಲ್ಲಿ BRICSಗೆ ಇಂಡೋನೇಷ್ಯಾ ಸೇರ್ಪಡೆಗೊಂಡಿದ್ದು, ಸದ್ಯ ಹತ್ತು ದೇಶಗಳಿವೆ.

ಸದ್ಯ ವಾಟ್ಸಾಪ್‌, ಇನ್‌ಸ್ಟಾಗ್ರಾಂ, ಟ್ವಿಟ್ಟರ್ ಎಲ್ಲೆಡೆ ಟ್ರಂಪ್ ಟ್ರೋಲ್ ಆಗುತ್ತಿದ್ದಾರೆ. ವಾರ್ ರುಕ್ವಾ ದೀ ಪಾಪಾ ಮತ್ತೆ ಮುನ್ನಲೆಗೆ ಬಂದಿದೆ. ಮೋದಿಯನ್ನು ಗೇಲಿ ಮಾಡಲಾಗುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X