ಚುನಾವಣೋತ್ತರ ಸಮೀಕ್ಷೆ | ಹರಿಯಾಣದಲ್ಲಿ ಬಿಜೆಪಿಯ ಹುಟ್ಟಡಗಿಸುತ್ತೆ ಕಾಂಗ್ರೆಸ್‌!

Date:

Advertisements

ಶನಿವಾರ, ಹರಿಯಾಣ ವಿಧಾನಸಭೆಗೆ ಮತದಾನ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳ ಹೊರಬೀಳುತ್ತಿವೆ. ಹರಿಯಾಣದಲ್ಲಿ ಬಿಜೆಪಿಯ 10 ವರ್ಷದ ಆಡಳಿತಕ್ಕೆ ಅಲ್ಲಿನ ಮತದಾರರು ಅಂತ್ಯ ಹಾಡಿದ್ದು, ಕಾಂಗ್ರೆಸ್‌ ಭರ್ಜರಿ ಜಯ ಸಾಧಿಸಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಅಂತೆಯೇ, ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಕಾಂಗ್ರೆಸ್‌ ಸರ್ಕಾರ ರಚಿಸಲಿದೆ ಎಂದೂ ಸಮೀಕ್ಷೆಗಳು ಹೇಳುತ್ತಿವೆ.

ಹರಿಯಾಣ ವಿಧಾಸಭೆಯಲ್ಲಿ 90 ಸ್ಥಾನಗಳಿದ್ದು, ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಸರಾಸರಿ 60 ಸ್ಥಾನಗಳನ್ನು ಗೆಲ್ಲಲಿದೆ. ಆಡಳಿತರೂಢ ಬಿಜೆಪಿ ಹೀನಾಯವಾಗಿ ಸೋಲುವ ಮೂಲಕ ಮುಖಭಂಗ ಅನುಭವಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ.

ಪೀಪಲ್ಸ್ ಪಲ್ಸ್ ಸಮೀಕ್ಷೆಯ ಪ್ರಕಾರ, ಹರಿಯಾಣದಲ್ಲಿ ಬಿಜೆಪಿಗೆ 20-32 ಸ್ಥಾನಗಳು, ಕಾಂಗ್ರೆಸ್‌ಗೆ 49-61 ಸ್ಥಾನಗಳು ಹಾಗೂ ಇತರರು 3-5 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿದೆ.

Advertisements

ಧ್ರುವ್ ರಿಸರ್ಚ್ ಪ್ರಕಾರ, ಬಿಜೆಪಿ 22-32 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 50-62 ಸ್ಥಾನಗಳನ್ನು ಗೆಲ್ಲಲಿದೆ.

NDTV ಸಮೀಕ್ಷೆಯು ಬಿಜೆಪಿಗೆ 20-32, ಕಾಂಗ್ರೆಸ್‌ಗೆ 49-61 ಸ್ಥಾನಗಳು ಬರಲಿದೆ ಎಂದು ಹೇಳಿದೆ.

ದೈನಿಕ್ ಭಾಸ್ಕರ್ ಹೇಳುವಂತೆ, ಕಾಂಗ್ರೆಸ್‌ಗೆ 44-54 ಸ್ಥಾನಗಳು ಗೆಲ್ಲಲಿದೆ. ಬಿಜೆಪಿ 25ರಿಂದ 30 ಸ್ಥಾನಗಳನ್ನು ಪಡೆಯಲಿದೆ.

ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಕಾಂಗ್ರೆಸ್‌ ಸರ್ಕಾರ ರಚಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿ ಮಾಡಿಕೊಂಡಿದ್ದು, ಉಭಯ ಪಕ್ಷಗಳು ಸರ್ಕಾರ ರಚಿಸಲಿವೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿಯೂ 90 ಸ್ಥಾನಗಳಿದ್ದು, ಅಲ್ಲಿಯೂ ಸರ್ಕಾರ ರಚನೆಗೆ ಕನಿಷ್ಠ 46 ಸ್ಥಾನಗಳ ಅಗತ್ಯವಿದೆ.

ದೈನಿಕ್‌ ಭಾಸ್ಕರ್‌ ಸಮೀಕ್ಷೆ ಪ್ರಕಾರ, ಬಿಜೆಪಿಗೆ 20-25 ಸ್ಥಾನಗಳನ್ನೂ, ಕಾಂಗ್ರೆಸ್‌ ಮೈತ್ರಿಕೂಟಕ್ಕೆ 35-40 ಸ್ಥಾನಗಳು, ಪಿಡಿಪಿಗೆ 4-7 ಸ್ಥಾನಗಳು, ಇತರರಿಗೆ 12-16 ಸ್ಥಾನಗಳನ್ನು ಗೆಲ್ಲಲಿವೆ.

ಇಂಡಿಯಾ ಟುಡೆ – ಸಿ ವೋಟರ್‌ ಸಮೀಕ್ಷೆಯ ಹೇಳುವಂತೆ, ಬಿಜೆಪಿ27-32 ಸ್ಥಾನಗಳು, ಕಾಂಗ್ರೆಸ್‌ ಮೈತ್ರಿಕೂಟವು 40-48 ಸ್ಥಾನಗಳಲ್ಲಿ ಜಯಗಳಿಸಲಿದೆ. ಪಿಡಿಪಿ 6-12 ಹಾಗೂ 6-11 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ.

ಪೀಪಲ್ಸ್‌ ಪಲ್ಸ್‌ 23-27 ಸ್ಥಾನಗಳನ್ನು ಬಿಜೆಪಿಗೆ ಸಮೀಕ್ಷೆಯಲ್ಲಿ ನೀಡಿದೆ. ಕಾಂಗ್ರೆಸ್‌ ಮೈತ್ರಿಗೆ 46-50 ಸ್ಥಾನಗಳು ಹಾಗೂ ಪಿಡಿಪಿ 7-11, ಇತರರು 4-6 ಸ್ಥಾನಗಳು ಗೆಲ್ಲುವ ಸಾಧ್ಯತೆಯಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X