ಲೋಕಸಭಾ ಚುನಾವಣೆಗೂ ಮುನ್ನ ಚುನಾವಣಾ ಆಯುಕ್ತ ಹುದ್ದೆಗೆ ರಾಜೀನಾಮೆ ನೀಡಿದ ಅರುಣ್ ಗೋಯೆಲ್

Date:

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವ ನಡುವೆಯೇ, ದಿಡೀರ್ ಬೆಳವಣಿಗೆಯೊಂದರಲ್ಲಿ ಚುನಾವಣಾ ಆಯುಕ್ತರಾಗಿರುವ ಅರುಣ್ ಗೋಯೆಲ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಇವರ ಅಧಿಕಾರಾವಧಿ 2027ರವರೆಗೆ ಇತ್ತಾದರೂ, ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದು, ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ವರದಿಯಾಗಿದೆ. ಗೋಯೆಲ್ ರಾಜೀನಾಮೆಯಿಂದಾಗಿ ಇದೀಗ ಚುನಾವಣಾ ಸಮಿತಿಯಲ್ಲಿ ಎರಡು ಚುನಾವಣಾ ಆಯುಕ್ತ ಸ್ಥಾನಗಳು ಖಾಲಿಯಾಗಿದೆ.

ಗೋಯೆಲ್ ವಾರು, ನಿವೃತ್ತ ಪಂಜಾಬ್-ಕೇಡರ್ ಐಎಎಸ್ ಅಧಿಕಾರಿಯಾಗಿದ್ದು, 2022ರ ನವೆಂಬರ್‌ನಲ್ಲಿ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚುನಾವಣಾ ಬಾಂಡ್‌ನ ಬಗ್ಗೆ ಅರ್ಜಿ ಸಲ್ಲಿಸಿದ್ದವರಲ್ಲೋರ್ವರಾಗಿರುವ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆ, ಅರುಣ್ ಗೋಯೆಲ್ ನೇಮಕವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಇದನ್ನು ಓದಿದ್ದೀರಾ? ರಾಜಕೀಯದಲ್ಲಿ ದ್ವೇಷ-ಅಸೂಯೆ ಇದ್ದೇ ಇರುತ್ತೆ: ‘ಟಿಕೆಟ್ ಮಿಸ್’ ಸುದ್ದಿಯ ಬೆನ್ನಲ್ಲೇ ಪ್ರತಾಪ್ ಸಿಂಹ ಹೇಳಿಕೆ

ಮುಂದಿನ ಲೋಕಸಭೆ ಚುನಾವಣೆಯು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯುವ ನಿರೀಕ್ಷೆಯಿದೆ. ಪ್ರಸ್ತುತ ಸರ್ಕಾರದ ಅವಧಿಯು 2024ರ ಮೇನಲ್ಲಿ ಕೊನೆಗೊಳ್ಳಲಿದೆ. ಸದ್ಯ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಎಫ್‌ಐಆರ್

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್...