ಡಬಲ್ ಇಂಜಿನ್ ಸರ್ಕಾರದಿಂದ ‘ಡಬಲ್ ಅನ್ಯಾಯ’ – ರಾಹುಲ್ ಗಾಂಧಿ

Date:

Advertisements

ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ನಡೆದಿರುವ ಆತ್ಮಹತ್ಯೆ ಪ್ರಕರಣಗಳನ್ನು ಉಲ್ಲೇಖಿಸಿ ಬಿಜೆಪಿಯ ಡಬಲ್ ಇಂಜಿನ್ ಆಡಳಿತದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಎಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆಯೋ, ಅಲ್ಲಿ ಜನರಿಗೆ ‘ಡಬಲ್ ಅನ್ಯಾಯ’ ಆಗಿದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ (ಟ್ವಿಟ್ಟರ್‌) ರಾಹುಲ್ ಗಾಂಧಿ ಬರೆದುಕೊಂಡಿದ್ದು, “ನ್ಯಾಯಕ್ಕಾಗಿ ಕಾದು ನ್ಯಾಯ ದೊರೆಯದೆ ಆತ್ಮಹತ್ಯೆ ಮಾಡಿಕೊಂಡ ಎರಡು ನಿದರ್ಶನಗಳನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇರುವಲ್ಲಿ ನ್ಯಾಯ ಕೇಳುವುದು ಅಪರಾಧ” ಎಂದಿದ್ದಾರೆ.


“ನರೇಂದ್ರ ಮೋದಿಯ ಡಬಲ್ ಇಂಜಿನ್ ಸರ್ಕಾರದಲ್ಲಿ ಆಗುತ್ತಿರುವ ಡಬಲ್ ಅನ್ಯಾಯದ ಬಗ್ಗೆ ಈ ಕೆಳಗಿರುವ ಎರಡು ನಿದರ್ಶನಗಳಿಂದ ಅರ್ಥಮಾಡಿಕೊಳ್ಳಬಹುದು,” ಎಂದು ಹೇಳಿದರು ರಾಹುಲ್ ಗಾಂಧಿ ಎರಡು ಘಟನೆಗಳನ್ನು ವಿವರಿಸಿದ್ದಾರೆ.

Advertisements

“ಯುಪಿಯಲ್ಲಿ, ಅತ್ಯಾಚಾರಕ್ಕೊಳಗಾದ ಇಬ್ಬರು ಸಹೋದರಿಯರು ನೇಣು ಬಿಗಿದುಕೊಂಡಿದ್ದಾರೆ. ಈಗ ನ್ಯಾಯ ಸಿಗದ ಕಾರಣ ಮತ್ತು ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಿದ ಕಾರಣ ಈ ಇಬ್ಬರು ಹೆಣ್ಣು ಮಕ್ಕಳ ತಂದೆಯೂ ನೇಣು ಹಾಕಿಕೊಂಡಿದ್ದಾರೆ,” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಮಧ್ಯಪ್ರದೇಶದಲ್ಲಿ ಮಹಿಳೆಯ ಮಾನಭಂಗವಾಗಿದೆ. ಆ ಮಹಿಳೆಯ ಬಡ ಪತಿಯು ನ್ಯಾಯಕ್ಕಾಗಿ ಮನವಿ ಮಾಡಿದಾಗ, ವಿಚಾರಣೆಯೇ ಮಾಡಲಾಗಿಲ್ಲ. ಇದರಿಂದಾಗಿ ನಿರಾಶೆಗೊಂಡು ಈ ವ್ಯಕ್ತಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡಿದ್ದಾರೆ,” ಎಂದು ಟ್ವೀಟ್ ಮಾಡಿದ್ದಾರೆ.

“ಡಬಲ್ ಇಂಜಿನ್ ಸರ್ಕಾರದಲ್ಲಿ ನ್ಯಾಯ ಕೇಳುವುದು ಅಪರಾಧವಾಗಿದೆ. ಮಿತ್ರ ಮಾಧ್ಯಮಗಳು ಭಾರೀ ಕಷ್ಟಪಟ್ಟು ಸೃಷ್ಟಿಸಿದ ಸುಳ್ಳು ಚಿತ್ರಣವನ್ನು ರಕ್ಷಿಸಲು, ಸಂತ್ರಸ್ತರನ್ನು ಮಾತ್ರವಲ್ಲದೆ ಅವರ ಸಂಪೂರ್ಣ ಕುಟುಂಬವನ್ನೇ ಶತ್ರುಗಳಂತೆ ನೋಡುವುದು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಒಂದು ಸಂಪ್ರದಾಯವಾಗಿದೆ,” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಹತ್ರಾಸ್‌ನಿಂದ ಉನ್ನಾವ್‌ವರೆಗೆ ಮತ್ತು ಮಂದಸೌರ್‌ನಿಂದ ಪೌರಿವರೆಗಿನ ಮಹಿಳೆಯರ ಮೇಲಿನ ದೌರ್ಜನ್ಯ ನಡೆದಿದೆ. ಈ ದೌರ್ಜನ್ಯದ ನಂತರ, ಅವರ ಕುಟುಂಬಗಳು ನ್ಯಾಯಕ್ಕಾಗಿ ಹಂಬಲಿಸುತ್ತಿದ್ದವು. ಈ ಘೋರ ಅನ್ಯಾಯದ ವಿರುದ್ಧ ದನಿ ಎತ್ತಿ, ಇಲ್ಲವಾದರೆ ಇದ್ದಲ್ಲ ನಾಳೆ ಈ ದೌರ್ಜನ್ಯದ ಬೆಂಕಿ ನಿಮ್ಮನ್ನೂ ತಲುಪುತ್ತದೆ,” ಎಂದು ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X