ಬಿಜೆಪಿ ಸೇರದಿದ್ದರೆ ಒಂದು ತಿಂಗಳಲ್ಲೇ ನಮ್ಮ ಬಂಧನ: ಎಎಪಿ ನಾಯಕಿ ಅತಿಶಿ

Date:

Advertisements

“ಬಿಜೆಪಿ ಸೇರುವಂತೆ ನಮ್ಮ ಮೇಲೆ ಒತ್ತಡ ಹಾಕಲಾಗುತ್ತಿದೆ. ಬಿಜೆಪಿ ಸೇರದಿದ್ದರೆ ಒಂದು ತಿಂಗಳ ಒಳಗಾಗಿ ನಮ್ಮ ಬಂಧನ ಮಾಡಲಾಗುವುದು ಎಂದು ಬೆದರಿಕೆ ಹಾಕಲಾಗುತ್ತಿದೆ” ಎಂದು ದೆಹಲಿ ಹಣಕಾಸು ಸಚಿವೆ, ಎಎಪಿ ನಾಯಕಿ ಅತಿಶಿ ಮರ್ಲೆನಾ ಆರೋಪಿಸಿದರು.

ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಸಚಿವೆ ಅತಿಶಿ, “ನೀವು ಬಿಜೆಪಿ ಸೇರ್ಪಡೆಯಾಗಿ ನಿಮ್ಮ ರಾಜಕೀಯ ಜೀವನ ಕಾಪಾಡಿಕೊಳ್ಳಿ. ಬಿಜೆಪಿ ಸೇರ್ಪಡೆಯಾಗದಿದ್ದರೆ, ಇಡಿ ನಿಮ್ಮನ್ನು ಬಂಧಿಸಲಿದೆ ಎಂದು ನನ್ನ ಆತ್ಮೀಯರ ಮೂಲಕ ನನಗೆ ತಿಳಿಸಿದೆ” ಎಂದು ಹೇಳಿದರು.

“ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಆಮ್‌ ಆದ್ಮಿ ಪಕ್ಷವನ್ನು ಮತ್ತು ಅದರ ಎಲ್ಲ ನಾಯಕರನ್ನು ಸೋಲಿಸಲು, ನಾಶ ಮಾಡಲು ನಿರ್ಧಾರ ಮಾಡಿದ್ದಾರೆ. ಈ ಹಿಂದೆ ಪ್ರಮುಖ ನಾಯಕರನ್ನು ಬಂಧಿಸಿ ಜೈಲಿಗಟ್ಟಿದೆ. ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಅವರನ್ನು ಬಂಧಿಸಲಾಗಿದೆ. ಈಗ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ” ಎಂದರು.

Advertisements

“ಈಗ ಲೋಕಸಭೆ ಚುನಾವಣೆಗೂ ಮುನ್ನ ಎಎಪಿಯ ನಾಲ್ವರು ನಾಯಕರನ್ನು ಬಂಧಿಸಲು ಬಿಜೆಪಿ ಮುಂದಾಗಿದೆ. ಒಂದು ತಿಂಗಳೊಳಗೆ ನನ್ನನ್ನು, ಸೌರಬ್ ಭಾರದ್ವಾಜ್, ದುರ್ಗೇಶ್ ಪಾಟಕ್, ರಾಘವ್ ಚಡ್ಡಾ ಅವರನ್ನು ಬಂಧಿಸಲಿದೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?  ಕೇಜ್ರಿವಾಲ್ ಫೋನ್‌ನಿಂದ ಲೋಕಸಭಾ ಚುನಾವಣೆಗೆ ಎಎಪಿ ತಂತ್ರದ ವಿವರ ಪಡೆಯಲು ಇಡಿ ಯತ್ನಿಸುತ್ತಿದೆ: ಅತಿಶಿ 

“ಬಿಜೆಪಿಯು ಅರವಿಂದ್ ಕೇಜ್ರಿವಾಲ್‌ ಅವರನ್ನು ಬಂಧಿಸಿದರೆ ಎಎಪಿ ಸಂಪೂರ್ಣವಾಗಿ ನಾಶವಾಗಲಿದೆ ಎಂದುಕೊಂಡಿತ್ತು. ಆದರೆ ಭಾನುವಾರದ ರ್‍ಯಾಲಿಯಿಂದಾಗಿ, ಪ್ರತಿ ದಿನ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ನಾಲ್ವರು ನಾಯಕರನ್ನು ಬಂಧಿಸಿದರೆ ಸಾಲದು ಎಂದು ಬಿಜೆಪಿಗೆ ತಿಳಿದಿದೆ. ಆದ್ದರಿಂದಾಗಿ ಈಗ ಮತ್ತೆ ನಾಲ್ವರು ನಾಯಕರನ್ನು ಬಂಧಿಸಲು ಮುಂದಾಗಿದೆ” ಎಂದು ಹೇಳಿದರು.

“ನಾವು ಬಿಜೆಪಿಯ ಬೆದರಿಕೆಯಿಂದ ಆತಂಕಕ್ಕೆ ಒಳಗಾಗುವವರಲ್ಲ. ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಾವು ಈ ದೇಶವನ್ನು ಉಳಿಸಲು, ದೇಶದ ಸಂವಿಧಾನ ಉಳಿಸಲು ಕೆಲಸ ಮಾಡುತ್ತಿರುತ್ತೇವೆ. ನೀವು ಒಬ್ಬರನ್ನು ಬಂಧಿಸಿ ಜೈಲಿಗೆ ಹಾಕಿದರೆ, ಮತ್ತೆ ಹತ್ತು ಜನರು ಅರವಿಂದ್ ಕೇಜ್ರಿವಾಲ್ ಪರವಾಗಿ ಹೋರಾಡಲಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಇನ್ನು ಭಾನುವಾರ ಟ್ವೀಟ್ ಮಾಡಿ ಎಎಪಿ ನಾಯಕಿ ಅತಿಶಿ ಮರ್ಲೆನಾ ಸ್ಫೋಟಕ ಮಾಹಿತಿ ನೀಡುವುದಾಗಿ ತಿಳಿಸಿದ್ದರು. ಈ ನಡುವೆ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದಾಗ ಅತಿಶಿ ಹೆಸರು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X