ಅಚ್ಚೇ ದಿನ್‌ಗೆ ಕಾಯಬೇಡಿ, ನಿಮಗೆ ಬೇಕಾದ ಸರ್ಕಾರ ಆಯ್ಕೆ ಮಾಡಿ: ರೈತರಿಗೆ ನಟ ನಾನಾ ಪಾಟೇಕರ್ ಕರೆ

Date:

Advertisements

ಮಹಾರಾಷ್ಟ್ರದಲ್ಲಿ ಕಳೆದ ಒಂದು ವರ್ಷದಿಂದ ನಿರಂತರವಾಗಿ ಆಗುತ್ತಿರುವ ರಾಜಕೀಯ ಬದಲಾವಣೆಗಳನ್ನು ಕಟುವಾಗಿ ಟೀಕಿಸಿದ ನಟ ನಾನಾ ಪಾಟೇಕರ್, ಇದೇ ಸಂದರ್ಭದಲ್ಲಿ ರೈತರಿಗೆ ಕರೆ ಕೊಟ್ಟಿದ್ದಾರೆ. “ನೀವು ಅಚ್ಚೇ ದಿನ್‌ಗಾಗಿ (ಉತ್ತಮ ದಿನಕ್ಕಾಗಿ) ಕಾಯಬಾರದು, ನಿಮಗೆ ಬೇಕಾದ ಸರ್ಕಾರವನ್ನು ನೀವೇ ಆಯ್ಕೆ ಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

ನಾಸಿಕ್‌ನಲ್ಲಿ ನಡೆದ ‘ಶೇಟ್ಕರಿ ಸಮ್ಮೇಳನ’ದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ನಟ ನಾನಾ ಪಾಟೇಕರ್, “ರೈತರು ಎಂದಿಗೂ ಇಂದಲ್ಲ ನಾಳೆ ಒಳ್ಳೆಯ ದಿನ ಬರುತ್ತದೆ ಎಂದು ಕಾದು ಕೂರಬಾರದು. ನಾವಾಗಿಯೇ ನಮಗೆ ಉತ್ತಮ ದಿನಗಳನ್ನು ತಂದುಕೊಳ್ಳಬೇಕು. ಮುಂದಿನ ಬಾರಿ ಯಾವ ಸರ್ಕಾರ ಬರಬೇಕು ಎಂಬುದನ್ನು ನೀವು ತೀರ್ಮಾನ ಮಾಡಬೇಕು,” ಎಂದು ಹೇಳಿದರು.

“ನಮ್ಮ ದೇಶದಲ್ಲಿ ಚಿನ್ನದ ಬೆಲೆ ಹೆಚ್ಚಳವಾಗುತ್ತಿರುವಾಗ ಅಕ್ಕಿಯ ಬೆಂಬಲ ಬೆಲೆ ಮಾತ್ರ ಯಾಕೆ ಹೆಚ್ಚಾಗುವುದಿಲ್ಲ? ರೈತರು ಇಡೀ ದೇಶಕ್ಕೆ ಆಹಾರ ನೀಡುವವರು. ಆದರೆ, ರೈತರ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರಕ್ಕೆ ಸಮಯವೇ ಇಲ್ಲ. ಇಂತಹ ಸರ್ಕಾರದಿಂದ ರೈತರು ಏನೂ ಕೇಳಬಾರದು. ನೀವೇ ಮುಂದಿನ ಸರ್ಕಾರ ಆಯ್ಕೆ ಮಾಡಬೇಕು,” ಎಂದರು.

Advertisements

“ನಾವು ಇಂದಿನ ಸ್ಥಿತಿಯನ್ನು ಬದಲಾವಣೆ ಮಾಡಲು ಜೊತೆಯಾಗಬೇಕು. ನಾವೆಂದಿಗೂ ಆತ್ಮಹತ್ಯೆಯ ದಾರಿಯನ್ನು ತುಳಿಯಬಾರದು,” ಎಂದು ರೈತರಿಗೆ ಹೇಳಿದರು.

ರಾಜಕೀಯ ಪಕ್ಷಗಳ ವಿರುದ್ಧ ಹರಿಹಾಯ್ದ ಪಾಟೇಕರ್, “ರಾಜಕೀಯ ನಾಯಕರೇ ನಮ್ಮ ಯುವಜನರಿಗೆ ಯಾವ ನಿದರ್ಶನವನ್ನು ನೀವು ನೀಡುತ್ತಿದ್ದೀರಿ,” ಎಂದು ಪ್ರಶ್ನಿಸಿದರು. ”ನಾನು ಎಂದಿಗೂ ಕಟುವಾಗಿ, ನೇರವಾಗಿ ಟೀಕೆ ಮಾಡುವ ವ್ಯಕ್ತಿ. ಆದ್ದರಿಂದಾಗಿ ನಾನು ರಾಜಕೀಯಕ್ಕೆ ಸೇರಿಕೊಳ್ಳಲು ಸಾಧ್ಯವಿಲ್ಲ” ಎಂದು ಈ ವೇಳೆ ತಿಳಿಸಿದರು.

Mayuri
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X