ಚುನಾವಣೆ 2023 | 10 ದಿನಗಳಲ್ಲಿ 38 ಕೋಟಿ ದಾಖಲೆ ಮುದ್ರಣಕ್ಕೆ ಮುಂದಾದ ಆಯೋಗ

Date:

ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದೆ. ಮತದಾರರು ಮತ್ತು ಚುನಾವಣಾ ಅಧಿಕಾರಿಗಳಿಗೆ ವಿತರಿಸುವುದಕ್ಕಾಗಿ ಮತದಾರ ಚೀಟಿ ಮತ್ತು ಅಗತ್ಯ ದಾಖಲೆಗಳನ್ನು ಮುದ್ರಿಸಲು ಚುನಾವಣಾ ಅಯೋಗ ಮುಂದಾಗಿದೆ. ಮುಂದಿನ 10 ದಿನಗಳಲ್ಲಿ 38 ಕೋಟಿ ದಾಖಲೆಗಳನ್ನು ಮುದ್ರಿಸಲಾಗುತ್ತದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

ಫೋಟೋಗಳುಳ್ಳ ಮತದಾರ ಗುರುತಿನ ಚೀಟಿ (ಇಪಿಐಸಿ), ಮತದಾರರ ಪಟ್ಟಿಗಳು, ಪೂರಕ ಪಟ್ಟಿಗಳು ಮತ್ತು ವೋಟರ್ ಸ್ಲಿಪ್‌ಗಳನ್ನು 10 ದಿಗನಳಲ್ಲಿ ಮುದ್ರಿಸುವ ಕಠಿಣ ಕೆಲಸವನ್ನು ಆಯೋಗ ಮುಂದಿಟ್ಟುಕೊಂಡಿದೆ. ಜೊತೆಗೆ, ಅವುಗಳನ್ನು ಅಂತಿಮ ಬಳಕೆದಾರರಿಗೆ ಸಮಯಕ್ಕೆ ಸರಿಯಾಗಿ ತಲುಪಿಸಲಾಗುತ್ತದೆ ಎಂದೂ ಆಯೋಗ ಹೇಳಿದೆ.

“ಹೊಸ ಮತದಾರರಿಗೆ ವಿತರಿಸಲು 18 ಲಕ್ಷ ಮತದಾರ ಗುರುತಿನ ಚೀಟಿಗಳನ್ನು ಮುದ್ರಿಸಬೇಕು. 8 ಕೋಟಿ ಪುಟಗಳ ಮತದಾರರ ಪಟ್ಟಿಗಳನ್ನು ಮತಗಟ್ಟೆಗಳಿಗೆ ಕಳುಹಿಸಬೇಕು ಮತ್ತು 30 ಕೋಟಿಗೂ ಹೆಚ್ಚು ಮತದಾರರ ಪಟ್ಟಿಗಳನ್ನು ಮುದ್ರಿಸಬೇಕು” ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮತದಾರರು ಮತ ಚಲಾಯಿಸಲು ತೆರಳುವಾಗ ನೀಡಲಾಗುವ ಮತದಾರ ಗುರುತಿನ ಚೀಟಿಯ ನಕಲನ್ನು A4 ಗಾತ್ರದ ಸುಮಾರು 20,000 ಪುಟಗಳಲ್ಲಿ ಮುದ್ರಿಸಬೇಕು. 18 ಲಕ್ಷ ಹೊಸ ಮತದಾರರ ಗುರುತಿನ ಚೀಟಿಗಳ ಪೈಕಿ, ಈಗಾಗಲೇ 13 ಲಕ್ಷ ಕಾರ್ಡ್‌ಗಳನ್ನು ಮುದ್ರಿಸಿದ್ದೇವೆ. ಇವುಗಳಲ್ಲಿ 4.4 ಲಕ್ಷ ಕಾರ್ಡ್‌ಗಳು ರವಾನೆಗೆ ಸಿದ್ಧವಾಗಿವೆ. ಇನ್ನೆರಡು ದಿನಗಳಲ್ಲಿ ಉಳಿದ 5 ಲಕ್ಷ ಕಾರ್ಡ್‌ಗಳನ್ನು ಶೀಘ್ರದಲ್ಲೇ ಮುದ್ರಿಸಲಾಗುವುದು. ಪ್ರತಿದಿನ ಸುಮಾರು 3 ರಿಂದ 3.5 ಲಕ್ಷ ಕಾರ್ಡ್‌ಗಳನ್ನು ಮುದ್ರಿಸುತ್ತಿದ್ದೇವೆ,” ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಿ ಎರಡು ಸೀಟು ತರಲಿ: ಎಚ್‌ಡಿಕೆ ಸವಾಲು

