ಚುನಾವಣಾ ಬಾಂಡ್ ಹಗರಣ | ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು

Date:

ಚುನಾವಣಾ ಬಾಂಡ್‌ ಹಗರಣವು ಸ್ವತಂತ್ರ್ಯ ಭಾರತದ ಅತಿ ದೊಡ್ಡ ಹಗರಣವಾಗಿದೆ. ಈ ಹಗರಣದ ಕುರಿತು ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ರಾಜಕೀಯ ಪಕ್ಷಗಳು ಮತ್ತು ಕಂಪನಿಗಳ ನಡುವಿನ ಅಪವಿತ್ರ ಮೈತ್ರಿ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ವಕೀಲರು ಮತ್ತು ಹೋರಾಟಗಾರರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಶುಕ್ರವಾರ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿರುವ ವಕೀಲರು-ಹೋರಾಟಗಾರರ ತಂಡ, “ಹಲವು ಕಂಪನಿಗಳು ಪಕ್ಷಗಳಿಗೆ ಚುನಾವಣಾ ಬಾಂಡ್‌ ಮೂಲಕ ಹಣ ನೀಡಿ, ತಮಗೆ ಬೇಕಾದ ಅನುಕೂಲಗಳನ್ನು ಪಡೆದುಕೊಂಡಿವೆ. ಆಡಳಿತಾರೂಢ ಬಿಜೆಪಿಗೆ ಹಣ ಕೊಟ್ಟು, ಕಂಪನಿಗಳು ನಾನಾ ರೀತಿಯ ನೆರವು ಪಡೆದಿವೆ. ಈ ಅಪವಿತ್ರ ಮೈತ್ರಿಯು ಬಹಿರಂಗವಾಗಬೇಕು” ಎಂದು ಒತ್ತಾಯಿಸಿದೆ.

“ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರೂ. ದೇಣಿಗೆ ಪಡೆದಿರುವ ಬಿಜೆಪಿ, ಬೃಹತ್ ಮೊತ್ತದ ಯೋಜನೆಗಳನ್ನು ತಮಗೆ ಹಣ ನೀಡಿದ ಕಂಪನಿಗಳಿಗೆ ಕೊಟ್ಟಿದೆ. ಹಲವು ಕಂಪನಿಗಳು ಬಿಜೆಪಿಗೆ ದೇಣಿಗೆ ನೀಡಿ, ತನಿಖಾ ಸಂಸ್ಥೆಗಳ ತನಿಖೆಯಿಂದ ತಪ್ಪಿಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“33 ಕಂಪನಿಗಳು ಬಿಜೆಪಿಗೆ 1,751 ಕೋಟಿ. ರೂ. ದೇಣಿಗೆ ನೀಡಿ, 3.7 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಗುತ್ತಿಗೆ ಪಡೆದಿವೆ. ತನಿಖಾ ಸಂಸ್ಥೆಗಳ ತನಿಖೆಯಿಂದ ತಪ್ಪಿಸಿಕೊಳ್ಳಲು 41 ಕಂಪನಿಗಳು ಬಿಜೆಪಿಗೆ 2,471 ಕೋಟಿ ರೂ. ದೇಣಿಗೆ ನೀಡಿವೆ. ಈ ಹಣದಲ್ಲಿ ಅರ್ಧದಷ್ಟು ಮೊತ್ತವು ಇಡಿ/ಐಟಿ ದಾಳಿಗಳ ಬಳಿಕ ಬಿಜೆಪಿಗೆ ಬಂದಿದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.

“ಈ ಹಿಂದೆ, 2ಜಿ ಹಗರಣ ಅಥವಾ ಕಲ್ಲಿದ್ದಲು ಹಗರಣದಲ್ಲಿ ಹಣದ ಅವ್ಯವಹಾರ ನಡೆದಿರಲಿಲ್ಲ. ಅದರೂ, ಆ ಎರಡು ಹಗರಣಗಳ ಕುರಿತು ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲಾಗಿತ್ತು. ಚುನಾವಣಾ ಬಾಂಡ್‌ ಯೋಜನೆಯಲ್ಲಿ ಭಾರೀ ಹಗರಣ ನಡೆದಿದೆ. ಹೀಗಾಗಿ, ಕಾರ್ಪೊರೇಟ್-ರಾಜಕೀಯ ಸಂಬಂಧ ಹಾಗೂ ಚುನಾವಣಾ ಬಾಂಡ್ ಹಗರಣದ ಬಗ್ಗೆ ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಯಾಗಬೇಕು” ಎಂದು ಪ್ರಶಾಂತ್ ಭೂಷಣ್ ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Air India A1-171 ವಿಮಾನ ಪತನದಲ್ಲಿ 117 ಮಂದಿ ಮೃತ : ದುರಂತಕ್ಕೆ ಟಾಟಾ ಗ್ರೂಪ್‌ ಸಂತಾಪ

ಗುಜರಾತಿನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ A1- 171 ವಿಮಾನ...

ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟವು ಒಪ್ಪಿಗೆ ನೀಡಿದೆ. ಶೀಘ್ರವೇ...

ಶಕ್ತಿ ಯೋಜನೆಗೆ 2 ವರ್ಷ: 474.82 ಕೋಟಿ ಮಹಿಳೆಯರ ಉಚಿತ ಪ್ರಯಾಣ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೊಜನೆ'...

ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂಬ ಶಂಕೆ; ನಾಲ್ವರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ತನ್ನ ಪತ್ನಿಯು ವಿವಾಹೇತರ ಸಂಬಂಧ ಹೊಂದಿರಬಹುದು ಎಂದು ಅನುಮಾನಗೊಂಡಿದ್ದ ವ್ಯಕ್ತಿಯೊಬ್ಬ ತಮ್ಮ...

Download Eedina App Android / iOS

X