ಕೇಜ್ರಿವಾಲ್ ಫೋನ್‌ನಿಂದ ಲೋಕಸಭಾ ಚುನಾವಣೆಗೆ ಎಎಪಿ ತಂತ್ರದ ವಿವರ ಪಡೆಯಲು ಇಡಿ ಯತ್ನಿಸುತ್ತಿದೆ: ಅತಿಶಿ 

Date:

Advertisements

ಜಾರಿ ನಿರ್ದೇಶನಾಲಯವು (ಇಡಿ) ಬಿಜೆಪಿಯ ರಾಜಕೀಯ ಅಸ್ತ್ರವಾಗಿ ಕೆಲಸ ಮಾಡುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಫೋನ್ಅನ್ನು ಪರಿಶೀಲಿಸುವ ಮೂಲಕ ಎಎಪಿಯ ಲೋಕಸಭಾ ಚುನಾವಣಾ ಕಾರ್ಯತಂತ್ರದ ವಿವರಗಳನ್ನು ಪಡೆಯಲು ಯತ್ನಿಸುತ್ತಿದೆ ಎಂದು ಎಎಪಿ ಹಿರಿಯ ನಾಯಕಿ, ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ.

ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಮಾರ್ಚ್‌ 21ರಂದು ಬಂಧಿಸಿದೆ. ಅವರನ್ನು ಏಪ್ರಿಲ್ 1ರವರೆಗೆ ಕಸ್ಟಡಿಗೆ ತೆಗೆದುಕೊಂಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅತಿಶಿ, “ಕೇಜ್ರಿವಾಲ್ ಅವರ ಮೊಬೈಲ್‌ಅನ್ನು ಪರಿಶೀಲಿಸಲು ಇಡಿ ಒತ್ತಾಯಿಸುತ್ತಿದೆ. ಆ ಮೊಬೈಲ್ ಕೆಲವು ತಿಂಗಳ ಹಿಂದೆಯಷ್ಟೇ ಖರೀಸಲಾಗಿದೆ. ಅಬಕಾರಿ ನೀತಿ ರೂಪಿಸಿದಾಗ ಈ ಮೊಬೈಲ್ ಇರಲಿಲ್ಲ. ಆದರೂ, ಅದನ್ನು ಪರಿಶೀಲಿಸಲು ಇಡಿ ಯತ್ನಿಸುತ್ತಿದೆ. ಇದು ಈ ಸಂಸ್ಥೆಯು ಬಿಜೆಪಿಯ ‘ರಾಜಕೀಯ ಅಸ್ತ್ರ’ವಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಸಾಬೀತು ಮಾಡುತ್ತದೆ” ಎಂದು ಆರೋಪಿಸಿದ್ದಾರೆ.

Advertisements

“ವಾಸ್ತವವಾಗಿ, ಕೇಜ್ರಿವಾಲ್ ಅವರ ಮೊಬೈಲ್‌ನಲ್ಲಿ ಏನಿದೆ ಎಂಬುದನ್ನು ತಿಳಿಯಲು ಇಡಿ ಬಯಸುತ್ತಿಲ್ಲ. ಬದಲಾಗಿ, ಬಿಜೆಪಿ ಬಯಸುತ್ತಿದೆ. ಅಬಕಾರಿ ನೀತಿಯನ್ನು 2021-22ರಲ್ಲಿ ಜಾರಿಗೆ ತರಲಾಗಿತ್ತು. ಕೇಜ್ರಿವಾಲ್ ಅವರ ಬಳಿ ಈಗಿರುವ ಫೋನ್ ಕೆಲವೇ ತಿಂಗಳ ಹಿಂದೆಯಷ್ಟೇ ಖರೀದಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

“ಕೇಜ್ರಿವಾಲ್ ಅವರ ಹೊಸ ಫೋನ್‌ನ ಪಾಸ್‌ವರ್ಡ್‌ಅನ್ನು ಇಡಿ ಕೇಳುತ್ತಿದೆ. ಯಾರೆಂದರೆ, ಅದರಲ್ಲಿ ಲೋಕಸಭಾ ಚುನಾವಣೆಗೆ ಎಎಪಿ ಕಾರ್ಯತಂತ್ರ, ಪ್ರಚಾರ ಯೋಜನೆಗಳು, ‘ಇಂಡಿಯಾ’ ಮೈತ್ರಿಕೂಟದ ನಾಯಕರ ಜೊತೆಗಿನ ಮಾತುಕತೆಗಳು ಹಾಗೂ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳ ಕಾರ್ಯತಂತ್ರದ ಬಗ್ಗೆ ಮಾಹಿತಿಯನ್ನು ಹುಡುಕಲು ಬಯಸಿದೆ” ಎಂದು ದೂರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X