344 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

Date:

Advertisements

ಸಕ್ರಿಯವಾಗಿಲ್ಲದ ರಾಜಕೀಯ ಪಕ್ಷಗಳಿಗೆ ಭಾರತದ ಚುನಾವಣಾ ಆಯೋಗವು (ECI) ಇತ್ತೀಚೆಗೆ ನೋಟಿಸ್‌ ನೀಡಿತ್ತು. ಇದೀಗ, ಸಕ್ರಿಯವಾಗಿಲ್ಲದ 344 ರಾಜಕೀಯ ಪಕ್ಷಗಳನ್ನು ನೋಂದಾಯಿತ ಪಟ್ಟಿಯಿಂದ ಕೈಬಿಟ್ಟಿರುವಾಗಿ ಮಾಹಿತಿ ನೀಡಿದೆ.

2019ರಿಂದ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸದೆ, ಚುನಾವಣಾ ಪ್ರಕ್ರಿಯೆಗಳಿಂದ ಹೊರಗುಳಿದಿರುವ ಪಕ್ಷಗಳನ್ನು ನೋಂದಾಯಿತ ಗುರುತಿಸಿಕೊಳ್ಳದ ರಾಜಕೀಯ ಪಕ್ಷಗಳು (Registered Unrecognized Political Parties – RUPP) ಎಂದು ಆಯೋಗವು ಹೆಸರಿಸಿದೆ. ಇದರ ಅಡಿಯಲ್ಲಿ ದೇಶಾದ್ಯಂತ 345 ಪಕ್ಷಗಳನ್ನು ಆಯೋಗವು ಗುರುತಿಸಿದ್ದು, ಅವುಗಳಲ್ಲಿ 344 ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕಿದೆ. ಈ ಪಟ್ಟಿಯನ್ನು ಚುನಾವಣಾ ಆಯೋಗವು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿರದ ಪಕ್ಷಗಳ ರದ್ದತಿಯ ತನ್ನ ಕ್ರಮವು ಚುನಾವಣಾ ವ್ಯವಸ್ಥೆಯ ಶುದ್ಧೀಕರಣ, ಆದಾಯ ತೆರಿಗೆ ವಿನಾಯಿತಿಯ ದುರ್ಬಳಕೆ ತಡೆಗಟ್ಟುವಿಕೆ ಹಾಗೂ ಚುನಾವಣೆಯ ಪಾರದರ್ಶಕತೆಯನ್ನು ಖಾತ್ರಿಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಆಯೋಗ ಹೇಳಿಕೊಂಡಿದೆ.

Advertisements

ಇದನ್ನು ಓದಿದ್ದೀರಾ? ಮತಗಳ್ಳತನ | ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಕೈಬಿಡಲಾದ ಈ ಪಕ್ಷಗಳು ಕಳೆದ ಆರು ವರ್ಷಗಳಲ್ಲಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಭೌತಿಕವಾಗಿ ಎಲ್ಲಿಯೂ ಕಚೇರಿಗಳನ್ನು ಕೂಡ ಹೊಂದಿಲ್ಲ ಎಂದು ಆಯೋಗ ಹೇಳಿದೆ. 334 ಪಕ್ಷಗಳ ಪೈಕಿ ಕರ್ನಾಟಕದ 12 ಪಕ್ಷಗಳೂ ಇವೆ. ದೇಶಾದ್ಯಂತ ಒಟ್ಟು 2,520 ರಾಜಕೀಯ ಪಕ್ಷಗಳಿವೆ. ಅವುಗಳಲ್ಲಿ 6 ರಾಷ್ಟ್ರೀಯ ಪಕ್ಷ ಎಂಬ ಸ್ಥಾನಮಾನ ಪಡೆದಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X