“ಬೆಂಗಳೂರಿನ ವ್ಯಾಪ್ತಿಯಲ್ಲಿ ಗುರುತಿನ ಚೀಟಿ ಮತ್ತು ಪಟ್ಟಿಗಳನ್ನು 24 ಗಂಟೆಗಳ ಒಳಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇವೆ. ಇತರ ನಗರ ಕೇಂದ್ರಗಳಿಗೆ ಎರಡು ದಿನಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಮೂರು ದಿನಗಳಲ್ಲಿ ತಲುಪಿಸಲಾಗುತ್ತದೆ,” ಎಂದಿದ್ದಾರೆ.

ಬೆಂಗಳೂರಿನಲ್ಲಿ, ಈಗಾಗಲೇ ಮಲ್ಲೇಶ್ವರಂ, ಬಸವನಗುಡಿ, ರಾಜಾಜಿನಗರ ಮತ್ತು ಗಾಂಧಿನಗರದಲ್ಲಿ ಮತದಾರ ಗುರುತಿನ ಚೀಟಿಗಳನ್ನು ರವಾನಿಸಿದೆ. ಚಾಮರಾಜಪೇಟೆ, ಚಿಕ್ಕಪೇಟೆ, ಗೋವಿಂದರಾಜನಗರ, ಸಿವಿ ರಾಮನ್ ನಗರ ಮತ್ತು ಮಹದೇವಪುರ ಕ್ಷೇತ್ರಗಳ ಮತದಾರರಿಗೆ ಗುರುತಿನ ಚೀಟಿಗಳನ್ನು ಪೋಸ್ಟ್‌ ಮಾಡುವ ಕೆಲಸ ಆರಂಭವಾಗಿದೆ. ಏಪ್ರಿಲ್ 10ರೊಳಗೆ ಮುದ್ರಣ ಮತ್ತು ರವಾನೆ ಕೆಲಸವನ್ನು ಪೂರ್ಣಗೊಳಿಸುವ ಗುರಿ ಇದೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರೈತ ವಿರೊಧಿ ಮೋದಿ, ಬಿಜೆಪಿ, ಜೆಡಿಎಸ್ ಸೋಲಿಸಿ; ರೈತ ಸಂಘ ಕರೆ

ಕೃಷಿ ಬಿಕ್ಕಟ್ಟಿಗೆ ಕಾರಣವಾದ ರೈತ ವಿರೊಧಿ ಮೋದಿ, ಬಿಜೆಪಿ ಮತ್ತು ಮಿತ್ರ...

ದಾವಣಗೆರೆ | ವಿಪರೀತ ಸುಡುವ ಬಿಸಿಲು; ಸಾಂಕ್ರಾಮಿಕ ರೋಗಗಳ ಬಗ್ಗೆ ವೈದ್ಯರ ಎಚ್ಚರಿಕೆ

ವಿಪರೀತ ಸುಡುವ ಬಿಸಿಲಿನ ಹಿನ್ನಲೆಯಲ್ಲಿ ಸುಮಾರು 13 ಮಂದಿಗೆ ವಾಂತಿ ಬೇಧಿ...

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...