ಚುನಾವಣೆ 2023 | ಕಾಂಗ್ರೆಸ್‌ನ ಎರಡನೇ ಪಟ್ಟಿ ಬಿಡುಗಡೆ: ಘೋಷಣೆಯಾಗದ ಕೋಲಾರ ಕ್ಷೇತ್ರದ ಅಭ್ಯರ್ಥಿ ಹೆಸರು

Date:

Advertisements
  • ಮೇಲುಕೋಟೆ ಕ್ಷೇತ್ರದಲ್ಲಿ ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ
  • ಗುಬ್ಬಿಯಿಂದ ಶ್ರೀನಿವಾಸ್, ಗುರುಮಿಠಕಲ್ ನಿಂದ ಬಾಬುರಾವ್‌ಗೆ ಟಿಕೆಟ್

ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಮೊದಲು ಪಕ್ಷ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಇದೀಗ 42 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. 

ಧಾರವಾಡ ವಿಧಾನಸಭಾ ಕ್ಷೇತ್ರದಿಂದ ವಿನಯ್‌ ಕುಲಕರ್ಣಿ ಅವರನ್ನು ಅಖಾಡಕ್ಕಿಳಿಸಿದರೆ, ಕಲಘಟಗಿಯಿಂದ ಸಂತೋಷ್ ಲಾಡ್‌, ತೀರ್ಥಹಳ್ಳಿಯಿಂದ ಕಿಮ್ಮನೆ ರತ್ನಾಕರ್, ಗುಬ್ಬಿ ಕ್ಷೇತ್ರದಿಂದ ಎಸ್‌ ಆರ್  ಶ್ರೀನಿವಾಸ್‌, ಕಡೂರ್‌ನಿಂದ ಆನಂದ, ನಿಪ್ಪಾಣಿ ಕಾಕಾ ಸಾಹೇಬ್ ಪಾಟೀಲ್‌, ಗೋಕಾಕ್‌ನಿಂದ ಮಹಾಂತೇಶ್ ಕಡಾಡಿ, ಬೀಳಗಿಯಿಂದ ಜೆ ಟಿ ಪಾಟೀಲ್‌, ಮುಧೋಳ್‌ದಿಂದ ರಾಮಪ್ಪ ತಿಮ್ಮಾಪುರ್ ಅವರಿಗೆ ಟಿಕೆಟ್ ನೀಡಲಾಗಿದೆ.

Advertisements

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಬಾಬುರಾವ್ ಚಿಂಚನಸೂರು ಅವರಿಗೆ ಗುರುಮಠಕಲ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಮಡಿಕೇರಿಯಲ್ಲಿ ಎ ಮಂಜು ಪುತ್ರ ಮಂಥರ್ ಗೌಡ ಅವರಿಗೆ ಟಿಕೆಟ್ ನೀಡಲಾಗಿದೆ. ಹೊಳಲ್ಕೆರೆ ಮೀಸಲು ಕ್ಷೇತ್ರದಿಂದ ಎಚ್‌ ಆಂಜನೇಯ ಅವರಿಗೆ ಟಿಕೆಟ್ ನೀಡಲಾಗಿದೆ.

ಪುಲಿಕೇಶಿ ನಗರ ಮತ್ತು ಕೋಲಾರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಇನ್ನೂ ನಿಗೂಢವಾಗಿ ಉಳಿದಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಕಾಂಗ್ರೆಸ್ ಅಧಿಕೃತ ಬೆಂಬಲ ಘೋಷಿಸಿದೆ.

ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ವೈಎಸ್‌ವಿ ದತ್ತಾ ಅವರಿಗೆ ಟಿಕೆಟ್ ನಿರಾಕರಿಸಿ ಆನಂದ ಅವರಿಗೆ ಮಣೆ ಹಾಕಲಾಗಿದೆ. ದತ್ತಾ ಮತ್ತು ಆನಂದ ಅವರ ನಡುವೆ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆದಿತ್ತು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಾರೆ ಎನ್ನಲಾಗಿದ್ದ ಬಾದಾಮಿ ವಿಧಾನಸಭಾ ಕ್ಷೇತ್ರ ಟಿಕೆಟ್ ಘೊಷಣೆಯಾಗಿದೆ. ಭೀಮಾಸೇನ್‌ ಬಿ ಚಿಮ್ಮಣಕಟ್ಟಿ ಅವರಿಗೆ ಬಾದಾಮಿ ಟಿಕೆಟ್‌ ನೀಡಿದರೆ, ಕಲಬುರಗಿ ದಕ್ಷಿಣ ಕ್ಷೇತ್ರದಿಂದ ಅಲ್ಲಮಪ್ರಭು ಪಾಟೀಲ್‌ ಅವರಿಗೆ ಕಾಂಗ್ರೆಸ್‌ನಿಂದ ಅಖಾಡಕ್ಕಿಳಿದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಇಲ್ಲಿದೆ…WhatsApp Image 2023 04 06 at 11.01.26 AM 1WhatsApp Image 2023 04 06 at 11.01.26 AM

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X