ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡಲ್ಲ: ಸಿದ್ದರಾಮಯ್ಯ

Date:

Advertisements

ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರಿನ ರೈತ ನಿಯೋಗಕ್ಕೆ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕುಡುತಿನಿಯಲ್ಲಿ ಆರ್ಸೆಲರ್‌ ಮಿತ್ತಲ್‌ ಇಂಡಿಯಾ ಲಿ,; ಉತ್ತಮ್‌ ಗಾಲ್ವಾ ಫೆರೋಸ್‌ ಕಂಪನಿ ಲಿ. ಹಾಗೂ ಮೆ. ಕರ್ನಾಟಕ ವಿಜಯನಗರ ಸ್ಟೀಲ್ಸ್‌ ಲಿಮಿಟೆಡ್‌ ಕಾರ್ಖಾನೆಗಳನ್ನು ಪ್ರಾರಂಭಿಸುವ ಕುರಿತು ಸಂಡೂರು ಶಾಸಕ ಇ.ತುಕಾರಾಮ್ ನೇತೃತ್ವದ ನಿಯೋಗದ ಜತೆ ಸಭೆ ನಡೆಸಿದ ಬಳಿಕ ತಿಳಿಸಿದರು.

ಈ ಉದ್ದೇಶಿತ ಕಾರ್ಖಾನೆಗಳಿಗಾಗಿ ಭೂಸ್ವಾಧೀನ ಸಂದರ್ಭದಲ್ಲಿ ದರ ನಿಗದಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ಅನ್ಯಾಯವೆಸಗಿದೆ ಎಂಬ ರೈತರ ಆರೋಪದ ಕುರಿತಂತೆ ಪರಿಶೀಲಿಸಿ, ಸಮಸ್ಯೆ ಬಗೆಹರಿಸುವುದಾಗಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಸಭೆಯಲ್ಲೇ ಭರವಸೆ ನೀಡಿದರು.

Advertisements

“ಆರ್ಸೆಲರ್‌ ಮಿತ್ತಲ್‌ ಕಾರ್ಖಾನೆಗಾಗಿ ನಡೆಸಿರುವ ಭೂಸ್ವಾಧೀನ ಕುರಿತಂತೆ, ರೈತರಿಗೆ ನೀಡಿರುವ ಪರಿಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನ ತೀರ್ಪಿನ ಬಗ್ಗೆ ಅಡ್ವೊಕೇಟ್‌ ಜನರಲ್‌ ಅವರ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರ, ಸಂಡೂರು ಶಾಸಕ ಇ.ತುಕಾರಾಮ್, ಜಿಲ್ಲೆಯ ಶಾಸಕರುಗಳಾದ ಕಂಪ್ಲಿ ಗಣೇಶ್, ನಾ.ರಾ.ಭರತ್ ರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ.ಕೆ.ವಿ. ತ್ರಿಲೋಕಚಂದ್ರ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್‌ ಮತ್ತು ಇತರ ಹಿರಿಯ ಅಧಿಕಾರಿಗಳು, ಭೂಮಿ ಕಳೆದುಕೊಂಡ ರೈತ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X