ಚುನಾವಣಾ ಬಾಂಡ್ | ಲಕ್ಷ ಕೋಟಿ ಮೌಲ್ಯದ ಗುತ್ತಿಗೆ ಪಡೆದಿದ್ದ ಕಂಪನಿ ಗರಿಷ್ಠ ಬಾಂಡ್‌ಗಳ ಖರೀದಿದಾರ

Date:

Advertisements

ಚುನಾವಣಾ ಬಾಂಡ್‌ ಕುರಿತು ಎಸ್‌ಬಿಐ ನೀಡಿದ್ದ ಮಾಹಿತಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಅತೀ ಹೆಚ್ಚು ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಕಂಪನಿಗಳ ಪಟ್ಟಿಯಲ್ಲಿ ‘ಮೇಘಾ ಇಂಜಿನಿಯರಿಂಗ್ ಅಂಡ್ ಇನ್‍ಫ್ರಾಸ್ಟ್ರಕ್ಚರ್ ಲಿಮಿಟೆಡ್’ ಎರಡನೇ ಸ್ಥಾನದಲ್ಲಿದೆ. ಈ ಕಂಪನಿ 966 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿ, ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ.

ವಿಶೇಷ ಅಂದ್ರೆ, ಈ ಕಂಪನಿ ಸರ್ಕಾರಗಳಿಂದ ಲಕ್ಷ ಕೋಟಿ ರೂ. ಮೌಲ್ಯದ ಕಾಮಗಾರಿಗಳನ್ನು ಗುತ್ತಿಗೆ ಪಡೆದುಕೊಂಡಿದೆ. ಹೈದರಾಬಾದ್ ಮೂಲದ ಈ ಕಂಪನಿ ಹಲವು ಸರ್ಕಾರಿ ಯೋಜನೆಗಳ ಗುತ್ತಿಗೆ ಪಡೆದಿದೆ. ಗಮನಾರ್ಹ ಸಂಗತಿ ಅಂದ್ರೆ, 2023ರ ಏಪ್ರಿಲ್‌ನಲ್ಲಿ ಕಂಪನಿಯು 140 ಕೋಟಿ ರೂ. ದೇಣಿಗೆ ನೀಡಿದೆ. ಇದಾಗಿ ಒಂದು ತಿಂಗಳ ಬಳಿಕ ಕಂಪನಿಯು ಕೇಂದ್ರ ಸರ್ಕಾರದಿಂದ 14,400 ಕೋಟಿ ರೂ. ವೆಚ್ಚದ ಥಾಣೆ-ಬೊರಿವಲಿ ಅವಳಿ ಸುರಂಗ ಯೋಜನೆಯ ಗುತ್ತಿಗೆ ಪಡೆದಿದೆ.

ಅಂತೆಯೇ, 1.15 ಲಕ್ಷ ಕೋಟಿ ರೂ. ಮೌಲ್ಯದ ತೆಲಂಗಾಣ ಕಾಳೇಶ್ವರಂ ಏತ ನೀರಾವರಿ ಯೋಜನೆ ಸೇರಿದಂತೆ ನಾನಾ ಯೋಜನೆಗಳ ಕಾಮಗಾರಿಗಳನ್ನು ಗುತ್ತಿಗೆ ಪಡೆದುಕೊಂಡಿದೆ.

Advertisements

ಅಂದಹಾಗೆ, ಮೇಘಾ ಇಂಜಿನಿಯರಿಂಗ್ ಅಂಡ್ ಇನ್‍ಫ್ರಾಸ್ಟ್ರಕ್ಚರ್ ಲಿಮಿಟೆಡ್ ಕಂಪನಿಯು ಎಸ್‌ಬಿಐನಲ್ಲಿ ತಲಾ ಒಂದು ಕೋಟಿ ರೂ. ಮೌಲ್ಯದ 966 ಬಾಂಡ್‍ಗಳನ್ನು ಖರೀದಿಸಿ, ರಾಜಕೀಯ ಪಕ್ಷಗಳಿಗೆ ನೀಡಿದೆ. ಆದರೆ, ಎಸ್‌ಬಿಐ ಸರಿಯಾದ ಮಾಹಿತಿಯನ್ನು ಒದಗಿಸದ ಕಾರಣ, ಯಾವ ಪಕ್ಷಕ್ಕೆ ಎಷ್ಟು ಬಾಂಡ್‌ಗಳನ್ನು ನೀಡಿದೆ ಎಂಬುದು ಗೊತ್ತಾಗಿಲ್ಲ.

ಸದ್ಯ, ಸರಿಯಾದ ಮಾಹಿತಿ ಒದಗಿಸದ ಎಸ್‌ಬಿಐಅನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದ್ದು, ಯಾವ ಕಂಪನಿ, ಯಾವ ಪಕ್ಷಕ್ಕೆ ಬಾಂಡ್‌ ನೀಡಿದೆ ಎಂಬ ಮಾಹಿತಿಯನ್ನು ಮಾರ್ಚ್‌ 16ರ ಶನಿವಾರ ಒದಗಿಸಬೇಕು ಎಂದು ತಾಕೀತು ಮಾಡಿದೆ. ಹೀಗಾಗಿ, ಶನಿವಾರ ಯಾವೆಲ್ಲ ಕಂಪನಿಗಳು ಯಾವ ಪಕ್ಷಗಳಿಗೆ ದೇಣಿಗೆ ನೀಡಿವೆ ಎಂಬುದು ಗೊತ್ತಾಗುವ ಸಾಧ್ಯತೆ ಇದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X