ಬರ ಪರಿಹಾರ | ಹೇಳಿಕೆಗಳಲ್ಲೇ ಕಾಲಹರಣ ಮಾಡುತ್ತಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ: ಆರ್ ಅಶೋಕ್ ಟೀಕೆ

Date:

Advertisements

“ಬರಪರಿಹಾರ ಪಡೆಯಲು ಸರ್ಕಾರದ ಫ್ರೂಟ್ಸ್ ಡಾಟಾಬೇಸ್‌ನಲ್ಲಿ ರೈತರ ಮಾಹಿತಿ ದಾಖಲು ಮಾಡಬೇಕಿದ್ದು, ಇನ್ನೂ ಶೇ.25 ರಷ್ಟು ರೈತರ ಮಾಹಿತಿ ದಾಖಲಾಗಿಲ್ಲ. ಕಂದಾಯ ಸಚಿವ ಕೃಷ್ಣ ಬೈರೇಗೌಡರು ವಾರಕ್ಕೊಮ್ಮೆ ಸಭೆ ನಡೆಸಿ, ಇನ್ನೊಂದು ವಾರದೊಳಗೆ ಮೊದಲ ಕಂತಿನ ಬರ ಪರಿಹಾರ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳುತ್ತಾ, ಕೇವಲ ಹೇಳಿಕೆಗಳಲ್ಲೇ ಕಾಲಹರಣ ಮಾಡುತ್ತಿದ್ದಾರೆ” ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರಾಜ್ಯದಲ್ಲಿ ಬರಗಾಲ ಬಂದು ಏಳು ತಿಂಗಳಾದರೂ ಕಾಂಗ್ರೆಸ್ ಸರ್ಕಾರ ರೈತರಿಗೆ ಪರಿಹಾರ ನೀಡಿಲ್ಲ. ಈ ನಡುವೆ ಪಹಣಿಯಲ್ಲಿ ರೈತರ ಬೆಳೆ ಮಾಹಿತಿ ನೋಂದಣಿಗೆ ಸೂಪರ್‌ವೈಸರ್‌ಗಳು ಅನುಮೋದನೆ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರು ತಿಂಗಳ ಕಾಲ ಮೀನಮೇಷ ಎಣಿಸುತ್ತಾ ಪರಿಹಾರ ಕೊಡಲೋ ಬೇಡವೋ ಎಂದು ಯೋಚಿಸುತ್ತಿದ್ದರು. ನಂತರ ಅರೆ ಮನಸ್ಸಿನಿಂದ ಕಳೆದ ನವೆಂಬರ್‌ನಲ್ಲಿ ಪ್ರತಿ ಎಕರೆಗೆ 2,000 ರೂ. ಬರ ಪರಿಹಾರ ಘೋಷಣೆ ಮಾಡಿದರು. ಅದಾಗಿ ಎರಡು ತಿಂಗಳಾದರೂ ಒಂದು ಬಿಡಿಗಾಸು ಕೂಡ ರೈತರಿಗೆ ತಲುಪಿಲ್ಲ” ಎಂದು ಹೇಳಿದ್ದಾರೆ.

Advertisements

“ಗ್ಯಾರೆಂಟಿ ಯೋಜನೆಗಳಿಂದ ಖಜಾನೆ ಖಾಲಿ ಆಗಿರುವುದರಿಂದ ಕಾಂಗ್ರೆಸ್‌ ಸರ್ಕಾರ ರೈತರ ವಿಷಯದಲ್ಲಿ ಚೆಲ್ಲಾಟ ಆಡುತ್ತಾ ಸತಾಯಿಸುತ್ತಿದೆ ಎಂಬ ಅನುಮಾನ ಬರುತ್ತಿದೆ. ಗಾಯದ ಮೇಲೆ ಬರೆ ಎಳೆದಂತೆ ಬೆಳೆ ಸಮೀಕ್ಷೆ ಅನುಮೋದನೆ ಆಗಿಲ್ಲ. ಅತ್ತ ಬರ ಪರಿಹಾರವೂ ಸಿಗದೆ ಇತ್ತ ಬೆಂಬಲ ಬೆಲೆಗೆ ತಮ್ಮ ಕೃಷಿ ಉತ್ಪನ್ನ ಮಾರಾಟ ಮಾಡಲೂ ಆಗದ ಪರಿಸ್ಥಿತಿಯಲ್ಲಿ ನೂರಾರು ರೈತರು ಸಿಲುಕಿದ್ದಾರೆ” ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ದೂರಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

“ಸರ್ಕಾರದ ಸೌಲಭ್ಯ ಪಡೆಯಲು ಪಹಣಿಯಲ್ಲಿ ಬೆಳೆ ನಮೂದಾಗಿರಬೇಕು. ಲಕ್ಷಾಂತರ ರೈತರು ತಾವಾಗಿಯೇ ಮಾಹಿತಿಯನ್ನು ಅಪ್‌ಲೋಡ್‌ ಮಾಡಿದ್ದರೂ ಅದನ್ನು ಸೂಪರ್‌ವೈಸರ್‌ಗಳು ಅನುಮೋದನೆ ಮಾಡಿಲ್ಲ. ಹೀಗಾಗಿ ರೈತರ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಸರ್ಕಾರದ ಈ ಬೇಜವಾಬ್ದಾರಿ, ಗೊಂದಲದ ನೀತಿಗಳಿಂದ ಸಂಕಷ್ಟದಲ್ಲಿರುವ ರೈತರು ತ್ರಿಶಂಕು ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು. ಗೊಂದಲ ನಿವಾರಿಸಿ ರೈತರಿಗೆ ಪರಿಹಾರ ಬಿಡುಗಡೆ ಮಾಡಬೇಕು ಮತ್ತು ಬೆಂಬಲ ಬೆಲೆಯಂತೆ ಬೆಳೆ ಮಾರಾಟಕ್ಕೆ ಅವಕಾಶ ಮಾಡಿಕೊಡಬೇಕು” ಎಂದು ವಿಪಕ್ಷ ನಾಯಕ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X