‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

Date:

ಕ್ರೈಸ್ತರ ಪ್ರಮುಖ ಹಬ್ಬವಾದ ‘ಈಸ್ಟರ್ ಭಾನುವಾರ’ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ ಮಣಿಪುರ ಸರ್ಕಾರ ಘೋಷಿಸಿದೆ. ಅಂದು ಎಲ್ಲ ಸರ್ಕಾರಿ ಇಲಾಖೆಗಳಲ್ಲಿಯೂ ಸಿಬ್ಬಂದಿಗಳು ಕರ್ತರ್ವ ನಿರ್ವಹಿಸಬೇಕೆಂದು ಸೂಚಿಸಿದೆ. ಸರ್ಕಾರದ ಈ ನಿರ್ಧಾರ ವಿರುದ್ಧ ಕ್ರಿಶ್ಚಿಯನ್ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ.

ಕುಕಿ ಮತ್ತು ಮೈಥೇಯಿ ಸಮುದಾಯಗಳ ನಡುವಿನ ಹಿಂಸಾಚಾರದಿಂದ ಕಂಗೆಟ್ಟಿರುವ ಮಣಿಪುರದಲ್ಲಿ, ಅಲ್ಲಿನ ಬಿಜೆಪಿ ಸರ್ಕಾರ ಹೊಸ ವಿವಾದವನ್ನು ಹುಟ್ಟುಹಾಕಿದೆ. ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆಯು ‘ಈಸ್ಟರ್ ಸಂಡೇ’ ಕುರಿತು ಆದೇಶ ಹೊರಡಿಸಿದ್ದು, “ಶನಿವಾರ (ಮಾರ್ಚ್ 30) ಮತ್ತು ಭಾನುವಾರ (ಮಾರ್ಚ್ 31) ಎಲ್ಲ ಸರ್ಕಾರಿ ಕಚೇರಿಗಳು, ಸಾರ್ವಜನಿಕ ವಲಯದ ಸಂಸ್ಥೆಗಳು ಹಾರೂ ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲ ಸಂಸ್ಥೆಗಳು ಕಾರ್ಯನಿರ್ವಹಿಸಬೇಕು. ಹಣಕಾಸು ವರ್ಷದ (2023-24) ಕೊನೆಯ ದಿನಗಳಲ್ಲಿ ಕಚೇರಿ ಕೆಲಸಗಳನ್ನು ಪೂರ್ಣಗೊಳಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದೆ.

2011ರ ಜನಗಣತಿಯ ಪ್ರಕಾರ, ಮಣಿಪುರದ ಜನಸಂಖ್ಯೆಯಲ್ಲಿ ಕ್ರಿಶ್ಚಿಯನ್ನರು 40.1% (2.8 ಮಿಲಿಯನ್) ರಷ್ಟಿದ್ದಾರೆ. ಅವರಲ್ಲಿ ಹೆಚ್ಚಿನವರು ಕುಕಿ, ಝೋ ಮತ್ತು ನಾಗಾ ಸಮುದಾಯಗಳಿಗೆ ಸೇರಿದವರಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸರ್ಕಾರದ ಈ ಆದೇಶವು ಕ್ರಿಶ್ಚಿಯನ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಬುಡಕಟ್ಟು ಸಮುದಾಯಗಳ ಒಕ್ಕೂಟ ಸಂಸ್ಥೆ – ಇಂಡಿಜಿನಸ್ ಟ್ರೈಬಲ್ ಲೀಡರ್ಸ್ ಫೋರಂ (ಐಟಿಎಲ್‌ಎಫ್) ಹೇಳಿದೆ. “ಮಣಿಪುರದಲ್ಲಿ ಅನೇಕ ಕ್ರೈಸ್ತರಿದ್ದಾರೆ. ಭಾನುವಾರವು ರಜೆಯ ದಿನವಾಗಿದೆ. ಅಲ್ಲದೆ, ‘ಈಸ್ಟರ್’ ದಿನವೂ ಆಗಿದೆ” ಎಂದು ಐಟಿಎಲ್‌ಎಫ್‌ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ನಾಗಾ ಸಮುದಾಯದ ವಿದ್ಯಾರ್ಥಿ ಸಂಘಟನೆ ‘ಪೌಮೈ ನಾಗಾ ತ್ಸೈಡೌಮೈ ಮಿ’ ಕೂಡ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದೆ.

ಈ ಆದೇಶವು ಹಿಂದೂ-ಬಹುಸಂಖ್ಯಾತ ಮೈಥೇಯಿ ಮತ್ತು ಕ್ರೈಸ್ತ ಬಹುಸಂಖ್ಯಾತ ಕುಕಿ-ನಾಗಾ ಸಮುದಾಯಗಳ ನಡುವಿನ ಹಳೆಯ ಹಿಂಸಾಚಾರಕ್ಕೆ ಮತ್ತೆ ಪ್ರಚೋದನೆ ನೀಡುವಂತಿದೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ಮೇ 3 ರಂದು ಮಣಿಪುರದಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಲ್ಲಿ ಈವರೆಗೆ 200ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದಾರೆ. ಕುಕಿ ಸಮುದಾಯದ ಮಹಿಲೆಯವರ ಮೇಲೆ ಅಮಾನವೀಯ ದೌರ್ಜನ್ಯ, ಅತ್ಯಾಚಾರಗಳು ನಡೆದಿವೆ. ಹಿಂಸಾಚಾರದ ಕಾರಣದಿಂದಾಗಿ 50,000ಕ್ಕೂ ಹೆಚ್ಚು ಜನರನ್ನು ತಮ್ಮೂರುಗಳನ್ನು ತೊರೆದು, ವಲಸೆ ಹೋಗಿದ್ದಾರೆ ಮತ್ತು ಸ್ಥಳಾಂತರಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ...

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...